Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿನಿಮಾದೊಳಗಿನ ಸಿನಿಮಾ ಡೈರೆಕ್ಟರ್ಸ್ ಕಟ್

ರಾಜೇಶ್ವರಿ ಎಂಟರ್ಪ್ರೈಸ್ ಲಾಂಛನದಲ್ಲಿ ಹೇಮಲತಾ ಬಿ.ಎಸ್ ಅವರು ನಿರ್ಮಿಸುತ್ತಿರುವ, ಭರತ್ ವಿ.ಜೆ ನಿರ್ದೇಶನದಲ್ಲಿ ಮದುವೆಯ ಮಮತೆಯ ಕರೆಯೋಲೆ ಚಿತ್ರದ ಖ್ಯಾತಿಯ ಸೂರಜ್ ಗೌಡ ನಾಯಕನಾಗಿ ನಟಿಸುತ್ತಿರುವ 'ಡೈರೆಕ್ಟರ್ಸ್ ಕಟ್' ಚಿತ್ರದ ಮುಹೂರ್ತ ಸಮಾರಂಭ ಕೆಂಗೇರಿಯ ವಿಶ್ವವಿದ್ಯಾ ಗಣಪತಿ ದೇವಸ್ಥಾನದಲ್ಲಿ ನೆರವೇರಿತು.

     "ನಮ್ಮ ತಾಯಿ ಹೇಮಲತಾ ಅವರ ನಿರ್ಮಾಣದಲ್ಲಿ ಹಾಗೂ ನನ್ನ ನಿರ್ದೇಶನದಲ್ಲಿ 'ಡೈರೆಕ್ಟರ್ಸ್ ಕಟ್' ಸಿನಿಮಾ ಮಾಡುತ್ತಿದ್ದೀವಿ. ಈ ಸಿನಿಮಾದ ನಾಯಕನಾಗಿ ಸೂರಜ್ ಗೌಡ  ಅವರು ಹಾಗೂ ನಾಯಕಿಯರಾಗಿ ರಾಧಾ ಎಸ್ ಭಾಗಿ ಮತ್ತು ದಿವ್ಯ ಜೈನ್ ಅಭಿನಯಿಸುತ್ತಿದ್ದಾರೆ. ಚಿತ್ರದ ಬಹುತೇಕ ಭಾಗದ ಚಿತ್ರೀಕರಣ ದೇವಭೂಮಿ ಎನಿಸಿರುವ ಉತ್ತರಾಖಂಡದಲ್ಲೇ ನಡೆಯುತ್ತದೆ. ಇದೊಂದು ಸಿನಿಮಾ‌ದೊಳಗಿನ ಸಿನಿಮಾ ಇರುವ ಕಥೆ. ಕನ್ನಡದ ನಿರ್ದೇಶಕನೊಬ್ಬ ಸಿನಿಮಾಗಾಗಿ ಉತ್ತರಾಖಂಡಕ್ಕೆ ಹೋದಾಗ ಅಲ್ಲಿ ಏನೆಲ್ಲಾ ಆಗುತ್ತದೆ ಎಂಬುದೇ ಕಥಾ ಸಾರಾಂಶ. ಸೂರಜ್ ಗೌಡ ಅವರು ನಿರ್ದೇಶಕನ ಪಾತ್ರದಲ್ಲಿ ಹಾಗೂ‌ ರಾಧಾ ಎಸ್ ಭಾಗಿ ಅವರು ದಕ್ಷಿಣ ಭಾರತದ ನಾಯಕಿಯ ಪಾತ್ರದಲ್ಲಿ, ದಿವ್ಯ ಜೈನ್ ಅವರು ಉತ್ತರ ಭಾರತದ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪಿ.ಡಿ.ಸತೀಶ್, ಸ್ವಾತಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಪ್ರಮೋದ್ ಗೌಡ ಛಾಯಾಗ್ರಹಣ ಹಾಗೂ ಕಲ್ಯಾಣ್ ಮಂಜುನಾಥ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಪ್ರಮೋದ್ ಜೋಯಿಸ್ ಬರಹಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ತಿಂಗಳ 25ರಿಂದ ಚಿತ್ರೀಕರಣ ಆರಂಭವಾಗಲಿದೆ. 'ಖೇಲಾ' ನಂತರ ನಾನು ನಿರ್ದೇಶಿಸುತ್ತಿರುವ ಎರಡನೇ ಚಿತ್ರ ಇದು" ಎಂದರು ನಿರ್ದೇಶಕ ಭರತ್ ವಿ. ಜೆ.

     "ಕನ್ನಡದ ನಿರ್ದೇಶಕನೊಬ್ಬ ಉತ್ತರಾಖಂಡ ಕ್ಕೆ ತನ್ನ ಸಿನಿಮಾ ಚಿತ್ರೀಕರಣಕ್ಕಾಗಿ ಹೋದಾಗ ಅಲ್ಲಿ ಏನೆಲ್ಲಾ ಆಗುತ್ತದೆ ಎನ್ನುವ ಕಥಾಹಂದರ ಈ ಚಿತ್ರದಲ್ಲಿದೆ. ಇದೇ ವರ್ಷ ನನ್ನ ಮೂರು ಚಿತ್ರಗಳು ತೆರೆಗೆ ಬರಲಿದೆ. ಒಂದು ಚಿತ್ರವನ್ನು ನಾನೇ ನಿರ್ದೇಶನ ಮಾಡುತ್ತಿದ್ದೇನೆ" ಎಂದು ನಾಯಕ ಸೂರಜ್ ಗೌಡ ಹೇಳಿದರು.

    ನಾಯಕಿಯರಾದ ರಾಧಾ ಎಸ್ ಭಾಗಿ ಹಾಗೂ ದಿವ್ಯ ಜೈನ್, ಚಿತ್ರತಂಡದ ಸದಸ್ಯರು ಡೈರೆಕ್ಟರ್ಸ್ ಕಟ್' ಚಿತ್ರದ ಬಗ್ಗೆ ಮಾತನಾಡಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ