ಮಾಹಿತಿ ಪ್ರಕಾರ, ಬಡಗಾಂವ್ ಧಸನ್ ಪೊಲೀಸ್ ಠಾಣಾ ವ್ಯಾಪ್ತಿಯ ದರಗ್ವಾನ್ ಗ್ರಾಮದಲ್ಲಿ ಭಾನುವಾರ ರಾತ್ರಿ ರಸ್ತೆ ಅಪಘಾತದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು 50 ವರ್ಷದ ಘುರ್ಕಾ ಲೋಧಿ ಎಂಬ ರೈತ ಸಾವನ್ನಪ್ಪಿದ್ದರು. ಸೋಮವಾರ ಬೆಳಗ್ಗೆ ಅವರ ಕುಟುಂಬಕ್ಕೆ ಈ ಸುದ್ದಿ ತಿಳಿದಿದ್ದು ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿದೆ. ಪ್ರತಿಭಟನೆಯಲ್ಲಿ ಗ್ರಾಮಸ್ಥರು ಖರ್ಗಾಪುರ-ಬಡಗಾಂವ ರಸ್ತೆ ತಡೆ ನಡೆಸಿ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದರು.
ಮಾಹಿತಿ ಪಡೆದ ಬಡಗಾಂವ್ ಪೊಲೀಸ್ ಠಾಣೆ ಪ್ರಭಾರಿ ಅನು ಮೇಘಾ ಗುಪ್ತಾ ದುಬೆ ಘಟನಾ ಸ್ಥಳಕ್ಕೆ ಆಗಮಿಸಿ ರಸ್ತೆ ತಡೆ ತೆರವುಗೊಳಿಸಿದ್ದರು.ಆದರೆ, ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು, ವಾಗ್ವಾದದ ನಡುವೆ ಮಹಿಳಾ ಪೊಲೀಸ್ ಅಧಿಕಾರಿ ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಇದರಿಂದ ಕೋಪಗೊಂಡ ಯುವಕ ಪೊಲೀಸ್ ಎಂದೂ ಕೂಡ ನೋಡದೇ ತಿಗುರಿಸಿ ಕೆನ್ನೆಗೆ ಹೊಡೆದಿದ್ದಾನೆ. ಈ ಘಟನೆಯಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಮಧ್ಯ ಪ್ರವೇಶಿಸಿ ಘಟನಾ ಸ್ಥಳವನ್ನು ನಿಯಂತ್ರಿಸಿದ್ದಾರೆ.