Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಲಘಟ್ಟವನ್ನೂ ಮೀರಿದ  ಅಪ್ರತಿಮ ಪ್ರೇಮ ಕಥೆಯ ಚಿತ್ರ A 

   ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ 'A'.  ಉಪೇಂದ್ರ ಅವರು ನಿರ್ದೇಶನದೊಂದಿಗೆ ನಾಯಕನಾಗೂ ನಟಿಸಿದ್ದ ಈ ಚಿತ್ರದ ನಾಯಕಿಯಾಗಿ ಚಾಂದಿನಿ ಅಭಿನಯಿಸಿದ್ದರು. 2024 ರ ಮೇ 17 ರಂದು 'A' ಚಿತ್ರ ರೀ ರಿಲೀಸ್ ಆಗಿದೆ.

     ಈ ಸಂದರ್ಭದಲ್ಲಿ ನಾಯಕಿ ಚಾಂದನಿ ಚಿತ್ರದ ನೆನಪುಗಳನ್ನು ಹಂಚಿಕೊಂಡಿದ್ದಾರೆ.


"ಇದು ನಾಯಕಿಯಾಗಿ ನನ್ನ ಜೀವನವನ್ನೇ ಬದಲಿಸಿದ ಒಂದು ಸಿನಿಮಾ. ಕನ್ನಡ ಚಿತ್ರರಂಗದ ಒಂದು ಮೈಲಿಗಲ್ಲು ಸಿನಿಮಾ ಅಂದರೆ ತಪ್ಪಾಗಲಾರದು. ಈ ರೀತಿಯಲ್ಲೂ ಸಿನಿಮಾ ಮಾಡಬಹುದು ಅಂತ ಸಿನಿಮಾ ಜಗತ್ತಿಗೆ ಉಪೇಂದ್ರ ರವರು ತೋರಿಸಿಕೊಟ್ಟರು. ಈ ಸಿನಿಮಾ ಆ ಕಾಲಕ್ಕೆ ಹೇಗೆ ಪ್ರಸ್ತುತವೋ, ಈ ಕಾಲಕ್ಕೂ ಕೂಡ ಈ ಸಿನಿಮಾ ಸಲ್ಲುತ್ತದೆ" ಎಂದಿದ್ದಾರೆ.


       ನಾಯಕಿ ಚಾಂದಿನಿ 'A' ಸಿನಿಮಾದಲ್ಲಿ ಹೇಗಿದ್ದರೋ, ನೋಡಲು ಈಗಲು ಹಾಗೆ ಇದ್ದಾರೆ. ಅದಕ್ಕೆ ಅವರು ನೀಡುವ ಕಾರಣ, "ನನ್ನ ಜೀವನವನ್ನೇ ಬದಲಿಸಿದಂತಹ ಸಿನಿಮಾ ಅದು. ಅದರಿಂದ ನನಗೆ ಸಿಕ್ಕ ಕನ್ನಡ ಜನರ ಪ್ರೀತಿ ಹಾಗು ಆ ಸಿನಿಮಾದ ಅ ಒಂದು ಫೇಮಸ್ ಡೈಲಾಗ್ 'GOD IS GREAT' ಅನ್ನುವ ಹಾಗೆ, ಈ ಎರೆಡರ ಆಶೀರ್ವಾದದಿಂದ ನಾನು ಇವತ್ತಿಗೂ 'A' ಚಾಂದಿನಿ ರೀತಿಯಲ್ಲೆ ಇದ್ದೀನಿ. ಕಾಲಘಟ್ಟವನ್ನೂ ಮೀರಿದ ಒಂದು ಅಪ್ರತಿಮ ಪ್ರೇಮ ಕಥೆ 'A" ಅಂತಾರೆ ನಾಯಕಿ.


     "ಪ್ರಬುದ್ಧ ನಿರ್ದೇಶಕ ಉಪೇಂದ್ರ ಅವರ ನಿರ್ದೇಶನದ ಬಗ್ಗೆ ವರ್ಣಿಸಲು ಪದಗಳೇ ಇಲ್ಲ‌. ಅಂದಿಗು ಇಂದಿಗೂ ನನ್ನ ಮೆಚ್ಚಿನ ನಿರ್ದೇಶಕ ಉಪೇಂದ್ರ ಅವರು. ಗುರುಕಿರಣ್ ಅವರ ಸಂಗೀತದಲ್ಲಿ ಮೂಡಿಬಂದಿರುವ 'A' ಚಿತ್ರದ ಹಾಡುಗಳು ಈಗಲೂ ಜನಪ್ರಿಯ.  ಕನ್ನಡಿಗರು 'A' ಚಿತ್ರದಿಂದ ಇಲ್ಲಿಯವರೆಗೂ ನನಗೆ ತೋರುತ್ತಿರುವ ಪ್ರೀತಿಗೆ ಚಿರಋಣಿ. ಇಂತಹ ಸೂಪರ್ ಹಿಟ್ ಚಿತ್ರದಲ್ಲಿ ನಟಿಸಲು ಅವಕಾಶ ನೀಡಿದ ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಧನ್ಯವಾದ. ರೀ ರಿಲೀಸ್ ನಲ್ಲೂ ಚಿತ್ರ ಭರ್ಜರಿ ಯಶಸ್ಸು ಕಾಣಲಿ" ಎಂದಿರುವ ನಾಯಕಿ ಚಾಂದಿನಿ "ಒಳ್ಳೆಯ ಕಥೆ ಸಿಕ್ಕರೆ ಕನ್ನಡ ಚಿತ್ರಗಳಲ್ಲಿ ನಟಿಸುತ್ತೇನೆ" ಎನ್ನುತ್ತಾರೆ
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ