Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಾಸಶ್ರೇಷ್ಠ ಕನಕದಾಸರ ಆದರ್ಶಗಳನ್ನು ಪಾಲಿಸಲು ಕರೆ


ಹಸಿರು ಕ್ರಾಂತಿ ವರದಿ; ಜಮಖಂಡಿ. ಮಹಾಮಾನವತಾವಾದಿ, ದಾಸಶ್ರೇಷ್ಠ,  ಭಕ್ತ ಕನಕದಾಸರ ಆದರ್ಶವನ್ನು ಪಾಲಿಸುವುದರಿಂದ ಪ್ರತಿಯೊಬ್ಬರು ಜೀವನದಲ್ಲಿ ಆತ್ಮತೃಪ್ತಿಯನ್ನು ಪಡೆಯಬಹುದು ಎಂದು ಮುಖ್ಯಶಿಕ್ಷಕ ನಾರಾಯಣ ಶಾಸ್ತ್ರಿ ಹೇಳಿದರು.


      ಅವರು ಕುಂಬಾರಹಳ್ಳ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ ಕನಕದಾಸ ಜಯಂತಿಯ ಅಧ್ಯಕ್ಷತೆ ವಹಿಸಿ ಮಾತನಾಡಿ ತನುಮನಕೆ ಅಧ್ಯಾತ್ಮ ಸಿಂಚನದ ಪುಳಕವನ್ನು ಗೈದ ಕನಕದಾಸರು ಮನುಕುಲ ಇರುವವರೆಗೂ ಇರುತ್ತಾರೆ. ಅವರು ಎಂದೆಂದಿಗೂ ಬಾಡದ ದಾಸಶ್ರೇಷ್ಠರಾಗಿದ್ದಾರೆ. ಮಕ್ಕಳು ಕನಕದಾಸರ ಏಕಾಗ್ರತೆ, ನಿಷ್ಠೆಯನ್ನು ಅಳವಡಿಸಿಕೊಳ್ಳಬೇಕು ಎಂದರು. ಸಾಧನೆ ಜಾತಿ ಮತ ಬಡವ ಶ್ರೀಮಂತ ಎಂಬ ಭೇದವಿಲ್ಲ, ಸಾಧನೆಗೆ ಪರಮಾತ್ಮನೇ ಒಲಿಯುತ್ತಾನೆ ಎಂದರು.


       ಶಿಕ್ಷಕ ಸಂಗನಬಸವ ಉಟಗಿ ಮಾತನಾಡಿ ಕನಕದಾಸರ ಕೀರ್ತನೆಗಳನ್ನು ಉದಾಹರಿಸುತ್ತಾ ತಾಳುವಿಕೆಗಿಂತ ತಪವೂ ಇಲ್ಲ ಎನ್ನುವಂತೆ ವಿದ್ಯಾರ್ಥಿ ಜೀವನದಲ್ಲಿ ಅತ್ಯಂತ ಸಹನೆಯಿಂದ ವಿದ್ಯೆಯನ್ನು ಅರ್ಜಿಸಬೇಕು, ಸಾಧನೆಯ ಮೂಲಕ ಪರಮಾತ್ಮನಿಗೆ ಹತ್ತಿರವಾಗಬೇಕು, ಕುಲಕುಲಕುಲವೆಂದು ಬಡಿದಾಡದಿರಿ,ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ? ಬಲ್ಲಿರಾ? ಎನ್ನುವಂತೆ ಜಾತಿ, ಮತ, ಪಥ, ಪಂಥಗಳನ್ನು ಮೀರಿ ಬೆಳೆಯಬೇಕು. ಆದರೆ ಜಾತ್ಯಾತೀತ ರಾಷ್ಟ್ರದಲ್ಲಿ ಜಾತಿಯೇ ಮೇಲುಗೈ ಸಾಧಿಸುತ್ತಿರುವುದು ಶೋಚನೀಯ ಸಂಗತಿ ಎಂದರು.


 ಶಿಕ್ಷಕಿ ಸವಿತಾ ಬೆನಕಟ್ಟಿ ಮಾತನಾಡಿದರು. ಶಿಕ್ಷಕಿ ಶಾರದಾ ಮಠ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರ್ವಹಿಸಿದರು.  ಶಿಕ್ಷಕರಾದ ಸಂಜೀವ ಝಂಬುರೆ , ಎ.ಎಂ.ಮೋಮಿನ್ ಉಪಸ್ಥಿತರಿದ್ದರು.

       ದೈಹಿಕ ಶಿಕ್ಷಕ ಬಾಹುಬಲಿ ಮುತ್ತೂರ ವಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ