LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ರಾವಿಹಾಳ್‌ನಲ್ಲಿ 8ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ಹಾಸ್ಯ ಕಲಾವಿದ ಜೆ. ನರಸಿಂಹಮೂರ್ತಿ  ಅಧಿಕೃತ ಆಹ್ವಾನ

ಸಿರುಗುಪ್ಪ :  29:.ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸೆ.9ರಂದು ತಾಲ್ಲೂಕಿನ ರಾವಿಹಾಳ್ ಗ್ರಾಮದಲ್ಲಿ ನಡೆಯಲಿರುವ 8ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ನಿವೃತ್ತ ಶಿಕ್ಷಕ ಹಾಗೂ ಹಾಸ್ಯ ಕಲಾವಿದ ಜೆ. ನರಸಿಂಹಮೂರ್ತಿ ಅವರು ಆಯ್ಕೆಯಾಗಿದ್ದು, ಕಸಾಪ ಪದಾಧಿಕಾರಿಗಳು ಅವರಿಗೆ ಅಧಿಕೃತವಾಗಿ ಶುಕ್ರವಾರ ಆಹ್ವಾನ ನೀಡಿದ್ದರು.
ಕನ್ನಡ ಸಾಹಿತ್ಯ, ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ಜೆ. ನರಸಿಂಹಮೂರ್ತಿ ಅವರು ನೀಡಿದ ಗಣನೀಯ ಕೊಡುಗೆ, ಸಾಹಿತ್ಯಾಸಕ್ತಿ ಹಾಗೂ ಕನ್ನಡ ಪ್ರೇಮವನ್ನು ಗುರುತಿಸಿ ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ. 
ಪರಿಷತ್ತಿನ ಪದಾಧಿಕಾರಿಗಳು ನರಸಿಂಹಮೂರ್ತಿ ಅವರ ನಿವಾಸದಲ್ಲಿ ಸಮ್ಮೇಳನದ ಅಧ್ಯಕ್ಷತೆ ವಹಿಸಿಕೊಳ್ಳುವಂತೆ ಮನವಿ ಮಾಡಿ, ಅಧಿಕೃತವಾಗಿ ಆಹ್ವಾನಿಸಿದರು.
 ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷ ಡಾ. ಮಧುಸೂದನ ಕಾರಿಗನೂರು ಮಾತನಾಡಿ "ನರಸಿಂಹಮೂರ್ತಿಯವರಂತಹ ಹಿರಿಯ ಸಾಹಿತಿ ಹಾಗೂ ಅನುಭವಿ ಶಿಕ್ಷಕರು ಈ ಸಮ್ಮೇಳನದ ಅಧ್ಯಕ್ಷತೆ ವಹಿಸುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ. ಅವರ ಅಪಾರ ಅನುಭವ ಮತ್ತು ಮಾರ್ಗದರ್ಶನದಿಂದ ಸಮ್ಮೇಳನವು ಮತ್ತಷ್ಟು ಅರ್ಥಪೂರ್ಣವಾಗಿ ಮೂಡಿಬರಲಿದೆ. ವಿಶೇಷವಾಗಿ ಗಡಿಭಾಗವಾದ ರಾವಿಹಾಳ್‌ನಲ್ಲಿ ಈ ಸಾಹಿತ್ಯ ಹಬ್ಬ ನಡೆಯುತ್ತಿದ್ದು, ಅವರ ಅಧ್ಯಕ್ಷತೆಯು ಗ್ರಾಮೀಣ ಭಾಗದ ಸಾಹಿತ್ಯಾಸಕ್ತರಿಗೆ ಹಾಗೂ ಕನ್ನಡಿಗರಿಗೆ ದೊಡ್ಡ ಪ್ರೇರಣೆಯಾಗಲಿದೆ" ಎಂದು ತಿಳಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರು ಮತ್ತು ಮುಖಂಡರು ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್