ರಾಮದುರ್ಗ,ಜು,೨೨ : ಸ್ಥಳೀಯ ವಿದ್ಯುತ್ ಇಲಾಖೆಯ ವಿಭಾಗೀಯ ಕಚೇರಿ ಆವರಣದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ೬೨ ನೇ ಸಂಘ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.
ಅಧ್ಯಕ್ಷತೆ ವಹಿಸಿದ್ದ ಕಾರ್ಯನಿರ್ವಾಹಕ ಅಭಿಯಂತರ ಆನಂದ ನಾಯಕ್ ಮಾತನಾಡಿ, ವಿದ್ಯುತ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ವಿವಿಧ ವಿಭಾಗದ ಅನೇಕ ಸಿಬ್ಬಂದಿಗಳು ಅಪಾಯದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಅವರ ಸುರಕ್ಷತೆಗೆ ಬೇಕಾದ ಯೋಜನೆಗಳನ್ನು ಹಾಕಿಕೊಂಡು ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.
ಎಇಇ ಶಿವಪ್ರಕಾಶ್ ಕರಡಿ, ಸಹಕಾರಿ ಸಂಘದ ಅಧ್ಯಕ್ಷ ವಿನಾಯಕ್ ಸೋಮನಟ್ಟಿ, ರಮೇಶ್ ಬನ್ನೂರ್, ಹೆಸ್ಕಾಂ ನೌಕರ ಸಂಘದ ಅಧ್ಯಕ್ಷ ಮತ್ತು ಬನ್ನೂರ, ಸಿಇಸಿ ಮಧುಸೂದನ್ ಮಾಳದಕರ, ಸ್ಥಳೀಯ ಮತ್ತು ಪ್ರಾಥಮಿಕ ಸಮಿತಿಯ ಎಲ್ಲ ಪದಾಧಿಕಾರಿಗಳು ಹಾಗೂ, ಕಲ್ಯಾಣ ಸಂಸ್ಥೆಯ ಪದಾಧಿಕಾರಿಗಳು ಮತ್ತು ಅಧಿಕಾರಿಗಳು ಮತ್ತು ನೌಕರರು ಉಪಸ್ಥಿತರಿದ್ದರು.