ಹುಲಿ ಸಾವು ಸಂಬಂಧ ಮೀಣ್ಯಂ ಅರಣ್ಯ ಪ್ರದೇಶ ಸಮೀಪದ ಗ್ರಾಮಸ್ಥರನ್ನೂ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಪೊಲೀಸರು ಗ್ರಾಮಸ್ಥರನ್ನು ಘಟನಾ ಸ್ಥಳಕ್ಕೆ ಕರೆದುಕೊಂಡು ಹೋಗಿ ಮಾಹಿತಿ ಕಲೆಹಾಕುತ್ತಿದ್ದಾರೆ. ಹಸುವಿನ ಕಳೇಬರದ ಬಳಿ ಕರೆದುಕೊಂಡು ಹೋಗಿ ಯಾರು ಅದರ ಮಾಲೀಕರು ಎಂಬುದನ್ನೂ ವಿಚಾರಣೆ ಮಾಡಲಾಗುತ್ತಿದೆ.
ಹುಲಿಗಳ ಮೃತದೇಹಗಳು ದೊರೆತ ಸ್ಥಳದಲ್ಲಿಯೇ ಹಸುವಿನ ಶವ ಕೂಡ ಸಿಕ್ಕಿದ್ದು, ಹುಲಿಗಳಿಗೆ ವಿಶಪ್ರಾಷನ ಮಾಡಿಸಿರುವ ಶಂಕೆಗೆ ಕಾರಣವಾಗಿದೆ. ಹಸುವಿನ ಮೃತ ದೇಹದ ಬಾಲ ತುಂಡಾಗಿರುವುದು ಕಂಡು ಬಂದಿದೆ. ಹೀಗಾಗಿ, ಸತ್ತ ಹಸುವಿಗೆ ಯಾರೋ ವಿಷ ಸಿಂಪಡಿಸಿರುವ ಸಾಧ್ಯತೆ ಇದೆ. ಅದನ್ನು ತಿಂದು ಹುಲಿ ಮತ್ತು ಹುಲಿ ಮರಿಗಳು ಮೃತಪಟ್ಟಿರಬಹುದು ಎಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ನಂತರ ಸತ್ಯ ಏನೆಂಬುದು ಗೊತ್ತಾಗಲಿದೆ.