Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುಜಿಸಿಇಟಿ ಅರ್ಜಿ ತಪ್ಪು ತಿದ್ದುಪಡಿಗೆ ಜುಲೈ 4ರಿಂದ 6ರವರೆಗೆ ಅವಕಾಶ



ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತನ್ನ ಪೋರ್ಟಲ್​​ನಲ್ಲಿ ಯುಜಿಸಿಇಟಿ-2024ರ ಅಭ್ಯರ್ಥಿಗಳ ಮಾಹಿತಿಯನ್ನು ಜೂನ್ 29ರಂದು ಪ್ರಕಟಿಸಿದೆ. ಇದರಲ್ಲಿ ಯಾವುದೇ ತಪ್ಪು ಕಂಡುಬಂದಿದ್ದರೆ ಅಂತಹ ಅಭ್ಯರ್ಥಿಗಳು ಜುಲೈ 4ರಿಂದ 6ರ ಒಳಗೆ ಮಲ್ಲೇಶ್ವರದಲ್ಲಿರುವ ಕೆಇಎ ಕಚೇರಿಗೆ ಖುದ್ದು ಹಾಜರಾಗಿ ಸರಿಪಡಿಸಿಕೊಳ್ಳಬೇಕು ಎಂದು ಸೂಚಿಸಿದೆ.


ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಯುಜಿಸಿಇಟಿ ಅರ್ಜಿಯಲ್ಲಿ ತಪ್ಪೆಸಗಿದ್ದರಿಂದ ವ್ಯತ್ಯಾಸಗಳಾಗಿದೆ. ಇದನ್ನು ಗಣನೆಗೆ ತೆಗೆದುಕೊಂಡು ಅಂತಿಮ ಆವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಮಂಗಳವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಒಂದು ಲಕ್ಷಕ್ಕಿಂತ ಒಳಗೆ ರ‍್ಯಾಂಕ್ ಹೊಂದಿರುವವರು ಜುಲೈ 4ರಂದು, 1.8 ಲಕ್ಷಕ್ಕಿಂತ ಒಳಗಿನ ರ‍್ಯಾಂಕ್‌ನವರು ಜುಲೈ 5ರಂದು ಹಾಗೂ 1.8 ಲಕ್ಷಕ್ಕಿಂತ ಮೇಲ್ಪಟ್ಟು ರ‍್ಯಾಂಕ್ ಹೊಂದಿರುವವರು ಜುಲೈ 6ರಂದು ವೆಬ್​ಸೈಟ್‌ನಲ್ಲಿ ಪ್ರಕಟಿಸಿರುವ ವೇಳಾಪಟ್ಟಿಯಂತೆ ಹಾಜರಾಗಬೇಕಿದೆ.





ಆನ್‌ಲೈನ್ ಪೋರ್ಟಲ್‌ನಲ್ಲಿ ಪ್ರಕಟಿಸಿರುವ ಮಾಹಿತಿಯಲ್ಲಿ ವ್ಯತ್ಯಾಸ ಗುರುತಿಸಿರುವ ಅಭ್ಯರ್ಥಿಗಳು ಯುಜಿಸಿಇಟಿ-2024ಕ್ಕೆ ಸಲ್ಲಿಸಿದ್ದ ಅರ್ಜಿಯ ಪ್ರತಿ, ಪ್ರವೇಶ ಪತ್ರ, ಅಗತ್ಯವಿರುವ ಎಲ್ಲಾ ಮೂಲ ದಾಖಲೆಗಳು ಮತ್ತು ಎಲ್ಲಾ ಪ್ರಮಾಣಪತ್ರಗಳ ಎರಡು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಬರಬೇಕೆಂದು ಅವರು ತಿಳಿಸಿದ್ದಾರೆ.


ಎಲ್ಲಾ ಮಾಹಿತಿ ಸರಿ ಇರುವವರು ಕೆಇಎಗೆ ಬರುವ ಅಗತ್ಯವಿಲ್ಲ. ಇಂತಹ ಅಭ್ಯರ್ಥಿಗಳು ಕಚೇರಿಗೆ ಬಂದು ಸಮಯ ಹಾಗೂ ಶ್ರಮ ವ್ಯರ್ಥ ಮಾಡಿಕೊಳ್ಳಬಾರದು. ಅಂಥವರಿಗೆ ವೆರಿಫಿಕೇಶನ್ ಸ್ಲಿಪ್ ಡೌನ್ಲೋಡ್ ಮಾಡಿಕೊಳ್ಳಲು ಸದ್ಯದಲ್ಲೇ ಕೆಇಎ ವೆಬ್‌ಸೈಟ್‌ನಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.


ಅಭ್ಯರ್ಥಿಗಳು ಅರ್ಜಿಯಲ್ಲಿ ಸಲ್ಲಿಸಿದ್ದ ವಿವರಗಳಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳಿಂದ ವೆಬ್‌ಸರ್ವಿಸ್ ಮೂಲಕ ಪಡೆದ ಮಾಹಿತಿಯನ್ನು ಪೋರ್ಟಲ್​ನಲ್ಲಿ ಪ್ರಕಟಿಸಿ ಪರಿಶೀಲಿಸಿಕೊಳ್ಳಲು ಜೂನ್ 29ರಿಂದ ಅವಕಾಶ ನೀಡಲಾಗಿತ್ತು.


 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ