Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರೀ ಪ್ರಮಾಣದ ಭೂಕುಸಿತ ಸಂಭವಿಸಿ, 2 ಸಾವಿರಕ್ಕೂ ಅಧಿಕ ಮಂದಿ ಭೂಸಮಾಧಿ

ಪೋರ್ಟ್ ಮೋರೆಸ್ಬಿ: ಪಪುವಾ ನ್ಯೂಗಿನಿಯಲ್ಲಿ ಭಾರೀ ಪ್ರಮಾಣದ ಭೂಕುಸಿತ ಸಂಭವಿಸಿ, 2 ಸಾವಿರಕ್ಕೂ ಅಧಿಕ ಮಂದಿ ಭೂಸಮಾಧಿಯಾಗಿದ್ದಾರೆ ಎಂದು ಪಪುವಾ ನ್ಯೂಗಿನಿಯಾ ರಾಷ್ಟ್ರೀಯ ವಿಪತ್ತು ಕೇಂದ್ರ ವಿಶ್ವಸಂಸ್ಥೆಗೆ ಮಾಹಿತಿ ನೀಡಿದೆ.

ದ್ವೀಪರಾಷ್ಟ್ರದ ಉತ್ತರದಲ್ಲಿರುವ ಎಂಗಾ ಪ್ರಾಂತದ ಯಂಬಾಲಿ ಹಳ್ಳಿಯ ಬೆಟ್ಟಪ್ರದೇಶಗಳಲ್ಲಿ ಶುಕ್ರವಾರ ಸ್ಥಳೀಯ ಕಾಲಮಾನ ಬೆಳಿಗ್ಗೆ 3 ಗಂಟೆಗೆ ಭೂಕುಸಿತ ಸಂಭವಿಸಿದ್ದು ಸುತ್ತಮುತ್ತಲಿನ ಹಲವು ಹಳ್ಳಿಗಳಲ್ಲೂ ಅಪಾರ ಸಾವು-ನೋವು, ನಾಶ ನಷ್ಟ ಸಂಭವಿಸಿದೆ.

ಶೋಧ ಮತ್ತು ರಕ್ಷಣಾ ತಂಡದ ಕಾರ್ಯಾಚರಣೆಯಲ್ಲಿ ಮಣ್ಣಿನಡಿ ಸಮಾಧಿಯಾಗಿದ್ದ ಹಲವು ದೇಹಗಳನ್ನು ಮೇಲೆತ್ತಲಾಗಿದೆ. ಸುಮಾರು 150 ಮನೆಗಳು ಮಣ್ಣಿನಡಿ ಹೂತುಹೋಗಿರುವುದಾಗಿ ಅಂದಾಜಿಸಲಾಗಿದೆ. ಹಲವೆಡೆ ಇನ್ನೂ ಕುಸಿತ ಮುಂದುವರಿದಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿದ್ದು. ಸಾವು-ನೋವಿನ ಪ್ರಮಾಣ ಹೆಚ್ಚುವ ಸಾಧ್ಯತೆಯಿದೆ ಎಂದು ವಿಶ್ವಸಂಸ್ಥೆ ವಲಸೆ ಏಜೆನ್ಸಿ ಅಧಿಕಾರಿ ಸೆರ್ಹಾನ್ ಅಕ್ಟೋಪ್ರಾಕ್ ಮಾಹಿತಿ ನೀಡಿದ್ದಾರೆ.

ಇದೊಂದು ಅಸಾಮಾನ್ಯ ಪ್ರಾಕೃತಿಕ ದುರಂತವಾಗಿದ್ದು 1 ಸಾವಿರಕ್ಕೂ ಅಧಿಕ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಹಲವೆಡೆ ಕೃಷಿ ತೋಟಗಳು ರಾತ್ರಿ ಬೆಳಗಾಗುವುದರಲ್ಲಿ ಭೂಮಿಯ ಒಡಲನ್ನು ಸೇರಿದ್ದು ಅಪಾರ ನಷ್ಟ ಸಂಭವಿಸಿದೆ. ನೀರು ಪೂರೈಕೆ ವ್ಯವಸ್ಥೆಗೆ ಹಾನಿಯಾಗಿದ್ದು, ಹಲವೆಡೆ ಕುಡಿಯುವ ನೀರಿನ ಕೊರತೆ ಎದುರಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ