LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬೆಂಗಳೂರು ಪ್ಯಾಲೇಸ್‌ ಮಸೂದೆ ಸೇರಿ 5 ವಿಧೇಯಕಗಳು ಮಂಡನೆ

ಬೆಂಗಳೂರು: ಬೆಂಗಳೂರು ಅರಮನೆ ಮೈದಾನದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವ ಉದ್ದೇಶದ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಮಸೂದೆ 2025 ಸೇರಿ ಒಟ್ಟು ಐದು ಮಸೂದೆಗಳನ್ನು ವಿಧಾನಸಭೆಯಲ್ಲಿ ಮಂಗಳವಾರ ಮಂಡಿಸಲಾಯಿತು.

ಬಳ್ಳಾರಿ ಮತ್ತು ಜಯಮಹಲ್ ರಸ್ತೆ ಅಗಲೀಕರಣಕ್ಕಾಗಿ ಬೆಂಗಳೂರು ಅರಮನೆ ಮೈದಾನದ 15.39 ಎಕರೆ ಜಾಗ ಸ್ವಾಧೀನಕ್ಕೆ ಬದಲಾಗಿ ಮೈಸೂರು ರಾಜ ಮನೆತದ ವಾರಸುದಾರರಿಗೆ ರೂ.3014 ಕೋಟಿ ವರ್ಗಾವಣೆ ಅಭಿವೃದ್ಧಿ ಹಕ್ಕುಗಳನ್ನು (ಟಿಡಿಆರ್) ಪರಿಹಾರ ನೀಡಬೇಕೆಂದು ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರದ ಈ ಮಸೂದೆ ಮಹತ್ವ ಪಡೆದುಕೊಂಡಿದೆ.

ಸುಪ್ರೀಂಕೋರ್ಟ್ ಆದೇಶ ಪಾಲೆ ಮಾಡಿದರೆ ಸರ್ಕಾರಕ್ಕೆ ಭಾರೀ ನಷ್ಟ ಉಂಟಾಗಲಿದೆ ಎಂದು ಸರ್ಕಾರ ನಿರ್ಧರಿಸಿದ್ದು, ಹೀಗಾಗಿಯೇ ಸುಗ್ರೀವಾಜ್ಞೆ ಜಾರಿಗೊಳಿಸಿತ್ತು. ಆದರೆ, ಸುಪ್ರೀಂಕೋರ್ಟ್ ಅದನ್ನು ಒಪ್ಪದೆ ಟಿಡಿಆರ್ ಪರಿಹಾರ ನೀಡುವ ಆದೇಶ ಪಾಲಿಸುವಂತೆ ಸೂಚನೆ ನೀಡಿತ್ತು. ಅದರ ನಡುವೆಯೂ ಇದೀಗ ಸುಗ್ರೀವಾಜ್ಞೆಗೆ ಕಾನೂನು ರೂಪ ನೀಡಲು ಸರ್ಕಾರ ಮುಂದಾಗಿದ್ದು, ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ವಿಧೇಯಕ 2025 ಅನ್ನು ಮಂಡಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸಚಿವ ಪ್ರಿಯಾಂಕ್ ಖರ್ಗೆಯವರು ನಿನ್ನೆ ವಿಧಾನಮಂಡಲದಲ್ಲಿ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ವಿಧೇಯಕ 2025ವನ್ನು ಮಂಡನೆ ಮಾಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ