Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೌಲ್ಯಯುತ ಕಥೆಗಳ ಸಂಕಲನ ಮಕ್ಕಳಿಗೆ ದಾರಿದೀಪ

ಅಯ್ಯನ ಕಥೆಗಳು ಸಣ್ಣ ಕಥೆಗಳ ಸಂಕಲನ ಬಿಡುಗಡೆಯಲ್ಲಿ ಡಾ.ಸತೀಶ ಎಸ್. ಹೊಸಮನಿ ಅಭಿಪ್ರಾಯ

ಹಸಿರು ಕ್ರಾಂತಿ ವರದಿ ಕಲಬುರಗಿ 

ಮೌಲ್ಯಯುತ ಕಥೆಗಳ ಸಂಕಲನ ಮಕ್ಕಳಿಗೆ ದಾರಿದೀಪವಾಗಿವೆ ಎಂದು ರಾಜ್ಯ ಸಮಗ್ರ ಶಿಕ್ಷಣ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕ ಡಾ.ಸತೀಶ ಎಸ್. ಹೊಸಮನಿ ಹೇಳಿದರು.

ನಗರದ ಹೋಟೆಲ್ ಬೃಂದಾವನ ಗ್ರ್ಯಾಂಡ್ ಹೋಟೆಲ್ ಬಲದೇವ್ ಸಭಾಂಗಣದಲ್ಲಿ ಮಹಾದೇವಪ್ಪ ಕಡೇಚೂರವರ ಪ್ರಥಮ ಪುಣ್ಯ ಸ್ಮರಣೆಯ ಅಂಗವಾಗಿ ಅವರ ಅಯ್ಯನ ಕಥೆಗಳು ಸಣ್ಣ ಕಥೆಗಳ ಸಂಕಲನ ಬಿಡುಗಡೆ ಮಾಡಿ ಮಾತನಾಡಿದ ಅವರು, ಕ್ರೀಡೆ, ಸ್ನೇಹ, ಓದುವ ಹವ್ಯಾಸ, ಸಾಹಸ ಮಹಾಪುರುಷರ ಕಥೆಗಳು ಪ್ರಾಣಿ ಪ್ರೀತಿ ಮುಂತಾದ ಮಕ್ಕಳ ಕಥೆಗಳು ಇನ್ನಷ್ಟು ಪ್ರಭಾವಶಾಲಿಯಾಗಿ ಮಕ್ಕಳು ಬೆಳೆಯಲು ಪ್ರೇರಣೆ ನೀಡುವ ಕೃತಿಯಾಗಿ ಮೂಡಿ ಬಂದಿದೆ ಎಂದು ಬಣ್ಣಿಸಿದರು.

Advertisement

ಹೈದರಾಬಾದ್ ಸಂಸ್ಥಾನ ವಿಮೋಚನಾ ಹೋರಾಟಗಾರ ಮಹಾದೇವಪ್ಪ ಕಡೇಚೂರ್ ಅವರು ಬದುಕಿನುದ್ದಕ್ಕೂ ಆದರ್ಶದ ಬಾಳ್ವೆ ಮಾಡಿ ಅದರ ಪ್ರೇರಣೆಯಿಂದಲೇ ಅವರ ಭಾವನೆಗಳ ಸ್ಫುರಣೆಯ ಕಥೆಗಳನ್ನು ಕಟ್ಟಿಕೊಟ್ಟಿದ್ದಾರೆ. ಸಾಮಾಜಿಕ ಬದಲಾವಣೆಗೆ ಪ್ರೇರಣೆ ನೀಡುವ ಕಥಾ ಹಂದರವನ್ನು ಅದು ಒಳಗೊಂಡಿದೆ ಎಂದು ರಾಜ್ಯ ಸಮಗ್ರ ಶಿಕ್ಷಣ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕ ಡಾ.ಸತೀಶ್ ಎಸ್. ಹೊಸಮನಿ ಹೇಳಿದರು.

ಕೇಂದ್ರ ಸಾಹಿತ್ಯ ಅಕಾಡೆಮಿ ಕನ್ನಡ ಸಲಹಾ ಸಮಿತಿ ಸದಸ್ಯೆ ಡಾ.ಜಯದೇವಿ ಗಾಯಕವಾಡ ಅಧ್ಯಕ್ಷತೆ ವಹಿಸಿ ಮಾತನಾಡಿ, ಮೌಲ್ಯ ಕುಸಿಯುತ್ತಿರುವಾಗ ಮಕ್ಕಳ ಮನೋಧರ್ಮಕ್ಕೆ ಅನುಗುಣವಾಗಿ ಕಥೆಗಳ ಮೂಲಕ ನೀತಿಯನ್ನು ಬೋಧನೆ ಮಾಡಲು ಪ್ರಯತ್ನಿಸಿದ ಕಡೆ ಚೂರು ಅವರ ಇಡೀ ಬದುಕು ಆದರ್ಶಪ್ರಾಯವಾದುದು. ಮಕ್ಕಳು ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಅನ್ಯಾಯ ಶೋಷಣೆಗೆ ಎಚ್ಚರ ನೀಡುವ ಕೃತಿಯ ಕಥೆಗಳು ನಿಜಕ್ಕೂ ನಮಗೆ ದಾರಿ ದೀಪವಾಗಲಿದೆ ಎಂದರು.

ಡಾ.ಪಿ.ಎಸ್.ಶಂಕರ, ಸ್ವಾಮಿರಾವ್ ಕುಲಕರ್ಣಿ ಮಾತನಾಡಿದರು. ಕರ್ನಾಟಕ ರಾಜ್ಯ ಪತ್ರಾಗಾರ ಮತ್ತು ಗ್ಯಾಸೆಟಿಯರ್ ಇಲಾಖೆಯ ಉಪ ನಿರ್ದೇಶಕರಾದ ವೀರಶೆಟ್ಟಿ ಬಿ.ಗಾರಂಪಳ್ಳಿ ಪುಸ್ತಕ ಪರಿಚಯ ಮಾಡಿದರು. 

ಧರ್ಮದರ್ಶಿ ವೆಂಕಟೇಶ ಎಂ.ಕಡೇಚೂರ, ಚಂದ್ರಕಾಂತ ಗುತ್ತೇದಾರ, ಡಾ.ಹನುಮಂತ ರಾವ್ ದೊಡ್ಡಮನಿ, ಬೋಡೆ ರಿಯಾಝ್ ಅಹಮ್ಮದ್, ಮಹಾದೇವಯ್ಯ ಕರದಳ್ಳಿ, ಸಂಧ್ಯಾ ಹೊನಗುಂಟಿಕರ್, ನಾರಾಯಣ ಕುಲಕರ್ಣಿ, ಚಿತ್ರಶೇಖರ ಕಂಠಿ, ಸುಬ್ರಾವ್ ಕುಲಕರ್ಣಿ, ಪ್ರಭಾಕರ ಜೋಶಿ ಸೇಡಂ, ಜಮುನಾ ಗುತ್ತೇದಾರ್, ಭೀಮಣ್ಣ ಬೋನಾಳ, ಡಾ.ಸುರೇಶ್ ಹೇರೂರು, ಲಕ್ಷ್ಮಣರಾವ್ ಪೊಲೀಸ್ ಪಾಟೀಲ್, ವೀರಭದ್ರ ಸಿಂಪಿ, ಬಿ.ಆರ್.ಅಣ್ಣ ಸಾಗರ್, ಕುಪೇಂದ್ರ ಶಾಸ್ತ್ರಿ, ಕೃಷ್ಣಮೂರ್ತಿ ಹಳ್ಳಿಖೇಡ್, ಅನಿಲಕುಮಾರ್ ಎಚ್.ಎನ್, ಶಾಂತಾ ಭೀಮಸೇನ್ ರಾವ್ ಮತ್ತಿತರ ಅನೇಕರು ಉಪಸ್ಥಿತರಿದ್ದರು. ಡಾ.ಸದಾನಂದ ಪೆರ್ಲ ಸ್ವಾಗತ ಕೋರಿದರು. ಕಿರಣ್ ಪಾಟೀಲ ಪ್ರಾರ್ಥನಾ ಗೀತೆ ಹಾಡಿದರು. ಡಾ.ಗವಿಸಿದ್ದಪ್ಪ ಪಾಟೀಲ ಕಾರ್ಯಕ್ರಮ ನಿರೂಪಿಸಿದರು.

ಲೇಖಕನ ಜವಾಬ್ದಾರಿ ಕೃತಿಯಲ್ಲಿ ಅನಾವರಣ

ಸಮಾಜದ ನೈತಿಕ ಶುದ್ಧೀಕರಣಕ್ಕೆ ಕಥಾಹಂದರವನ್ನ ಹೆಣೆದು ಲೇಖಕ ತನ್ನ ಜವಾಬ್ದಾರಿಯನ್ನು ನಿರ್ವಹಿಸಿದ ಕಥಾ ಸಂಕಲನ ಇದಾಗಿದೆ. ಕಥೆಗಳ ಪಾತ್ರ ಶೈಲಿ ಭಾಷೆ ಅತ್ಯಂತ ಸರಳವಾಗಿ ಮಣ್ಣಿನ ಸೊಗಡನ್ನು ಬಿಂಬಿಸುತ್ತಿದೆ. ಹೈಸ್ಕೂಲಿನಿಂದ ಕಾಲೇಜಿನವರೆಗೆ ಓದುವ ವಿದ್ಯಾರ್ಥಿಗಳಿಗೆ ನೀತಿ ಬೋಧೆನೆಯನ್ನು ನೀಡುವ ಉತ್ತಮ ಕೃತಿ.

-ವೀರಶೆಟ್ಟಿ ಬಿ.ಗಾರಂಪಳ್ಳಿ, ಪುಸ್ತಕ ವಿಮರ್ಶಕ.

 

ಕಡೇಚೂರ್ ವಾರ್ಷಿಕ ಪ್ರಶಸ್ತಿ ಘೋಷಿಸಿ

ಮಂತ್ರ-ತಂತ್ರ-ಯಂತ್ರ ಯುಗವನ್ನು ದಾಟಿದ ಇಂದಿನ ಸಮಾಜ ಕುತಂತ್ರ ಯುಗದಲ್ಲಿ ಬದುಕುತ್ತಿದ್ದು, ಮೌಲ್ಯಗಳು ಕಣ್ಮರೆಯಾಗುತ್ತಿರುವ ಕಾಲ ಘಟ್ಟದಲ್ಲಿ ಹಿರಿಯರು ಜವಾಬ್ದಾರಿಯುತ ಬದುಕನ್ನು ಮಾಡಿ ಎಚ್ಚರಿಕೆ ನೀಡಿದ್ದು, ಅದು ಈ ಕಥೆಗಳಲ್ಲಿ ಕೂಡಾ ಅನಾವರಣಗೊಂಡಿದೆ. ಬದುಕಿನ ಚಿಂತನೆ ಮತ್ತು ಮೌಲ್ಯಗಳು ಕಥೆಯ ಅಂತಃಸತ್ವವಾಗಿದ್ದು, ವ್ಯಕ್ತಿತ್ವ ನಿರ್ಮಾಣಕ್ಕೆ ನೀತಿ ಬೋಧಕ ಕಥೆಗಳಾಗಿವೆ. ಕಡೇಚೂರ್ ಹೋರಾಟದ ಮೂಲಕ ಮಾನವೀಯ ಮೌಲ್ಯದ ಅರ್ಥವಂತಿಕೆಯ ಜೀವನ ಸಾಗಿಸಿದವರು. ಅವರ ಹೆಸರಿನಲ್ಲಿ ಪ್ರತಿಷ್ಠಾನವು ಪ್ರತಿ ವರ್ಷ ಒಬ್ಬ ಸಾಧಕರಿಗೆ ವಾರ್ಷಿಕ ಪ್ರಶಸ್ತಿ ನೀಡುವ ಪರಿಪಾಠ ಆರಂಭಿಸಲಿ.

-ಡಾ.ಸ್ವಾಮಿರಾವ್ ಕುಲಕರ್ಣಿ, ಹಿರಿಯ ಸಾಹಿತಿ.

 

ಪುಸ್ತಕ ಬಿಡುಗಡೆ ಕ್ರಮ ಬದಲಾಗಲಿ

ಪುಸ್ತಕ ಬಿಡುಗಡೆ ಕಾರ್ಯಕ್ರಮವು ಸಾಂಪ್ರದಾಯಿಕ ಶೈಲಿಯಿಂದ ವಿದೇಶದಲ್ಲಿರುವಂತೆ ಭಿನ್ನವಾಗಿ ಆಗಬೇಕಾಗಿದೆ. ವಿದೇಶದಲ್ಲಿ ಸಾಂಕೇತಿಕವಾಗಿ ಪುಸ್ತಕದ ಲೇಖಕ ಕೃತಿಯನ್ನು ಬರೆದ ಬಗೆಯನ್ನು ತಿಳಿಸಿದರೆ ಸಭಿಕರು ಪ್ರಶ್ನೆಗಳ ಮೂಲಕ ಕೃತಿಯ ಒಳನೋಟವನ್ನು ತಿಳಿಸುತ್ತಾರೆ. ಅಂತಹ ಪದ್ಧತಿಯಲ್ಲಿ ಪುಸ್ತಕ ಬಿಡುಗಡೆಯಾದರೆ ಲೇಖಕ ಮತ್ತು ಓದುಗನ ನಡುವಿನ ಸಂಬಂಧ ವೃದ್ಧಿಗೊಳ್ಳುತ್ತದೆ, ಕೃತಿ ಪೂರ್ಣ ರೂಪದಲ್ಲಿ ಅನಾವರಣಗೊಳ್ಳುತ್ತದೆ.

-ಡಾ.ಪಿ.ಎಸ್.ಶಂಕರ, ಹಿರಿಯ ವೈದ್ಯರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೌಲ್ಯಯುತ ಕಥೆಗಳ ಸಂಕಲನ ಮಕ್ಕಳಿಗೆ ದಾರಿದೀಪವಿದ್ಯುತ್ ನಿರ್ವಹಣೆ ಖಾಸಗಿಕರಣ ವಿರೋಧಿಸಿ ನೇಕಾರ ಒಕ್ಕೂಟ ಪ್ರತಿಭಟನೆ ಅಗ್ನಿವೀರರ ಪೋಲಿಸ್ ವಿಚಾರಣೆ ಪ್ರಕ್ರಿಯೆ ವಿಳಂಬ:ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗೆ ಮನವಿ"ಜನಮೆಚ್ಚಿದ ಮಹಿಳಾ ನಾಯಕಿ" ಪ್ರಶಸ್ತಿಗೆ ಭಾಜನರಾದ ಗಾಲಿ ಲಕ್ಷ್ಮಿ ಅರುಣಾ ಜನಾರ್ದನ ರೆಡ್ಡಿ ಡಾ.  ಶ್ಯಾಮ ಪ್ರಸಾದ ಮುಖರ್ಜಿ ತ್ಯಾಗ ಬಲಿದಾನ ಬಹಳ ದೊಡ್ಡದುಪುಸ್ತಕ ಖರೀದಿ ಯೋಜನೆಗೆ ಮರುಚಾಲನೆ ನೀಡಿ :  ಕಸಾಪ ಜಿಲ್ಲಾಧ್ಯಕ್ಷ ನಿಷ್ಠಿ  ರುದ್ರಪ್ಪ  ಮನವಿನಗರ-ಗ್ರಾಮೀಣದ ಪ್ರತಿ ಮಗುವಿಗೂ ತಲುಪಲಿ ಪೋಲಿಯೋ ಲಸಿಕೆಜೂ.27 ರಂದು ಶ್ರೀ ಕೆಂಪೇಗೌಡ ಜಯಂತಿ ಕಾರ್ಯಕ್ರಮರಾಸಾಯನಿಕ ಗೊಬ್ಬರ ತಗ್ಗಿಸಿ, ಸಾವಯವ ಕೃಷಿಗೆ ಆದ್ಯತೆ ನೀಡಲು ಕರೆಬಳ್ಳಾರಿ: ಸರಳಾದೇವಿ ಕಾಲೇಜಿನಲ್ಲಿ ‘ಎಸ್.ಐ.ಆರ್’ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ