ಬಳ್ಳಾರಿ, ಮೇ 16:.: ಉತ್ತರಾಖಂಡದ ಹರಿದ್ವಾರದಲ್ಲಿ ನಡೆದ “ಸೆಷನ್–4 ಸೂಪರ್ ಗೋಲ್ಡ್ ಕರಾಟೆ ಲೀಗ್” ಅಂತರಾಷ್ಟ್ರೀಯ ರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ನಲ್ಲಿ ಟ್ರಡಿಷನಲ್ ಶೊಟೋಕಾನ್ ಅಕಾಡೆಮಿ ವಿದ್ಯಾರ್ಥಿಗಳು ಕಾಟಾ ಹಾಗೂ ಕುಮಿತೆ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪದಕಗಳನ್ನು ಗೆದ್ದು ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಮೇ 9 ಮತ್ತು 10ರಂದು ನಡೆದ ಸ್ಪರ್ಧೆಯಲ್ಲಿ ಅಕಾಡೆಮಿಯ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ತೇಜೇಶ್ ಕಾಟಾದಲ್ಲಿ ದ್ವಿತೀಯ ಹಾಗೂ ಕುಮಿತೆಯಲ್ಲಿ ಪ್ರಥಮ ಸ್ಥಾನ ಪಡೆದರೆ, ಮಣಿಚರಣ್ ಕಾಟಾದಲ್ಲಿ ಪ್ರಥಮ ಮತ್ತು ಕುಮಿತೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಮಧುಸೂದನ್ ರೆಡ್ಡಿ ಕಾಟಾ ಹಾಗೂ ಕುಮಿತೆ ಎರಡೂ ವಿಭಾಗಗಳಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಮಹೇಂದ್ರ ಪ್ರಸಾದ್ ಕಾಟಾ ಮತ್ತು ಕುಮಿತೆ ಎರಡೂ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಟಿ.ಎಸ್. ಸಾಯಿ ತೇಜ ಕಾಟಾದಲ್ಲಿ ಪ್ರಥಮ ಹಾಗೂ ಕುಮಿತೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಭುವನ್ ತೇಜ್ ಎಚ್ ಮತ್ತು ಚಾರಿಕಾ ಇಬ್ಬರೂ ಕಾಟಾ ಹಾಗೂ ಕುಮಿತೆ ವಿಭಾಗಗಳಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಕೃತಿಕಾ ಕಾಟಾದಲ್ಲಿ ಪ್ರಥಮ ಹಾಗೂ ಕುಮಿತೆಯಲ್ಲಿ ದ್ವಿತೀಯ ಸ್ಥಾನ ಪಡೆದರೆ, ನಿರ್ಭಾಯಿ ಎಚ್. ನಾಯ್ಡು ಕಾಟಾ ಮತ್ತು ಕುಮಿತೆ ಎರಡೂ ವಿಭಾಗಗಳಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಶಾನ್ವಿ ಕಾಟಾದಲ್ಲಿ ಪ್ರಥಮ ಹಾಗೂ ಕುಮಿತೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಅಬಿನಾಶ್ ಪಾಲ್ ಕಾಟಾ ಮತ್ತು ಕುಮಿತೆ ವಿಭಾಗಗಳಲ್ಲಿ ದ್ವಿತೀಯ ಸ್ಥಾನ ಪಡೆದಿದ್ದು, ಹರ್ಷವರ್ಧನ್ ಕಾಟಾದಲ್ಲಿ ದ್ವಿತೀಯ ಹಾಗೂ ಕುಮಿತೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಸಾಯಿ ಜ್ಯೋತಿ ಕಾಟಾದಲ್ಲಿ ಪ್ರಥಮ ಮತ್ತು ಕುಮಿತೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ನಿಖಿಲ್ ಕ್ರಿಶ್ ಕಾಟಾದಲ್ಲಿ ಪ್ರಥಮ ಹಾಗೂ ಕುಮಿತೆಯಲ್ಲಿ ತೃತೀಯ ಸ್ಥಾನ ಪಡೆದರೆ, ದೇವಾಂಶ್ ಯೆಲ್ಲಾ ಕಾಟಾ ಮತ್ತು ಕುಮಿತೆ ಎರಡೂ ವಿಭಾಗಗಳಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಗೌತಮ್ ಕಾಟಾದಲ್ಲಿ ದ್ವಿತೀಯ ಹಾಗೂ ಕುಮಿತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ತೇಜೇಶ್ ವಿ.ಪಿ ಕಾಟಾದಲ್ಲಿ ದ್ವಿತೀಯ ಮತ್ತು ಕುಮಿತೆಯಲ್ಲಿ ತೃತೀಯ ಸ್ಥಾನ ಪಡೆದು ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಟ್ರಡಿಷನಲ್ ಶೊಟೋಕಾನ್ ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷರಾದ ಕಟ್ಟೇಸ್ವಾಮಿ ಅಭಿನಂದನೆ ಸಲ್ಲಿಸಿದರು. ತರಬೇತುದಾರರಾದ ಹುಲುಗಣ್ಣ, ಪ್ರಸಾದ್ ಜಡೇಶ್, ಹನುಮಂತ ಹಾಗೂ ತಾಂತ್ರಿಕ ನಿರ್ದೇಶಕರಾದ ಸುಭಾಷ್ ಮುತ್ಕೂರ್ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು.
