LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಗ್ರಂಥಾಲಯವು ಮಹಾವಿದ್ಯಾಲಯದ ಹೃದಯವಿದ್ದಂತೆ : ಪ್ರೊ.ಬಿ.ಎ.ಪಾಟೀಲ

ಕಾಗವಾಡ : ಗ್ರಂಥಾಲಯವು ಮಹಾವಿದ್ಯಾಲಯದ ಹೃದಯವಿದ್ದಂತೆ ವಿದ್ಯಾರ್ಥಿಗಳು ಗ್ರಂಥಾಲಯದ ಸದುಪಯೋಗವನ್ನು ಪಡೆದುಕೊಂಡು ತಮ್ಮ ಜೀವನದ ಗುರಿಯನ್ನು ತಲುಪಬೇಕೆಂದು ಸಂಸ್ಥೆಯ ಕಾರ್ಯದರ್ಶಿಗಳಾದ ಪ್ರೊ.ಬಿ.ಎ.ಪಾಟೀಲ ಅಭಿಪ್ರಾಯಿಸಿದರು. ಅವರು ಸ್ಥಳೀಯ ಶಿವಾನಂದ ಮಹಾವಿದ್ಯಾಲಯದ ಐಕ್ಯೂಎಸಿ ಪ್ರಾಯೋಜಕತ್ವದಲ್ಲಿ ಗ್ರಂಥಾಲಯ ವಿಭಾಗ ಆಯೋಜಿಸಿದ ರಾಷ್ಟಿçÃಯ ಗ್ರಂಥಪಾಲಕರ ದಿನಾಚರಣೆಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಮುಂದುವರೆದು ಅವರು ತರಗತಿಗಳ ಜ್ಞಾನ ವಿದ್ಯಾರ್ಥಿಗಳಲ್ಲಿ ಆಳವಾಗಿ ಬೆಳೆಯಬೇಕಾದರೆ ಗ್ರಂಥಾಲಯದ ಪಾತ್ರ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ತಮ್ಮ ಜ್ಞಾನಾರ್ಜನೆಗಾಗಿ ಗ್ರಂಥಾಲಯದ ಪುಸ್ತಕಗಳನ್ನು ಸದುಪಯೋಗಪಡಿಸಿಕೊಂಡು ತಮ್ಮ ಜ್ಞಾನ ಮತ್ತು ಕೌಶಲ್ಯವನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು.

 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ.ಎಸ್.ಪಿ.ತಳವಾರ ಅವರು ಮಾತನಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವೈಯಕ್ತಿಕ ಬೆಳವಣಿಗೆಯಲ್ಲಿ ಗ್ರಂಥಾಲಯದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ಗ್ರಂಥಾಲಯವನ್ನು ಕೇವಲ ಪುಸ್ತಕಗಳನ್ನು ತೆಗೆದುಕೊಂಡು ಹೋಗುವ ಸ್ಥಳವೆಂದು ಪರಿಗಣಿಸದೆ ಜ್ಞಾನ, ಸಂಶೋಧನೆ, ಚಿಂತನೆ ಮತ್ತು ಸೃಜನಶೀಲತೆಯ ಕೇಂದ್ರವಾಗಿ ಬಳಸಿಕೊಳ್ಳಬೇಕೆಂದು ಪ್ರೊ.ಜೆ.ಕೆ.ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.

 ವೇದಿಕೆಯ ಮೇಲೆ ಮಹಾವಿದ್ಯಾಲಯದ ಆಡಳಿತಾಧಿಕಾರಿಗಳಾದ ಮೇಜರ್ ವಿ.ಎಸ್.ತುಗಶೆಟ್ಟಿ ಐಕ್ಯೂಎಸಿ ಸಂಯೋಜಕರಾದ ಪ್ರೊ.ಬಿ.ಡಿ.ಧಾಮಣ್ಣವರ, ಮಹಾವಿದ್ಯಾಲಯದ ಗ್ರಂಥಪಾಲಕರಾದ ಪಿ.ಎಂ.ದೊಡಮನಿ, ಶಿವಾನಂದ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ.ಪಿ.ಬಿ.ನಂದಾಳೆ, ಶಿವಾನಂದ ಆಂಗ್ಲ ಮಾಧ್ಯಮದ ಮುಖ್ಯೋಪಾಧ್ಯಾಯರಾದ ಶಾಂತಿನಾಥ ಪಂಢರಾಪೂರೆ ಉಪಸ್ಥಿತರಿದ್ದರು. 

ಆರಂಭದಲ್ಲಿ ಗ್ರಂಥಾಲಯ ಸಲಹಾ ಸಮಿತಿಯ ಕಾರ್ಯಧ್ಯಕ್ಷರಾದ ಡಾ.ಎ.ಟಿ.ಪಾಟೀಲ ಸ್ವಾಗತಿಸಿದರು. ಪ್ರೊ.ಮಿಸ್.ಎಸ್.ಎಸ್.ಕಾಂಬಳೆ ನಿರೂಪಿಸಿದರು. ಪ್ರೊ.ಎ.ಎ.ಪಾಟೀಲ ವಂದಿಸಿದರು. ಕಾರ್ಯಕ್ರಮದಲ್ಲಿ ಶಿವಾನಂದ ಮಹಾವಿದ್ಯಾಲಯದ ಪದವಿ, ಪದವಿ ಪೂರ್ವ ಮತ್ತು ಶಿವಾನಂದ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಸಿಬ್ಬಂದಿ ಹಾಜರಿದ್ದರು. 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚನ್ನಮ್ಮನ ಕಿತ್ತೂರಿನಲ್ಲಿ ಆಕರ್ಷಕವಾಗಿ ಮೂಡಿಬಂದ ‘ಹರ್ ಘರ್ ತಿರಂಗಾ’ ಅಭಿಯಾನ: ರಾಷ್ಟ್ರಭಕ್ತಿಯ ಸಂಭ್ರಮ​ಗ್ರಂಥಾಲಯವು ಮಹಾವಿದ್ಯಾಲಯದ ಹೃದಯವಿದ್ದಂತೆ : ಪ್ರೊ.ಬಿ.ಎ.ಪಾಟೀಲಪುಸ್ತಕ ಸಂಸ್ಕೃತಿಯಿಂದ ಮಸ್ತಕವನ್ನು ಅರಳಿಸಬೇಕಾದ ಅವಶ್ಯಕತೆಯಿದೆ : ಶ್ರೀಗಳುಆ.೧೬ ರಂದು ಶ್ರೀ ಸಾಯಿ ಮಂದಿರದ ಪ್ರಥಮ ವಾರ್ಷಿಕೋತ್ಸವಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಮಹಾತ್ಮ ಗಾಂಧಿ ಪುತ್ಥಳಿಗೆ ಪೂಜೆಶ್ರಾವಣ ಮಾಸ ಶಿವ ಮತ್ತು ವಿಷ್ಣುವಿಗೆ ಅತ್ಯಂತ ಪ್ರೀಯವಾದ ಮಾಸ-ಕಣ್ವಮಠಶ್ರೀಖಾತಾ ಬದಲಾವಣೆಗೆ ಹಣದ ಬೇಡಿಕೆ ಆರೋಪ:ಬಸವನಗರ ನಿವಾಸಿಗಳಿಂದ ಪ್ರತಿಭಟನೆಭ್ರಷ್ಟ ಸಚಿವ ಬಿ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಅಗ್ರಹ ದೇಶಕ್ಕೇ ಮಾದರಿಯಾಗಲಿ ಬೆಳಗಾವಿ ಗಣೇಶ ಉತ್ಸವ :  ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಕರೆಮಹಾರಾಷ್ಟ್ರದ ನಾಂದೇಡ್‌ನಲ್ಲಿ ಸುಖ್‌ಬೀರ್ ಸಿಂಗ್ ಬಾದಲ್ ಮೇಲೆ ತಲ್ವಾರ್ ದಾಳಿ: ತೀವ್ರ ರಕ್ತಸ್ರಾವ, ಆಸ್ಪತ್ರೆಗೆ ದಾಖಲು