Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೆಡ್ಡಿ ವೀರಣ್ಣ ಶಾಲೆಯಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ 





ಕಾರಟಗಿ ನವನಗರ್ : ಕಮ್ಮವರಿ ಶಿಕ್ಷಣ ಸಂಸ್ಥೆ ರೆಡ್ಡಿ ವೀರಣ್ಣ ಸಂಜೀವಪ್ಪ ವಸತಿ  ಶಾಲೆ ಮತ್ತು ಪಿಯು ಕಾಲೇಜಿನಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮ ದಿಂದ ಆಚರಿಸಲಾಯಿತು.ರೆಡ್ಡಿ ವೀರಣ್ಣ ಶಾಲೆಯ ಕನ್ನಡ ಹಿರಿಯ ಉಪನ್ಯಾಸಕಿ ಗಂಗಮ್ಮ ಹಿರೇಮಠ ಅವರು ನಾಡ ದೇವತೆ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಯನ್ನು ಮಾಡಿ ಧ್ವಜಾರೋಹಣವನ್ನು ನೆರವೇರಿಸಿದರು.


ಈ ಸಂದರ್ಭದಲ್ಲಿ ಆಡಳಿತ ಅಧಿಕಾರಿ

ಶ್ರೀಮನ್ ನಾರಾಯಣ ಮಾತನಾಡಿ ಕರ್ನಾಟಕ ಇದು ಬರಿ ನಾಡಲ್ಲ.ಇದೊಂದು ದೇವಾಲಯ,ಈ ದೇವಾಲಯದಲ್ಲಿ ಅನೇಕ ಆಚಾರ ವಿಚಾರಗಳಿವೆ.ನಡೆ-ನುಡಿ ಶುದ್ಧವಾಗಿದೆ,ಎಲ್ಲರೂ ಯಾವುದೇ ಬೇಧಭಾವವಿಲ್ಲದೆ ಬಹಳ ಹೆಮ್ಮೆಯಿಂದ, ಸಂಭ್ರಮ ಸಡಗರದಿಂದ ಆಚರಿಸುವ ಹಬ್ಬವೆಂದರೆ ಅದುವೆ ಕನ್ನಡ ರಾಜ್ಯೋತ್ಸವವಾಗಿದೆ ಸಂಸ್ಕಾರ, ಸಂಸ್ಕೃತಿ ನಮ್ಮ ಜೀವನದುದ್ದಕ್ಕೂ ಇರುತ್ತದೆ. ಹಾಗಾಗಿ ಮಕ್ಕಳು ಉತ್ತಮ ವಿದ್ಯೆ, ಜೀವನ ಶೈಲಿ ಹಾಗೂ ಸಂಸ್ಕಾರವನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.


ನಂತರ ಕನ್ನಡ ಶಿಕ್ಷಕರು ಪಂಪನಗೌಡ ಮಾತನಾಡಿ ಕನ್ನಡ ನಾಡಿನ ಭವ್ಯ ಸಂಸ್ಕೃತಿ, ಶ್ರೇಷ್ಠ ಸಾಹಿತ್ಯ ಹಾಗೂ ಸಾಹಿತಿಗಳ ಕುರಿತು ತಿಳಿಸಿ ಇಡೀ ಪ್ರಪಂಚಕ್ಕೆ ಕನ್ನಡ ನಾಡು ನೀಡಿದ ಅಮೂಲ್ಯ ಕೊಡುಗೆಯಾದ ವಚನ ಸಾಹಿತ್ಯದ ಕುರಿತು ತಿಳಿಸಿ, ನಾವೆಲ್ಲರೂ ನಮ್ಮ ನಾಡಿನ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಗೌರವಿಸುತ್ತಾ ಕನ್ನಡ ನಾಡು-ನುಡಿಯನ್ನು ಉಳಿಸಿ ಬೆಳೆಸೋಣ. ಮೈಸೂರು ರಾಜ್ಯವು ಈಗಿನ ಕರ್ನಾಟಕ ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ ಎಂದರು.


ನಂತರ ಶಾಲಾ 6 ಮತ್ತು 9ನೇ ತರಗತಿ ವಿದ್ಯಾರ್ಥಿ ಗಳಿಂದ ಕನ್ನಡ ನಾಡಿನ ಹಿರಿಮೆಯನ್ನು ಪ್ರತಿಬಿಂಬಿಸುವ ನೃತ್ಯರೂಪಕ ಕಾರ್ಯಕ್ರಮಗಳು ನೆರವೇರಿದವು.ಈ ಸಂದರ್ಭದಲ್ಲಿ ಡಾ ಮೊಹಮ್ಮದ್ ರಫೀಕ್ ಪ್ರಾಚಾರ್ಯರು, ಶ್ರೀದೇವಿ ಕೊಲ್ಲಾ ಶಾಲೆಯ ಮುಖ್ಯಸ್ಥರು, ಸಾಜಿದ ಬೇಗಂ, ಗಂಗಮ್ಮ ಹಿರೇಮಠ, ರಾಘವೇಂದ್ರ, ರತ್ನಮ್ಮ, ಸೌಮ್ಯದೇವಿ, ರೋಜಾ ಮೋಹನ್, ನಂದಿತಾ ಅಮರೇಶ್ ಬಿ, ಡ್ಯಾನ್ಸ್ ಮಾಸ್ಟರ್ ಬಿ ದೇವರಾಜ್, ಚಿತ್ರಕಲೆ ಶಿಕ್ಷಕರು ಈಶಪ್ಪ, ಶಿಕ್ಷಕ ವೃಂದ ವಿದ್ಯಾರ್ಥಿ ವಿದ್ಯಾರ್ಥಿನಿಯರು  ಉಪಸ್ಥಿತರಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ