Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕ್ಷಕರಿಗೆ ಜೀವ ಬೆದರಿಕೆ ಹಾಕಿದ ವಿದ್ಯಾರ್ಥಿ

ಕೇರಳ: ಸಾಮಾನ್ಯವಾಗಿ ಯಾವ ಶಾಲೆಗಳಲ್ಲೂ ಮೊಬೈಲ್​ಗಳೊಟ್ಟಿಗೆ ಮಕ್ಕಳು ಬರುವಂತಿಲ್ಲ, ಅದನ್ನು ವಶಪಡಿಸಿಕೊಂಡು ಪೋಷಕರಿಗೆ ಕರೆ ಮಾಡಿ ಎಚ್ಚರಿಕೆ ನೀಡಲಾಗುತ್ತದೆ. ಯಾಕೆಂದರೆ ಮಕ್ಕಳು ಮೊಬೈಲ್​ ಕಡೆಗೆ ಗಮನ ಕೊಟ್ಟರೆ ವಿದ್ಯಾಭ್ಯಾಸದಲ್ಲಿ ಹಿಂದುಳಿಯಬೇಕಾಗುತ್ತದೆ. ಹೀಗಾಗಿ ಶಾಲೆ ಹಾಗೂ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಆದರೆ ಮಕ್ಕಳು ಮೊಬೈಲ್​ಗಳನ್ನು ತೆಗೆದುಕೊಂಡು ಶಿಕ್ಷಕರ ಬಳಿ ಸಿಕ್ಕಿಬೀಳುವ ಪ್ರಕರಣಗಳೂ ಹೆಚ್ಚಾಗಿದೆ.ಅದು ಇದು ಸಬೂಬು ಹೇಳಿ ಅವರಿಂದ ಮೊಬೈಲ್ ವಾಪಸ್ ಪಡೆಯುವುದು ಹೇಗೆ ಎಂಬುದನ್ನು ನೋಡುತ್ತಾರೆ. ಆದರೆ ಇಲ್ಲೊಬ್ಬ ವಿದ್ಯಾರ್ಥಿ ಶಿಕ್ಷಕರಿಗೇ ಜೀವ ಬೆದರಿಕೆಯೊಡ್ಡಿದ್ದಾರೆ.

ಮೊಬೈಲ್ ವಶಪಡಿಸಿಕೊಂಡಿದ್ದಕ್ಕೆ ವಿದ್ಯಾರ್ಥಿಯೊಬ್ಬ ಶಿಕ್ಷಕರಿಗೆ ಜೀವ ಬೆದರಿಕೆ ಹಾಕಿರುವ ಘಟನೆ ಕೇರಳದ ಪಾಲಕ್ಕಾಡ್​ನಲ್ಲಿ ನಡೆದಿದೆ. ವಿದ್ಯಾರ್ಥಿ ತರಗತಿಯಲ್ಲಿ ಮೊಬೈಲ್ ಬಳಕೆ ಮಾಡಿ ಶಾಲಾ ನಿಯಮಗಳನ್ನು ಉಲ್ಲಂಘಿಸಿದ ಘಟನೆ ನಡೆದಿದೆ. ಶಾಲೆಯು ಕಟ್ಟುನಿಟ್ಟಾದ ನೋ-ಫೋನ್ ನೀತಿಯನ್ನು ಹೊಂದಿದೆ. ಮತ್ತು ಫೋನ್ ವಶಪಡಿಸಿಕೊಂಡಿದ್ದಕ್ಕಾಗಿ ಶಿಕ್ಷಕರ ಕ್ರಮದ ವಿರುದ್ಧ ವಿದ್ಯಾರ್ಥಿ ಆಕ್ರೋಶಗೊಂಡಿದ್ದ.

ವಿದ್ಯಾರ್ಥಿಯು ತನ್ನ ಫೋನ್ ತೆಗೆದುಕೊಂಡಾಗ ಆರಂಭದಲ್ಲಿ ಗಲಾಟೆ ಮಾಡಿದ್ದಾನೆ. ನಂತರ ಆತನನ್ನು ಪ್ರಾಂಶುಪಾಲರ ಕಚೇರಿಗೆ ಕರೆಸಿಕೊಂಡು, ಶಾಲೆಯಿಂದ ಹೊರಗೆ ಕಾಲಿಟ್ಟರೆ ತನಗೆ ಕೊಲೆ ಮಾಡುವುದಾಗಿ ಹೇಳಿ ಶಿಕ್ಷಕರಿಗೆ ಬೆದರಿಕೆ ಹಾಕಿದ್ದಾನೆ. ಈ ಘಟನೆ ಶುಕ್ರವಾರ ನಡೆದಿದ್ದು, ಶಿಕ್ಷಕರು ಇದುವರೆಗೆ ಯಾವುದೇ ದೂರು ದಾಖಲಿಸಿಲ್ಲ. ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ