Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಭಿಮಾನ್‌ ಸ್ಟುಡಿಯೋ ಸೀಜ್‌ ಮಾಡಲು ಡಿಸಿಗೆ ಅರಣ್ಯಾಧಿಕಾರಿ ಪತ್ರ

ಬೆಂಗಳೂರು: ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಸಮಾಧಿಯನ್ನು ಕೆಡವಿದ ಬಳಿಕ ವಿವಾದ ಭುಗಿಲೆದ್ದಿದೆ. ಈ ಜಾಗದಲ್ಲಿ ಸ್ಮಾರಕ ನಿರ್ಮಾಣ ಆಗಬೇಕು ಎಂದು ವಿಷ್ಣುವರ್ಧನ್ ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ಹೀಗಿರುವಾಗಲೇ ಅಭಿಮಾನ್ ಸ್ಟುಡಿಯೋ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಡಿಸಿಗೆ ಅರಣ್ಯ ಅಧಿಕಾರಿ ಪತ್ರ ಬರೆದಿದ್ದಾರೆ. ಈ ಪತ್ರ ವೈರಲ್ ಆಗಿದೆ. ಈ ಪತ್ರದಲ್ಲಿ ನಿಯಮ ಉಲ್ಲಂಘನೆ ಬಗ್ಗೆ ಬರೆಯಲಾಗಿದೆ.









ಬಾಲಕೃಷ್ಣ ಅವರಿಗೆ 1970ರಲ್ಲಿ ಸ್ಟುಡಿಯೋ ನಿರ್ಮಾಣದ ಉದ್ದೇಶಕ್ಕೆ  20 ಎಕರೆ ಭೂಮಿಯನ್ನು 20 ವರ್ಷ ಲೀಸ್​​ಗೆ ನೀಡಾಗಿತ್ತು. ನಂತರ ಲೀಸ್ ಅವಧಿ ವಿಸ್ತರಣೆ ಮಾಡಿಕೊಳ್ಳಲಾಯಿತು. 2004ರಲ್ಲಿ ಆರ್ಥಿಕ ಸಂಕಷ್ಟದ ನೆಪ ಹೇಳಿ ಬಾಲಕೃಷ್ಣ ಮಕ್ಕಳಾದ ಶ್ರೀನಿವಾಸ್ ಹಾಗೂ ಗಣೇಶ್ ಜಿಲ್ಲಾಧಿಕಾರಿಗಳ ಬಳಿ  10 ಎಕರೆ ಮಾರಲು ಒಪ್ಪಿಗೆ ಕೇಳಿದ್ದರು ಎನ್ನಲಾಗಿದೆ. ಜಿಲ್ಲಾಧಿಕಾರಿಗಳ ವಿಶೇಷ ಅಧಿಕಾರ ಬಳಸಿ ಇದ್ದನ್ನು ಮಾರಲಾಯಿತು ಎನ್ನಲಾಗಿದೆ.  ಮಾರಾಟದಿಂದ ಬಂದ ಹಣವನ್ನು ಸ್ಟುಡಿಯೋ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಿಕೊಳ್ಳೋದಾಗಿ ಅವರು ಸರ್ಕಾರಕ್ಕೆ ಹೇಳಿದ್ದರು.

ಆದರೆ, ಈವರೆಗೆ ಸ್ಟುಡಿಯೋ ಯಥಾ ಸ್ಥಿತಿಯಲ್ಲೇ ಇದೆ. ಈವರೆಗೆ ಇದರ ಅಭಿವೃದ್ಧಿ ಆಗಿಲ್ಲ. ಈಗ ಬಾಲಕೃಷ್ಣ ಮೊಮ್ಮಗ ಕಾರ್ತಿಕ್ ಅವರು ಈ ಜಮೀನನ್ನು ಮಾರಲು ಪ್ಲ್ಯಾನ್ ಮಾಡಿದ್ದರು. 1 ಎಕರೆಗೆ 14 ಕೋಟಿ ರೂಪಾಯಿಯಂತೆ ಮಾರಲು ಪ್ಲ್ಯಾನ್ ನಡೆದಿತ್ತು. ಈ ವಿಚಾರ ಅರಣ್ಯಾಧಿಕಾರಿಗೆ ಗೊತ್ತಾಗಿದೆ. ಹೀಗಾಗಿ, ಇದನ್ನು ವಶಕ್ಕೆ ಪಡೆಯುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಕೋರಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ