Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೊಸ ಮನೆ ಕೊಂಡ ದಂಪತಿ ಸಂತಸದಲ್ಲೇ ಘೋರ ಗುಡ್ಡ ಕುಸಿತದಲ್ಲಿ ಜಲಸಮಾಧಿ

ಚಾಮರಾಜನಗರ, ಜುಲೈ 31: ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಘೋರ ಗುಡ್ಡ ಕುಸಿತದಲ್ಲಿ  ಚಾಮರಾಜನಗರ  ಜಿಲ್ಲೆಯ ನಾಲ್ವರು ಮೃತಪಟ್ಟಿದ್ದಾರೆ.

50 ವರ್ಷದ ರಾಜೇಂದ್ರ, 45 ವರ್ಷದ ರತ್ನಮ್ಮ, 62 ವರ್ಷದ ಪುಟ್ಟಸಿದ್ದಶೆಟ್ಟಿ ಮತ್ತು 50 ವರ್ಷದ ರಾಣಿ ಎಂಬವರು ಸಾವನಪ್ಪಿದ್ದಾರೆ. ಇವರೆಲ್ಲರೂ ಚಾಮರಾಜನಗರ ಜಿಲ್ಲೆಯವರು. ರಾಜೇಂದ್ರ ಮತ್ತು ರತ್ನಮ್ಮ ದಂಪತಿ ಮೂಲತಃ ಚಾಮರಾಜನಗರ ತಾಲೂಕಿನ ಇರಸವಾಡಿ ನಿವಾಸಿಗಳಾಗಿದ್ದು, ವಯನಾಡಿನ ಚೂರಲ್ ​ಮಲೈನಲ್ಲಿ ವಾಸವಾಗಿದ್ದರು.

ಕೂಲಿ ಮಾಡಿ ಕೇರಳದಲ್ಲಿ ಬದುಕು ಕಟ್ಟಿಕೊಂಡಿದ್ದ ದಂಪತಿ ಆರು ತಿಂಗಳ ಹಿಂದೆಯಷ್ಟೇ ಹೊಸಮನೆ ಖರೀದಿಸಿದ್ದರು. ಸಂಬಂಧಿಕರು, ಸ್ನೇಹಿತರನ್ನು ಕರೆದು ಗೃಹಪ್ರವೇಶ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡಿದ್ದರು. ಈಗ ದುರಂತದಲ್ಲಿ ದಂಪತಿ ಮನೆ ಸಮೇತ ಜಲಸಮಾಧಿಯಾಗಿದ್ದಾರೆ. ಈ ಇಬ್ಬರ ಮೃತದೇಹಗಳಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಚಾಮರಾಜನಗರದ ಜಿಲ್ಲೆಯ ತ್ರಯಂಬಕಪುರದ ಸ್ವಾಮಿಶೆಟ್ಟಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಯನಾಡು ಜಿಲ್ಲೆಯ ಮೆಪ್ಪಾಡಿಯ ವೈತ್ರಿ ತಾಲೂಕು ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಗುಂಡ್ಲುಪೇಟೆ ತಹಶೀಲ್ದಾರ್ ರಮೇಶ್ ಬಾಬು ಮೃತರ ಕುಟುಂಬದವರ ಜತೆ ಸಂಪರ್ಕದಲ್ಲಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*