Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯಶಸ್ವಿ ಮೂರನೇ ಪ್ರದರ್ಶನದ ಪರಿಮಳದವರು ನಾಟಕ

ಬೆಳಗಾವಿ,.16: ನಗರದ ರಂಗಸಂಪದ ತಂಡದವರು ಇದೇ ದಿ. ೧೪ ರವಿರಾರದಂದು ಕೋನವಾಳ ಬೀದಿಯಲ್ಲಿರುವ ಲೋಕಮಾನ್ಯ ರಂಗಮಂದಿರದಲ್ಲಿ ಜಿ.ಬಿ. ಜೋಶಿಯವರು ರಚಿಸಿದ ಪರಿಮಳದವರು ನಾಟಕ ತುಂಬಿದ ಸಭಾಗೃಹದಲ್ಲಿ ಮೂರನೇ ಪ್ರಯೋಗವಾಗಿ ಪ್ರದರ್ಶನಗೊಂಡಿತು.

ಈ ಸಂದರ್ಭದಲ್ಲಿ ಕಾರಂಜಿ ಮಠದ ಶ್ರೀಗಳು ಮಾತನಾಡುತ್ತ ೩೭೦ ವರ್ಷಗಳ ಹಿಂದೆ ಶ್ರೀ ರಾಘವೇಂದ್ರ ಸ್ವಾಮಿಗಳು ವೃಂದಾವನಸ್ಥರಾದರೂ ಈಗ ಮತ್ತು ಇನ್ನು ಮುಂದೆಯೂ ಕಾಮಧೆನು ಕಲ್ಪವೃಕ್ಷವಾಗಿ ಎಲ್ಲರ ಮನದಾಸೆಗಳನ್ನು ಈಡೇರುಸತ್ತ ಬಂದಿದ್ದಾರೆ. ಇಂದಿನ ಈ ಕಲಿಯುಗದಲ್ಲಿ ಇಂತಹ ಭಕ್ತಿ ಪ್ರಧಾನ ನಾಟಕಗಳು ಹೆಚ್ಚೆಚ್ಚು ಪ್ರದರ್ಶನಗೊಳ್ಳಬೇಕು. ಎಲ್ಲರೂ ಇಂತಹ ಮಹಾಮಹಿಮರ ಜೀವನ ಚರಿತ್ರೆಗಳನ್ನು ಅರಿತುಕೊಳ್ಳಬೇಕು ಎಂದು ಹೇಳಿದರು.

ಹಿರಿಯ ವಾಗ್ಮಿಗಳಾದ ಡಾ. ಬಸವರಾಜ ಜಗಜಂಪಿಯವರು ಮಾತನಾಡುತ್ತ ಇಂದು ಶ್ರೀ ರಾಘವೇಂದ್ರ ಸ್ವಾಮಿಯವರನ್ನು ಪ್ರತ್ಯಕ್ಷವಾಗಿ ನೋಡಿದ ಅನುಭವವಾಯಿತು. ಸ್ವಾಮೀಜಿಯವರು ವೃಂದಾವನಸ್ಥರಾಗುವ ಸಮಯದಲ್ಲಿಯಂತೂ ಕಣ್ಣುತುಂಬಿ ಬಂದಿತು. ನೈಜ ಅಭಿನಯದಿಂದ ಎಲ್ಲರ ಮನಗೆದ್ದಿದ್ದಾರೆ ಅದರಲ್ಲಿಯೂ ವಿಶೇಷವಾಗಿ ಡಾ. ಅರವಿಂದ  ಕುಲಕರ್ಣಿಯವರು ಎಲ್ಲ ಭಕ್ತರ ಹೃದಯದಲ್ಲಿ ಉಳಿದಿದ್ದಾರೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕಾರಂಜಿ ಮಠದ ಗುರುಸಿದ್ಧ ಸ್ವಾಮಿಜಿ, ಪ್ರಯೋಜಕತ್ವವನ್ನು ವಹಿಸಿದ್ದ ಖ್ಯಾತ ನ್ಯಾಯವಾದಿಗಳಾದ ಎಸ್. ಎಂ. ಕುಲಕರ್ಣಿ ಮತ್ತು ಜಯಂತ ಜೋಶಿ ಅವರನ್ನು ಶಾಲು ಹೊದಿಸಿ ಸನ್ಮಾನಿಸಿದರು.

ಪರಿಮಳದವರು ನಾಟಕ ರಂಗಕ್ಕೆ ತರುವುದು ಒಂದು ಸವಾಲಾಗಿದ್ದು ಶ್ರೀಪತಿ ಮಂಜನಬೈಲು ಅವರ ನಿರ್ದೇಶನದಲ್ಲಿ ಮತ್ತು ರಾಘವೇಂದ್ರ ಸ್ವಾಮಿಯವರ ಪಾತ್ರದಲ್ಲಿ ಡಾ. ಅರವಿಂದ ಕುಲಕರ್ಣಿಯವರ ನೈಜ ಅಭಿನಯದಿಂದ ಆ ಸವಾಲನ್ನು ಎದುರಿಸಿ ಯಶಸ್ವಿಯಾಗಿದ್ದಾರೆ.

-೦-೦-೦-
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ