ಬಳ್ಳಾರಿ, ಜೂನ್ 23: ವೀರಶೈವ ವಿದ್ಯಾವರ್ಧಕ ಸಂಘದ ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯ (ಆರ್.ವೈ.ಎಂ.ಇ.ಸಿ.)ದಲ್ಲಿ "ಪದವಿ ಪ್ರದಾನ ಸಮಾರಂಭ-2026" ಶನಿವಾರ ಕಾಲೇಜಿನ ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜೆಎಸ್ಡಬ್ಲ್ಯೂ ಸ್ಟೀಲ್ ಲಿಮಿಟೆಡ್ನ ಹಿರಿಯ ಉಪಾಧ್ಯಕ್ಷ ಹಾಗೂ ಸಿ&ಇಎಸ್ ವಿಭಾಗದ ಮುಖ್ಯಸ್ಥ ಮನೀಶ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣವನ್ನು ಆಯ್ಕೆ ಮಾಡಿಕೊಂಡಿರುವುದು ಹೆಮ್ಮೆಯ ಸಂಗತಿ. ತಂತ್ರಜ್ಞಾನವು ಸಮಾಜಕ್ಕೆ ಅನೇಕ ಹೊಸ ಆವಿಷ್ಕಾರಗಳನ್ನು ನೀಡಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಬದಲಾವಣೆಗಳಿಗೆ ಕಾರಣವಾಗಲಿದೆ. ಯುವ ಇಂಜಿನಿಯರ್ಗಳು ಬುದ್ಧಿವಂತಿಕೆ, ನಿರಂತರ ಕಲಿಕೆ, ಸುಸಂಸ್ಕೃತಿ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ವೀ.ವಿ.ಸಂಘದ ಉಪಾಧ್ಯಕ್ಷರು ಹಾಗೂ ಆರ್.ವೈ.ಎಂ.ಇ.ಸಿ. ಆಡಳಿತ ಮಂಡಳಿಯ ಅಧ್ಯಕ್ಷರಾದ ಜಾನೇಕುಂಟೆ ಬಸವರಾಜ ಮಾತನಾಡಿ, ವಿದ್ಯಾರ್ಥಿ ಜೀವನದ ನಂತರ ವೃತ್ತಿಪರ ಜೀವನದ ಹೊಸ ಹಂತ ಆರಂಭವಾಗುತ್ತಿದ್ದು, ಯುವ ಇಂಜಿನಿಯರ್ಗಳು ತಾಂತ್ರಿಕ ಜ್ಞಾನದ ಜೊತೆಗೆ ಸಮಯಪ್ರಜ್ಞೆ, ಸಂವಹನ ಕೌಶಲ್ಯ ಹಾಗೂ ಉತ್ತಮ ಸಂಸ್ಕಾರಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ವಿದೇಶಗಳಲ್ಲಿ ಉದ್ಯೋಗ ನಿರ್ವಹಿಸಿದರೂ ದೇಶಾಭಿಮಾನವನ್ನು ಉಳಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ವೀ.ವಿ.ಸಂಘದ ಸಹ ಕಾರ್ಯದರ್ಶಿ ಯಾಳ್ಪಿ ಮೇಟಿ ಪಂಪನಗೌಡ, ಕಾರ್ಯಕಾರಿ ಸಮಿತಿ ಸದಸ್ಯ ಕೋರಿ ವಿರುಪಾಕ್ಷಪ್ಪ, ಪ್ರಾಂಶುಪಾಲ ಡಾ. ಹೆಚ್. ಮಹಾಬಲೇಶ್ವರ, ಡೀನ್ (ಪರೀಕ್ಷಾ ವಿಭಾಗ) ಡಾ. ಬಿ. ಶ್ರೀಪತಿ, ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕರು, ಸಿಬ್ಬಂದಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.