LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಡೆತ್ ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಟೆಕ್ಕಿ


ಬೆಂಗಳೂರು : ಡೆತ್ ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಟೆಕ್ಕಿ ಅತುಲ್ ಸುಭಾಷ್ ಸಹೋದರ ಬಿಕಾಸ್ ಕುಮಾರ್ ನೀಡಿದ ದೂರಿನನ್ವಯ ಮಾರತ್ ಹಳ್ಳಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಅತುಲ್ ಸುಭಾಷ್ ಅವರ ಪತ್ನಿ ನಿಕಿತಾ ಸಿಂಘಾನಿಯಾ, ಆಕೆಯ ತಾಯಿ ನಿಶಾ ಸಿಂಘಾನಿಯಾ, ಸಹೋದರ ಅನುರಾಗ್ ಸಿಂಘಾನಿಯಾ ಹಾಗೂ ಸಂಬಂಧಿ ಸುಶೀಲ್ ಸಿಂಘಾನಿಯಾ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಾಯ್ದೆ 108 (ಆತ್ಮಹತ್ಯೆಗೆ ಪ್ರಚೋದನೆ) ಆರೋಪದಡಿ ಎಫ್ಐಆರ್ ದಾಖಲಾಗಿದೆ.


ಎಫ್ಐಆರ್‌ನಲ್ಲಿ ಏನಿದೆ..? ಅತುಲ್ ಸುಭಾಷ್, ನಿಕಿತಾ ಸಿಂಘಾನಿಯಾಗೆ 2019ರಲ್ಲಿ ಮದುವೆಯಾಗಿತ್ತು. ದಂಪತಿಗೆ 4 ವರ್ಷದ ಗಂಡು ಮಗು ಸಹ ಇದೆ. ಆದರೆ ತನ್ನ ತಾಯಿ ಹಾಗೂ ಸಹೋದರನ ಕುಮ್ಮಕ್ಕಿನಿಂದ ಪತಿ ಅತುಲ್ ಸುಭಾಷ್ ವಿರುದ್ಧ ನಿಕಿತಾ ಸುಳ್ಳು ದೂರು ದಾಖಲಿಸಿದ್ದಳು ಎಂದು ಆರೋಪಿಸಲಾಗಿದೆ. ಆರೋಪಿಗಳು ಅತುಲ್ ಸುಭಾಷ್‌ಗೆ ಪುತ್ರನ ಭೇಟಿಗೂ ಅವಕಾಶ ನೀಡದೆ 30 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದರು. ಅಲ್ಲದೆ ಪ್ರಕರಣದ ನ್ಯಾಯಾಲಯದ ಕಲಾಪಗಳಿಗೆ ಅತುಲ್ ಸುಭಾಷ್ ಹಾಜರಾದ ಸಂದರ್ಭದಲ್ಲಿ '3 ಕೋಟಿ ರೂ. ಕೊಡು, ಇಲ್ಲದಿದ್ದರೆ ಬದುಕಿರಬೇಡ' ಎಂದು ಅಣಕಿಸುತ್ತಿದ್ದರು. ಇದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ನೊಂದು ಅತುಲ್ ಸುಭಾಷ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಬಿಕಾಸ್ ಕುಮಾರ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮೃತನ ಸಹೋದರನ ದೂರಿನನ್ವಯ ಮಾರತ್ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಡಾ. ಶಿವಕುಮಾರ್ ಗುಣಾರೆ ತಿಳಿಸಿದರು.


ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್ (34) ಡಿಸೆಂಬರ್ 9ರಂದು ಮಾರತ್ ಹಳ್ಳಿಯ ಮಂಜುನಾಥ ಲೇಔಟ್‌ನಲ್ಲಿರುವ ತಮ್ಮ ಮನೆಯಲ್ಲಿ‌ ಆತ್ಮಹತ್ಯೆಗೆ ಶರಣಾಗಿದ್ದರು. ಸುಮಾರು 40 ಪುಟಗಳ ಡೆತ್ ನೋಟ್ ಬರೆದಿಟ್ಟು, ಸಾವಿನ ಬಳಿಕ ಮೃತದೇಹ ಗಮನಿಸುವವರಿಗೆ ವ್ಯವಸ್ಥಿತವಾಗಿ ಸೂಚನೆಗಳನ್ನು ನೀಡಿ ಆತ್ಮಹತ್ಯೆಗೆ ಶರಣಾಗಿರುವುದು ಕಂಡುಬಂದಿತ್ತು.




ಮಗನಿಗೆ ಗಿಫ್ಟ್​​ ಬಾಕ್ಸ್​​; ಗಿಫ್ಟ್ ಬಾಕ್ಸ್ಅನ್ನು ಮನೆಯಲ್ಲಿಟ್ಟು, ತನ್ನ ನಾಲ್ಕು ವರ್ಷದ ಪುತ್ರನಿಗೆ ತಲುಪಿಸುವಂತೆ ಉಲ್ಲೇಖಿಸಿದ್ದರು. ನಂತರ 'JUSTICE IS DUE' ಎಂಬ ಬರಹವಿರುವ ಪೋಸ್ಟರ್, ಹಾಗೂ ಪೂರ್ಣಗೊಳಿಸಿರುವ ತನ್ನ ಕೆಲಸಗಳ ಪಟ್ಟಿಯನ್ನ ಗೋಡೆಗೆ ಅಂಟಿಸಿ ಅತುಲ್​ ಸುಭಾಷ್​ ತನ್ನ ಬದುಕಿಗೆ ಕೊನೆಹಾಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್