Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತದಾರರ ಋಣ ತೀರಿಸುವ ಪ್ರಾಮಾಣಿಕ ಪ್ರಯತ್ನ: ಶಾಸಕ ವಿಶ್ವಾಸ ವೈದ್ಯ

ಯರಗಟ್ಟಿ: ಸಮಗ್ರ ಅಭಿವೃದ್ಧಿಯೋಂದಿಗೆ ಕ್ಷೇತ್ರದ ಯರಗಟ್ಟಿ ಮತ್ತು ಸವದತ್ತಿ ಅವಳಿ ತಾಲೂಕಿನ ಮತದಾರರ ಋಣ ತೀರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.

ಸಮೀಪದ ಯರಝರ್ವಿ ಗ್ರಾಮದಲ್ಲಿ ಶನಿವಾರ ವಿಶ್ವಾಸ ವೈದ್ಯ ಅಭಿಮಾನಿ ಬಳಗ ಹಮ್ಮಿಕೊಂಡಿದ್ದ ವಿಶ್ವಾಸ ವೈದ್ಯ ಅವರ ೪೪ನೇ ವರ್ಷದ ಜನ್ಮದಿನಾಚರಣೆ ಹಾಗೂ ಸಂಗೀತ ಸಂಜೆ, ಸಾಧಕರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಯರಗಟ್ಟಿ ತಾಲೂಕಿನ ಸಮಸ್ತ ಜನತೆ ಬೆಳಗಾವಿ ಬಿಡಿಸಿಸಿ ಬ್ಯಾಂಕ ನಿರ್ದೆಶಕನಾಗಿ ಅವಿರೋಧವಾಗಿ ಆಯ್ಕೆಮಾಡಿ ನನ್ನ ಹುಟ್ಟು ಹಬ್ಬಕ್ಕೆ ವಿಶೇ?ವಾದ ಉಡುಗೊರೆ ನೀಡಿದ್ದೀರಿ ತಾಲೂಕಿನ ಸಮಸ್ತ ಜನತೆಗೆ ಅಭಿನಂದನೆ ಸಲ್ಲಿಸಿದ್ದರು.

ಗ್ರಾಮಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರ, ವಿದ್ಯಾರ್ಥಿಗಳ ಅನಕೂಲಕ್ಕೆ ಪಿಯುಸಿ ಕಾಲೇಜು ಪ್ರಾರಂಭಿಸಲು ಮಂಜುರಾತಿ ಮಾಡಲಾಗುವುದು ಎಂದು ಭರವಸೆ ನೀಡಿದರು.
ಮುನವಳ್ಳಿ ಸೋಮಶೇಖರ ಮಠದ ಮುರುಘೇಂದ್ರ ಸ್ವಾಮೀಜಿ ಸಾನ್ನಿದ್ಯ ವಹಿಸಿ ಮಾತನಾಡಿ, ಮಠ ಮಾನ್ಯ ಉಳುವಿಗೆ ಇಂದಿನ ಯುವಕರು ಮುಂದಾಗಬೆಕು. ಜನಪದ ಸಾಹಿತ್ಯ ಗ್ರಾಮೀಣ ಭಾಗದ ಕಲೆ ಆಗಿದ್ದು ಕಲೆ ಮೂಲಕ ಜನ್ಮ ದಿನಾಚರಣೆ ಮಾಡುವ ಮೂಲಕ ಮಾದರಿಯಾಗಿದ್ದಿರಿ ಎಂದರು. ವಿಶ್ವಾಸ ವೈದ್ಯ ಅವರನ್ನು ಗ್ರಾಮಸ್ಥರು, ಅಭಿಮಾನಿಗಳು ಬೃಹತ್ತಾಕಾರದ ಸೇಬು ಹಣ್ಣಿನ ಹೂಮಾಲೆ ಇಂದ ಸನ್ಮಾನಿಸಿದರು.
ಇದಕ್ಕೂ ಮುಂಚೆ ಶಾಸಕ ವಿಶ್ವಾಸ ವೈದ್ಯ ಅವರನ್ನು ಗ್ರಾಮದಲ್ಲಿ ಅದ್ಧೂರಿಯಾಗಿ ಪುಷ್ಪಾರ್ಚನೆ ಮೂಲಕ ಬರಮಾಡಿಕೊಂಡರು.ಗ್ರಾಮ ದೇವತೆ ಆಶೀರ್ವಾದ ಪಡೆದರು.
ಸ್ಥಳೀಯ ಯಲ್ಲಾಲಿಂಗ ಮಠದ ಚಿದಾನಂದ ಸ್ವಾಮೀಜಿ ಸಾನ್ನಿದ್ಯ ವಹಿಸಿದ್ದರು, ಗ್ರಾ.ಪಂ.ಅಧ್ಯಕ್ಷ ಬಸವ್ವ ನಂದಿ, ಯರಗಟ್ಟಿ ಎಪಿಎಂಸಿ ಅಧ್ಯಕ್ಷ ನೀಲಕಂಠ ಶೀದಬಸನ್ನವರ, ಕಾಂಗ್ರೆಸ್ ಮುಖಂಡ ಪ್ರಕಾಶ ವಾಲಿ, ಬೆಮುಲ ನಿರ್ದೇಶಕ ಶಂಕರ ಇಟ್ನಾಳ, ಪ್ರಥಮ ದರ್ಜೆ ಗುತ್ತಿಗೆದಾರ ಮಹಾಂತೇಶ ಉರಬ್ಬಿನ್ನವರ, ಬಂಗಾರೆಪ್ಪ ಹರಳಿ, ಅಶ್ವಥ ವೈದ್ಯ, ಜಿ.ಪಂ. ಮಾಜಿ ಸದಸ್ಯ ಫಕ್ಕೀರಪ್ಪ ಹದ್ದನ್ನವರ, ಚಾಯಪ್ಪ ಹುಂಡೇಕಾರ, ಮಲಿಕಸಾಬ ಬಾಗವಾನ, ಆರ್.ಕೆ.ಪಟಾತ, ಲಕ್ಷ್ಮಣ ಕುಂಟಿರಪ್ಪಗೋಳ, ವಿಠ್ಠಲ ಬಂಟನೂರ, ಸಂತೋ? ಹಾದಿಮನಿ, ಮುನವಳ್ಳಿ ಪುರಸಭೆ ಅಧ್ಯಕ್ಷ ಸಿ.ಬಿ.ಬಾಳಿ, ಸವದತ್ತಿ ಎಪಿಎಂಸಿ ಅಧ್ಯಕ್ಷ ಚಂದ್ರು ಜಂಬ್ರಿ, ಖ್ಯಾತ ಜಾನಪದ ಕಲಾವಿದ ಬಾಳು ಬೆಳಗುಂದಿ, ಪ್ರಕಾಶ ಸೂಣಧೋಳಿ, ಯಂಕಣ್ಣಾ ಕಳ್ಳಿಗುದ್ದಿ, ತವನಪ್ಪ ಟೋಪ್ಪಣ್ಣವರ, ಮಂಜು ಪಾಂಚಗಿ, ವೀರೇಶ ಬ್ಯಾಹಟ್ಟಿ, ಅಶೋಕ ಕುಡಚಿ, ನಿಖಿಲ ಪಾಟೀಲ, ರಾಘವೇಂದ್ರ ಗಿಡ್ಡಮಲ್ಲಪ್ಪಗೋಳ, ಅಶೋಕ ಗಡಮ್ಮನ್ನವರ, ಸತ್ಯಪ್ಪ ತಲ್ಲೂರ, ಎಂ.ಎಂ.ಶಂಕಲಿಂಗಪ್ಪ ಸೇರಿದಂತೆ ಕಾರ್ಯಕರ್ತರು ಅಭಿಮಾನಿಗಳು ಇದ್ದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ