Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯಪುರದಲ್ಲಿ ವಾಸವಿದ್ದ ತಮಿಳುನಾಡು ಮೂಲದ‌ ಉಗ್ರ

ವಿಜಯಪುರ, ನವೆಂಬರ್ 1: ಕೊಯಮತ್ತೂರಿನಲ್ಲಿ 27 ವರ್ಷ ಹಿಂದೆ ಸಂಭವಿಸಿದ್ದ ಸ್ಫೋಟ ಪ್ರಕರಣದ ಆರೋಪಿಯೂ ಆಗಿರುವ ಮಿಳುನಾಡು ಮೂಲದ‌ ಉಗ್ರ ಟೈಲರ್ ರಾಜಾ ಅಲಿಯಾಸ್ ರಾಜಾ ಸಿದ್ಧಿಕಿಯ ವಿಜಯಪುರ  ಮನೆಯಲ್ಲಿ ತಮಿಳುನಾಡು ಭಯೋತ್ಪಾದನಾ ನಿಗ್ರಹ ದಳ ಸಿಬ್ಬಂದಿ ಶೋಧ ನಡೆಸಿದ್ದಾಗ ಮಹತ್ವದ ದಾಖಲೆಗಳು ಸಿಕ್ಕ ಬಗ್ಗೆ ಇದೀಗ ಮಾಹಿತಿ ಹೊರಬಿದ್ದಿದೆ. ಇದೇ 2025 ರ ಜುಲೈ 9 ರಂದು ವಿಜಯಪುರ ನಗರದಲ್ಲಿ ಟೈಲರ್ ರಾಜಾನನ್ನು ತಮಿಳುನಾಡಿನ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿತ್ತು. ವಿಜಯಪುರದ ಇಬ್ರಾಹಿಂ ರೋಜಾ ಏರಿಯಾದಲ್ಲಿ ಉಗ್ರ ವಾಸವಿದ್ದ ಮನೆಯನ್ನು ತಮಿಳುನಾಡಿನ ಉಗ್ರ ನಿಗ್ರಹ ಪಡೆ ಶೋಧ ನಡೆಸಿತ್ತು. ಆ ಸಂದರ್ಭದಲ್ಲಿ, ಉಗ್ರ ಬಳಸುತ್ತಿದ್ದ ನಕಲಿ ದಾಖಲೆಗಳನ್ನು ಪತ್ತೆ ಮಾಡಿರುವುದು ಇದೀಗ ಬಯಲಾಗಿದೆ.

ಉಗ್ರನ ಮನೆಯಲ್ಲಿ ಶೋಧ ನಡೆಸಿದ್ದ ತಮಿಳುನಾಡು ಭಯೋತ್ಪಾದನಾ ನಿಗ್ರಹ ದಳಕ್ಕೆ ನಕಲಿ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಗ್ಯಾಸ್ ಬುಕ್, ಡ್ರೈವಿಂಗ್ ಲೈಸೆನ್ಸ್ ಪತ್ತೆಯಾಗಿತ್ತು. ಟೈಲರ್ ರಾಜಾ ಅಲಿಯಾಸ್ ರಾಜಾ ಸಿದ್ಧಿಕಿ 1998 ರಲ್ಲಿ ತಮಿಳುನಾಡಿನ ಕೊಯಮತ್ತೂರಿನಲ್ಲಿ ಸಂಭವಿಸಿದ್ದ ಸರಣಿ ಬಾಂಬ್ ಸ್ಫೋಟದ ಆರೋಪಿ. ಅಂದು ಸಂಭವಿಸಿದ್ದ ಬಾಂಬ್ ಸ್ಫೋಟಗಳಲ್ಲಿ 58 ಜನರು ಸಾವನ್ನಪ್ಪಿ, 250 ಜನ ಗಾಯಗೊಂಡಿದ್ದರು. ಆ ನಂತರ ತಲೆ ಮರೆಸಿಕೊಂಡು ಹಲವು ರಾಜ್ಯಗಳಲ್ಲಿ ರಾಜಾ ಸಿದ್ಧಿಕಿ ಓಡಾಡಿದ್ದ. ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಟೈಲರಿಂಗ್ ಕಲಿತು, ಅಲ್ಲಿ ಬೇರೆ ಹೆಸರಿನಲ್ಲಿ ಹಲವು ವರ್ಷ ಕೆಲಸ ಮಾಡಿದ್ದ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ