ಮೂಡಲಗಿ : ಬರಗಾಲದ ಛಾಯೆಗೆ ಒಳಗಾಗಿರುವ ಘಟಪ್ರಭಾ ನದಿ ತೀರದ ಗ್ರಾಮಗಳಿಗೆ ಕುಡಿಯುವ ನೀರಿನ ಅನುಕೂಲಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗೆ ಕೂಡಲೇ ನೀರು ಹರಿಸುವಂತೆ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಯವರಲ್ಲಿ ಮನವಿ ಮಾಡಿಕೊಂಡರು.
ಗುರುವಾರದಂದು ತಾಲ್ಲೂಕಿನ ಹಳ್ಳೂರ ಗ್ರಾಮದ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಅಶೋಕ ಖಂಡ್ರಟ್ಟಿ ಅಭಿಮಾನಿ ಬಳಗದವರು ನೀಡಿರುವ ಅದ್ದೂರಿಯಾದ ಸತ್ಕಾರವನ್ನು ಸ್ವೀಕರಿಸಿ ಮಾತನಾಡಿದ ಅವರು, ಸಾರ್ವಜನಿಕರು ಮತ್ತು ದನ- ಕರುಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಕಾಲುವೆ, ಹಳ್ಳಕ್ಕೆ ನೀರನ್ನು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವಂತೆ ಅವರು ಸಚಿವರಲ್ಲಿ ಕೋರಿದರು.
ಜೂನ್- ಜುಲೈ ತಿಂಗಳಿನಲ್ಲಿ ವಾಡಿಕೆಗಿಂತ ಅತೀ ಕಡಿಮೆ ಮಳೆಯಾಗಿದೆ. ಇದರಿಂದ ಬರಗಾಲಕ್ಕೆ ತುತ್ತಾಗಿದ್ದೇವೆ. ಮಳೆಯಾಗದೇ ಇರುವುದರಿಂದ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಿದೆ. ಈಗಾಗಲೇ ಹಿಡಕಲ್ ಜಲಾಶಯದಲ್ಲಿ ೧೪ ಟಿಎಂಸಿಯ? ನೀರು ಸಂಗ್ರಹವಿದ್ದು, ಜನ- ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಘಟಪ್ರಭಾ ಎಡದಂಡೆ, ಬಲದಂಡೆ ಮತ್ತು ಹಳ್ಳಗಳಿಗೆ ನೀರನ್ನು ಹರಿಸುವಂತೆ ಅವರು ಸಚಿವರನ್ನು ಆಗ್ರಹಿಸಿದರು. ಕಾಲುವೆಗಳು ಮತ್ತು ಹಳ್ಳಗಳಿಗೆ ಸುಮಾರು ೬ ಟಿಎಂಸಿಯ? ನೀರನ್ನು ಹಿಡಕಲ್ ಜಲಾಶಯದಿಂದ ಬಿಡುಗಡೆ ಮಾಡಿದರೆ ಸಾರ್ವಜನಿಕರು - ಜಾನುವಾರುಗಳಿಗೆ ಅನುಕೂಲವಾಗುತ್ತದೆ ಎಂದು ಅವರು ಹೇಳಿದರು.
ದುರದುಂಡಿ ಗ್ರಾಮದ ಅಶೋಕ ಖಂಡ್ರಟ್ಟಿಯವರು ಕಳೆದ ೯ ವ?ಗಳಿಂದ ಹಿಡಕಲ್ ಡ್ಯಾಂ ನೀರು ಬಳಕೆದಾರರ ಮಹಾಮಂಡಳಿಯ ಅಧ್ಯಕ್ಷರಾಗಿ ಉತ್ತಮವಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಇವರ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ರಾಜ್ಯ ಮಟ್ಟದ ನೀರು ಬಳಕೆದಾರರ ಶೃಂಗ ಮಹಾಮಂಡಳಿಯ ನಿರ್ದೇಶಕ ಸ್ಥಾನವನ್ನು ನೀಡಲಾಗಿದೆ. ಈ ಮೂಲಕ ಭಗೀರಥ- ಉಪ್ಪಾರ ಸಮಾಜಕ್ಕೆ ಪ್ರಾಶಸ್ತ್ಯ ಕೊಟ್ಟಂತಾಗಿದೆ. ಖಂಡ್ರಟ್ಟಿಯವರ ಸೇವೆಯು ಇನ್ನು ರಾಜ್ಯ ಮಟ್ಟದಲ್ಲಿ ವಿಸ್ತಾರವಾಗಿದೆ ಎಂದು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಅರಭಾವಿ ಕ್ಷೇತ್ರದ ಹಲವು ಮುಖಂಡರು, ಮಾಜಿ- ಹಾಲಿ ಚುನಾಯಿತ ಪ್ರತಿನಿಧಿಗಳು, ಸಹಕಾರಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.