ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸಲು ಮತದಾರರ ಪಟ್ಟಿಯ ಸಮಗ್ರತೆಯನ್ನು ಕಾಪಾಡಿಕೊಳ್ಳುವುದು ಮುಖ್ಯವಾಗುತ್ತದೆ. ರಾಷ್ಟ್ರವ್ಯಾಪಿ ಈ ವೇಳಾಪಟ್ಟಿಯನ್ನು ಶೀಘ್ರ ಬಿಡುಗಡೆ ಮಾಡಲಾಗುತ್ತದೆ.
ಬಿಹಾರದಲ್ಲಿ ಎಸ್ಐಆರ್ ಕುರಿತು ವಿರೋಧ ಪಕ್ಷಗಳ ಕೋಲಾಹಲದ ನಡುವೆಯೇ ಈ ಘೋಷಣೆ ಹೊರಬಿದ್ದಿದೆ. ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಹಲವಾರು ಸಂದರ್ಭಗಳಲ್ಲಿ ಈ ಪ್ರಕ್ರಿಯೆಯನ್ನು ಟೀಕಿಸಿದ್ದಾರೆ ಮತ್ತು ರಾಜ್ಯದಲ್ಲಿ ಮುಂಬರುವ ಚುನಾವಣೆಗಳನ್ನು ಬಹಿಷ್ಕರಿಸುವ ಸುಳಿವು ನೀಡಿದ್ದಾರೆ.