Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಣಮಳೆಗೆ ತತ್ತರಿಸಿದ್ದ ಕೊಡಗಿಗೆ ಮತ್ತೇ ಆತಂಕದ ಸ್ಥಿತಿ: 43 ಸ್ಥಳಗಳಿಗೆ ಅಪಾಯದ ಎಚ್ಚರಿಕೆ!

ಕೊಡಗು: ಕಳೆದ ಎರಡು ವರ್ಷಗಳಲ್ಲಿ ಭಾರಿ ಸಮಸ್ಯೆ ಏನೂ ಆಗಿಲ್ಲ. ಆದರೆ, ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕೊಡಗಿನಲ್ಲಿ 43 ಪ್ರದೇಶಗಳು ಅಪಾಯಕಾರಿ ಎಂದು ಎಚ್ಚರಿಕೆ ನೀಡಲಾಗಿದೆ. ಜೊತೆಗೆ, ಹಟ್ಟಿಹೊಳೆ ಕಾವೇರಿ ನದಿ ಹಾಗೂ ಲಕ್ಷ್ಮಣ ತೀರ್ಥ ನದೀಯ ತಟದಲ್ಲಿ ಇರುವವರು ಎಚ್ಚರ ವಹಿಸಬೇಕು ಎಂದು ತಜ್ಞರು ಎಚ್ಚರಿಕೆ ನೀಡಿರುವುದಾಗಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದ್ದಾರೆ.

ಭಾರತೀಯ ಭೂಗರ್ಭ ಶಾಸ್ತ್ರಜ್ಞರು ಆಡಳಿತಕ್ಕೆ ಒಂದು ವರದಿ ಸಲ್ಲಿಸಿದ್ದು, ಇದು ಕೂಡ ಜನತೆಯ ಆತಂಕ ಹೆಚ್ಚಿಸಿದೆ. ಈ ಹಿಂದೆ ಪ್ರಾಕೃತಿಕ ವಿಕೋಪ ಸಂಭವಿಸಿದ್ದ ಸ್ಥಳದಲ್ಲೇ ಮತ್ತೆ ಅಪಾಯದ ಸಾಧ್ಯತೆ ಇದೆ ಎಂದು ಅವರು ವರದಿಯಲ್ಲಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ

ತಜ್ಞರ ವರದಿಯ ಬೆನ್ನಲ್ಲೇ ಕೊಡಗು ಜಿಲ್ಲಾಡಳಿತ ಕೂಡ ಈ ಬಾರಿಯ ಮಳೆಗಾಲವನ್ನು ಎದುರಿಸಲು ಸಿದ್ಧತೆ ಮಾಡಿದೆ. ತಜ್ಞರು ಹೇಳಿದ ಆ ಪ್ರದೇಶಗಳಲ್ಲಿ ಏನಾದರೂ ಬದಲಾವಣೆಗಳು ಕಾಣಿಸುತ್ತಿವೆಯಾ ಎಂದು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಿದೆ.

ತಜ್ಞರು ಎಚ್ಚರಿಕೆ ನೀಡಿರುವ ಪ್ರದೇಶಗಳಲ್ಲಿ ಅಗತ್ಯ ಸೇವೆಗಳು ಸುಲಭವಾಗಿ ಲಭ್ಯವರುವಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಪೊಲೀಸ್ ಇಲಾಖೆ, ಅಗ್ನಿಶಾಮಕ‌ ಸಿಬ್ಬಂದಿ, ನೋಡಲ್ ಅಧಿಕಾರಿಗಳು ಹಾಗೂ ಸ್ವಯಂ ಸೇವಕರನ್ನು ಈಗಲೇ ನೆಮಿಸಿಕೊಳ್ಳಲಾಗಿದೆ. ಜೊತೆಗೆ ಸಂಭಾವ್ಯ ಪ್ರವಾಹ ಎದುರಾಗುವ ಏರಿಯಾದ ಸುತ್ತ ಮುತ್ತ 100 ಕ್ಕೂ ಹೆಚ್ಚು ಆಶ್ರಯ ಕೇಂದ್ರಗಳನ್ನು ಆರಂಭಿಸಲು ಚಿಂತನೆ ನಡೆಸಿದ್ದು, ಎಲ್ಲಾ ಮೂಲಭೂತ ಸೌಕರ್ಯ ಸಿದ್ಧಪಡಿಸಿಕೊಳ್ಳಲಾಗಿದೆ. ಜನತೆ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ