LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನಿಷೇಧಿತ ಉಗ್ರ ಸಂಘಟನೆ ಪಿಎಫ್ಐ ಬಗ್ಗೆ ಪ್ರಚಾರ ಮಾಡಿದ ಮುಸ್ಲಿಂ ಧರ್ಮಗುರು ಬಂಧನ

ಮಂಗಳೂರು, ಅಕ್ಟೋಬರ್ 11: ನಿಷೇಧಿತ ಉಗ್ರ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಪರವಾಗಿ ಪ್ರಚಾರ ಮಾಡಿದ್ದ ಕಡಬ ಮೂಲದ ಮುಸ್ಲಿಂ ಧರ್ಮಗುರುವನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಸಂಘಟನೆಯ ಭೂಗತ ಸದಸ್ಯರನ್ನೂ ಸಂಪರ್ಕಿಸಿದ ಧರ್ಮಗುರು ಸೈಯ್ಯದ್ ಇಬ್ರಾಹಿಂ ತಂಙಳ್, ಸಾಮಾಜಿಕ ಜಾಲತಾಣದಲ್ಲಿ ಸಂಘಟನೆ ಕುರಿತು ಪ್ರಚಾರ ಮಾಡುತ್ತಿದ್ದ. ಈಗ ಆತ ನ್ಯಾಯಾಂಗದ ವಶದಲ್ಲಿದ್ದಾನೆ.

ಈ ಧರ್ಮಗುರು PFI ಪರವಾಗಿ, ಸಂಘಟನೆಯ ಪುನರ್ ರಚನೆಯ ಬಗ್ಗೆ ಪ್ರಚಾರ ಮಾಡುವುದಷ್ಟೇ ಅಲ್ಲದೇ ವಾಟ್ಸಾಪ್​ನಲ್ಲಿ ಸಲಮಾನ್ ಸಲಮಾ (SALAMAN SALAMA) ಎಂಬ ಗ್ರೂಪ್ ರಚನೆ ಮಾಡಿದ್ದ. ಈ ಗ್ರೂಪ್ ಮೂಲಕ ಭೂಗತರಾಗಿರುವ PFI ಸದಸ್ಯರನ್ನು ಸಂಪರ್ಕಿಸಿದ್ದ ಸೈಯ್ಯದ್ ಇಬ್ರಾಹಿಂ ತಂಙಳ್, ಮತ್ತೆ ಚಟುವಟಿಕೆ ಆರಂಭಿಸಲು ಪ್ರಚೋದನೆ ನೀಡುತ್ತಿದ್ದ. ನಗರದ ಉರ್ವ ಸ್ಟೋರ್ ಬಳಿಯಿಂದ ಈತನನ್ನು ವಶಕ್ಕೆ ಪಡೆದಿದ್ದ ಪೊಲೀಸರು,  ಈತನಿಂದ ಮೊಬೈಲ್ ಫೋನ್​ನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು NIA ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ಸೈಯ್ಯದ್ ಇಬ್ರಾಹಿಂನನ್ನು ಹಾಜರು ಪಡಿಸಿದ್ದಾರೆ. ದಿನಾಂಕ 24-10-2025 ವರೆಗೆ ಆತನನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್