LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Business News

ಈ ಬಾರಿ ಶೇ 75ರಷ್ಟು ಹೂಡಿಕೆ; ಸಚಿವ ಎಂಬಿ. ಪಾಟೀಲ್ ವಿಶ್ವಾಸ

ಬೆಂಗಳೂರು: ರಾಜ್ಯ ಸರ್ಕಾರ ಈ ಬಾರಿ ಆಯೋಜಿಸಿದ್ದ ಇನ್ವೆಸ್ಟ್ ಕರ್ನಾಟಕ ಜಾಗತಿಕ ಸಮಾವೇಶ 2025ರಲ್ಲಿ ಒಟ್ಟು 98 ಕಂಪೆನಿಗಳೊಂದಿಗೆ ಒಡಂಬಡಿಕೆಗಳಾಗಿದ್ದು, ಈ ಕಂಪೆನಿಗಳಿಂದ 6.24 ಕೋಟಿ ಬಂಡವಾಳ ಹರಿದು ಬರಲಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರು ಮಂಗಳವಾರ ಮಾಹಿತಿ ನೀಡಿದರು.

ವಿಧಾನ ಪರಿಷತ್‌ನಲ್ಲಿ ಬಿಜೆಪಿಯ ಎಸ್‌.ವಿ. ಸಂಕನೂರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಹಿಂದೆ ನಡೆದಿದ್ದ ಇನ್ವೆಸ್ಟ್ ಕರ್ನಾಟಕ-2022ರ ಸಮಾವೇಶದಲ್ಲಿ ಉದ್ಯಮ ಪ್ರಾರಂಭಿಸಲು 57 ಕಂಪೆನಿಗಳೊಂದಿಗೆ 5,41,369 ಕೋಟಿ ಹೂಡಿಕೆ ಮಾಡಲು ಒಪ್ಪಂದಗಳಿಗೆ ಸಹಿ ಮಾಡಲಾಗಿತ್ತು. ಈ 57 ಕಂಪೆನಿಗಳಲ್ಲಿ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಗಳಲ್ಲಿ ಒಟ್ಟು 20 ಕಂಪೆನಿಗಳಿಗೆ ಅನುಮೋದನೆ ನೀಡಲಾಗಿದ್ದು, ಈ ಪ್ರಸಾವನೆಗಳಿಂದ 2,01,167 ಕೋಟಿ ರು. ಬಂಡವಾಳ ಹೂಡಿಕೆಯಾಗಲಿದೆ ಹಾಗೂ 70,740 ಉದ್ಯೋಗ ಸೃಜನೆಯಾಗಲಿದೆ. ಇವುಗಳಲ್ಲಿ 2 ಯೋಜನೆಗಳು ಅನುಷ್ಠಾನಗೊಂಡಿವೆ ಎಂದು ಹೇಳಿದರು.

ಈ ವರ್ಷ ನಡೆದ ಸಮಾವೇಶದಲ್ಲಿ ಹೂಡಿಕೆಯ ಪ್ರಮಾಣ ಹೆಚ್ಚಿದ್ದು, ಇದರಿಂದ ಕರ್ನಾಟಕವು ಇಡೀ ದೇಶದಲ್ಲೇ ಮಾದರಿ ರಾಜ್ಯವಾಗಿ ಶರವೇಗದಲ್ಲಿ ಅಭಿವೃದ್ಧಿ ಕಾಣಲಿದೆ ಎಂದು ತಿಳಿಸಿದರು.

ಪ್ರಸಕ್ತ ಸಾಲಿನಲ್ಲಿ ನಡೆದ ಸಮಾವೇಶದಲ್ಲಿ ರಾಜ್ಯದಿಂದ 2,892, ವಿವಿಧ ರಾಜ್ಯಗಳಿಂದ 286 ಹಾಗೂ ವಿದೇಶಿಗಳಿಂದ 72 ಸೇರಿದಂತೆ ಒಟ್ಟು 3,250 ಉದ್ದಿಮೆದಾರರು ಭಾಗಿಯಾಗಿದ್ದರು. ಒಡಂಬಡಿಕೆಯಾದ 98 ಕಂಪನಿಗಳಿಂದ 6.24 ಕೋಟಿ ಬಂಡವಾಳ ಹರಿದು ಬರಲಿದೆ, ಹೆಚ್ಚುವರಿಯಾಗಿ, 1,101 ಕಂಪನಿಗಳಿಗೆ ನೀಡಲಾದ ಅನುಮತಿಗಳಿಂದ ರೂ. 4,03,533 ಕೋಟಿ ಮೌಲ್ಯದ ಹೂಡಿಕೆಗಳಾಗುವ ಸಾಧ್ಯತೆಗಳಿದ್ದು. ಒಟ್ಟಾರೆ ರೂ. 10.27 ಲಕ್ಷ ಕೋಟಿ ಮೌಲ್ಯದ ಹೂಡಿಕೆಯಾಗುವ ನಿರೀಕ್ಷೆಗಳಿವೆ ಎಂದು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಲಿತರ ಮೇಲಿನ ದೌರ್ಜನ್ಯ, ಹಲ್ಲೆ, ಕೊಲೆ, ಸಾಮಾಜಿಕ ಬಹಿಷ್ಕಾರಕ್ಕೆ ಕಡಿವಾಣ ಹಾಕಿ : ಶ್ರೀನಿವಾಸ್ ಕರ್ಚೇಡ್ ನಬಿ ರಸೂಲ್ ಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಆರಿಫಾ ಆಗ್ರಹರಂಜಿಸಿದ ಯಾರಿಗೆ ಬೇಕು ನಿನ್ನ ಕವಿತೆ ನಾಟಕಡಾ.ಬಿ.ಆರ್.ಅಂಬೇಡಕರ್ ಸಂಘಕ್ಕೆ 10 ಲಕ್ಷ ರೂ.ಗಳ ದೇಣಿಗೆ ನೀಡಿದ ಶಾಸಕ ನಾರಾ ಭರತ್ ರೆಡ್ಡಿವಿಶೇಷ ನೋಂದಣಿ ಅಭಿಯಾನ ಪರಿಶೀಲಿಸಿದ ವೀಕ್ಷಕ ಕ್ಯಾಪ್ಟನ್ ಕೆ.ರಾಜೇಂದ್ರಕಾಗವಾಡ ತಾಲೂಕನ್ನು ಬರಪೀಡಿತ ಎಂದು ಘೋಷಿಸಲು ಸೆ.28ರಂದು ಬಂದ್: ಜ್ಯೋತಿಕುಮಾರ ಪಾಟೀಲದ್ರಾಕ್ಷಿ ಬೆಳೆಗಾರರಿಗೆ  ೭೯.೯೭ ಕೋಟಿ ವಿಮಾ ಪರಿಹಾರ, ೮ ಸಾವಿರ ರೈತರಿಗೆ ಅನುಕೂಲ,ಸಚಿವ ಲಕ್ಷ್ಮಣ ಸವದಿ ಪ್ರಯತ್ನಕ್ಕೆ ರೈತ ಮುಖಂಡ ಶೇಖರ ನೇಮಗೌಡ ಅಭಿನಂದನೆಪ್ರಜಾಸೇವಾ ಆಂದೋಲನ ಮೂರು ತಿಂಗಳಲ್ಲಿ ಎಲ್ಲ ತಾಲೂಕುಗಳಲ್ಲೂ ಆಯೋಜನೆ: ಸಚಿವ ಸತೀಶ್ ಜಾರಕಿಹೊಳಿಕಾಗವಾಡ ತಾಲೂಕು ಬರಪೀಡಿತ ಎಂದು ಘೋಷಿಸಿ:ಜ್ಯೋತಿಕುಮಾರ ಪಾಟೀಲ್ ಆಗ್ರಹ ಘೋಷಿಸದಿದ್ದರೆ ಸೆ.28 ಕ್ಕೆ ಪ್ರತಿಭಟನೆಗೆ ಕರೆಸಹಕಾರ ಸಚಿವ ಲಕ್ಷ್ಮಣ ಸವದಿಯವರ ಮಾರ್ಗದರ್ಶನದಲ್ಲಿ ಕುಡಿಯುವ ನೀರಿಗಾಗಿ ವಿಶೇಷ ಯೋಜನೆ.ಅಧ್ಯಕ್ಷ ದತ್ತಾ ವಾಸ್ಟರ