Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇವದಾಸಿಯರ ಸಮೀಕ್ಷೆ ಸಮರ್ಪಕವಾಗಿ ನಡೆಯಲಿ : ಯು ಬಸವರಾಜ್






ಬಳ್ಳಾರಿ.ಅ.09.. ರಾಜ್ಯ ಸರ್ಕಾರ ನಡೆಸಲು ಉದ್ದೇಶಿಸಿರುವ ದೇವದಾಸಿಯರ ಸಮೀಕ್ಷೆ ಅಸಮರ್ಪಕವಾಗಿದ್ದು ಅದನ್ನು ಸಮರ್ಪಕವಾಗಿ ನಡೆಸಿ ಸಮೀಕ್ಷೆಯಿಂದ ಹಲವು ತಾಂತ್ರಿಕ ತೊಂದರೆಗಳಿAದ ಹೊರಗುಳಿವಯುವವರನ್ನು ಸಹ ಸಮೀಕ್ಷೆಗೆ ಒಳಪಡಿಸಬೇಕೆಂದು ದೇವದಾಸಿ ಮಹಿಳೆಯರ ವಿಮೋಚನ ಸಂಘದ ರಾಜ್ಯ ಗೌರವಾಧ್ಯಕ್ಷ ಯು ಬಸವರಾಜ್ ಅಗ್ರಹಿಸಿದರು.

ಅವರು ಇಂದು ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿ, ಸಮೀಕ್ಷೆಯನ್ನು ಮನೆ ಮನೆಗೆ ಹೋಗಿ ನಡೆಸಬೇಕು ಅದುಬಿಟ್ಟು ಕಛೇರಿಯಲ್ಲೇ ಒಂದು ಕಂಪ್ಯೂಟರ್ ಇಟ್ಟುಕೊಂಡು ಅಷ್ಟು ಜನರ ಸಮೀಕ್ಷೆ ನಡೆಸುವುದು ಸಾಧ್ಯವಾಗುವುದಿಲ್ಲ. ಮತ್ತು ಡಿಜಿಟಲ್ ಸಮೀಕ್ಷೆಗೆ ಸರ್ವರ್ ಮತ್ತು ಇಂಟರ್‌ನೆಟ್ ತೊಂದರೆಯಿದೆ ಮನೆ ಮನೆಗೆ ಹೋದಲ್ಲಿ ಸಮೀಕ್ಷೆ ಸಂಪೂರ್ಣವಾಗಿ ನಡೆಸಬಹುದು, ಅಥವಾ ಸಮೀಕ್ಷೆಯ ಬಗ್ಗೆ ಒಂದು ಕ್ಯಾಲೆಂಡರ್ ಸಿದ್ಧಪಡಿಸಿಕೊಂಡು ಒಂದು ಗ್ರಾಮ ಪಂಚಾಯಿತಿ ಒಂದು ದಿನದಂತೆ ಸಮೀಕ್ಷೆಗೆ ಕರೆದಲ್ಲಿ ಜನಜಂಗುಳಿಯನ್ನು ತಡೆಯಬಹುದು, ದೇವದಾಸಿ ಕುಟುಂಬದ ಮೂರು ತಲೆಮಾರುಗಳ ವಿವರಗಳನ್ನು ದಾಖಲಿಸಲು ಸಾಧ್ಯವಾಗಲಿದೆ ಎಂದರು.

ಮತ್ತು ಅತ್ಯಂತ ಮುಖ್ಯವಾಗಿ ದೇವದಾಸಿಪದ್ದತಿಗೆ ನೂಕುವ ದೇವದಾಸಿಯ ಜೊತೆ ಸಂಸಾರ ಮಾಡಿದ ಮತ್ತು ಮಕ್ಕಳ ಜನನಕ್ಕೆ ಕಾರಣವಾಗುವವರ ಮೇಲೆ ಆ ಕುಟುಂಬದ ಹೊಣೆಗಾರಿಕೆಯನ್ನು ಹೋರಿಸಬೇಕು ಇದರಿಂದ ಈ ಅನಿಷ್ಠ ಪದ್ಧತಿಯನ್ನು ತಡೆಗಟ್ಟಬಹುದು. ಬ್ರೀಟೀಷರ ಕಾಲದಲ್ಲೇ ಈ ಪದ್ದತಿಯನ್ನು ರದ್ದುಪಡಿಸಿದ್ದರೂ ಈವರೆಗೂ ಇದನ್ನು ಸಂಪೂರ್ಣವಾಗಿ ತೊಡೆದು ಹಾಕಲುಸಾಧ್ಯವಾಗಿಲ್ಲ, ಸ್ವಾತಂತ್ರö್ಯ ಬಂದು 75 ವರ್ಷ ಕಳೆದರೂ ಅವರಿಗೆ ಸಮರ್ಪಕ ರೀತಿಯಲ್ಲಿ ಪುನರ್ವಸತಿ ಕಲ್ಪಿಸಲು ಸಾಧ್ಯವಾಗಿಲ್ಲ ಮತ್ತು ಅವರಿಗೆ ಕೇವಲ ಮೂರು ಸಾವಿರ ರೂಪಾಯಿ ಪಿಂಚಣಿ ನೀಡುತ್ತಿದೆ ಅದು ಏತಕ್ಕೂ ಸಾಲುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಹಲವು ಬೇಡಿಕೆಗಳ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಲಕ್ಷಿö್ಮ ಹೆಬ್ಬಾಳಕರ್, ಪ್ರಿಯಾಂಕ್ ಖರ್ಗೆ, ಮಹಾದೇವಪ್ಪ ಅವರಿಗೆ ಸಲ್ಲಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ವಿಮೋಚನ ಸಂಘದ ಹುಲಿಗೆಮ್ಮ, ಈರಮ್ಮ, ಎ.ಸ್ವಾಮಿ, ವೀರೆಶ್, ರಮೇಶ್ ಸೇರಿದಂತೆ ಹಲವರಿದ್ದರು.






Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*