Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧೈರ್ಯಂ ಧರ್ಮಂ ದೇಶಂ  ಪ್ರಜಾ ಕರ್ತವ್ಯ ಹೇಳುವ ಸಿನಿಮಾ 



        ಹೊಸಬರೇ ಸೇರಿ ಸಿದ್ದಪಡಿಸಿರುವ

'ಧೈರ್ಯಂ ಧರ್ಮಂ ದೇಶಂ'

 DDD ಚಿತ್ರದ ಟ್ರೇಲರ್ ಮತ್ತು ನಾಲ್ಕು ಹಾಡುಗಳ ಬಿಡುಗಡೆ ಕಾರ್ಯಕ್ರಮ ಎಸ್‌ಆರ್‌ವಿ ಪ್ರಿವ್ಯೂ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು.

      ಆರಂಭದಲ್ಲಿ ಸಗಟು ತರಕಾರಿ ವ್ಯಾಪಾರ ಮಾಡುತ್ತಿರುವ ಕೆ.ಬಿ.ಮಂಜುನಾಥ್ ಸಿನಿಮಾಕ್ಕೆ ಕಥೆ,ನಿರ್ದೇಶನ ಅಲ್ಲದೆ ಕೆಬಿಎಂ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಮಹೇಶ್ ಹಾಗೂ ಚಂದ್ರಣ್ಣ ಸಹ ನಿರ್ಮಾಪಕರು.

       ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು "ಇಲ್ಲಿಯವರೆಗೆ ಎರಡು ಕಿರುಚಿತ್ರಗಳನ್ನು ಮಾಡಿದ್ದೇನೆ. ಇದು ನನಗೆ ಮೊದಲ ಹಿರಿತೆರೆಯ ಅನುಭವ. ಸಾಮಾನ್ಯ ಪ್ರಜೆಯಾದವನು ಧೈರ್ಯ ಮಾಡಬೇಕು. ಅಧಿಕಾರಿಗಳು ಧರ್ಮವನ್ನು ಕಾಪಾಡಬೇಕು. ಯೋಧನಾದವನು ದೇಶವನ್ನು ಕಾಪಾಡಬೇಕು. ಇವುಗಳು ಸಮಾಜದ ಮೂರು ಅಂಗಗಳಾಗಿದೆ. ಅದಕ್ಕಾಗಿ ’DDD’ ಎಂದು ಶೀರ್ಷಿಕೆ ಇಡಲಾಗಿದೆ. ನಾವುಗಳು ಸಮಾಜವನ್ನು ಹೇಗೆ ನೋಡಿಕೊಳ್ಳಬೇಕು. ಅವಘಡಗಳು ಆದಾಗ ಅದನ್ನು ಯಾವ ರೀತಿ ಎದುರಿಸಬೇಕು ಎಂಬುದನ್ನು ಹೇಳಲಾಗಿದೆ. ಮಾನವಿಯತೆ, ಪ್ರೀತಿ, ಸಂಬಂಧಗಳ ಬೆಲೆ ಇನ್ನು ಮುಂತಾದವನ್ನು ಐದು ಹಾಡುಗಳಲ್ಲಿ ತೋರಿಸಲಾಗಿದೆ. ಇದು ಸಾರ್ವತ್ರಿಕ ವಿಷಯವಾಗಿರುವುದರಿಂದ ಐದು ಭಾಗಗಳಿಗೆ ಈಗಾಗಲೇ ಚಿತ್ರಕಥೆ ಸಿದ್ದಪಡಿಸಿದ್ದೇನೆ. ಮೊದಲನೆ ಭಾಗ ಇದಾಗಿರುತ್ತದೆ. ಮಾಧ್ಯಮದ ಸಹಕಾರ ಬೇಕು" ಎಂದು ಕೋರಿದರು.

      ಅರುಣ್‌ವೆಂಕಟರಾಜು ನಾಯಕನಾಗಿ ಎರಡನೇ ಅವಕಾಶ. ಶಿವಮೊಗ್ಗದ ಗಗನಮಲ್ನಾಡ್ ನಾಯಕಿ. ಇನ್ಸ್‌ಪೆಕ್ಟರ್ ಆಗಿ ರಘುಶಿವಮೊಗ್ಗ, ಉಳಿದಂತೆ ಚಾರ್ಲ್ಸ್ ಟೋನಿ, ಸುರೇಶ್‌ಬಾಬು,  ಡಿವಿ.ನಾಗರಾಜು, ಸುರೇಶ್‌ಬಾಬು, ರೋಹಿಣಿ ಮುಂತಾದವರು ಅಭಿನಯಿಸಿದ್ದಾರೆ.

       ಬಹದ್ದೂರ್ ಚೇತನ್‌ಕುಮಾರ್, ಗಜೇಂದ್ರ, ಸಂಜಯ್ ಮತ್ತು ಲಕ್ಷಿದಿನೇಶ್ ಸಾಹಿತ್ಯದ ಐದು ಗೀತೆಗಳಿಗೆ ಸೂರಜ್‌ಜೋಯಿಸ್ ಸಂಗೀತ ಸಂಯೋಜಿಸಿದ್ದಾರೆ.  ಛಾಯಾಗ್ರಹಣ ಎಸ್.ಕೆ.ಮಸ್ತಾನ್ ಷರೀಫ್, ಸಂಕಲನ ಧನುಷ್.ಎಲ್.ಬೇಡಿ. ಬೆಂಗಳೂರು, ಮಂಗಳೂರು, ಕೊಳ್ಳೆಗಾಲ ಗಡಿಭಾಗದಲ್ಲಿ ಚಿತ್ರೀಕರಣ ನಡೆಸಲಾಗಿದೆ.

      ಸಚಿತ್ ಫಿಲಿಂಸ್‌ನ ವೆಂಕಟ್‌ಗೌಡ ಸಾರಥ್ಯದಲ್ಲಿ ನವೆಂಬರ್ ತಿಂಗಳಲ್ಲಿ ಸುಮಾರು 40 ಕೇಂದ್ರಗಳಲ್ಲಿ ಸಿನಿಮಾವು ತೆರೆ ಕಾಣಲಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ