LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ವೃತ್ತಿಪರ ಕೋರ್ಸ್​ಗಳ ನೋಂದಣಿಗೆ ಆಧಾರ್​ ಲಿಂಕ್ಡ್​ ಕಡ್ಡಾಯ: ಕೆಇಎ ಪ್ರಸ್ತಾವನೆ

ಬೆಂಗಳೂರು: ಮುಂದಿನ ವರ್ಷದಿಂದ ಎಲ್ಲಾ ವೃತ್ತಿಪರ ಕೋರ್ಸ್​ಗಳ ನೋಂದಣಿಯನ್ನು ವಿದ್ಯಾರ್ಥಿಗಳ ಆಧಾರ್​ನೊಂದಿಗೆ ಲಿಂಕ್ ಮಾಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಸ್ತಾಪಿಸಿದೆ. ಸೀಟ್​ ಬ್ಲಾಕಿಂಗ್ ದಂಧೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಪ್ರಾಧಿಕಾರವು ಇಂಥದೊಂದು ಕ್ರಮಕ್ಕೆ ಮುಂದಾಗಿದೆ. ಕೆಇಎ ಈ ಪ್ರಸ್ತಾವನೆಯನ್ನು ಈಗಾಗಲೇ ಇ-ಆಡಳಿತ ಇಲಾಖೆಗೆ ಸಲ್ಲಿಸಿದೆ.


ಭಾರತ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಇ-ಆಡಳಿತ ಇಲಾಖೆಯು ನಮ್ಮ ಪ್ರಸ್ತಾಪದ ಪರವಾಗಿದೆ ಮತ್ತು ಅವರು ಅನುಮೋದನೆಗಾಗಿ ನಮ್ಮ ಪ್ರಸ್ತಾಪವನ್ನು ಭಾರತ ಸರ್ಕಾರಕ್ಕೆ ಕಳುಹಿಸಿದ್ದಾರೆ. ಶೀಘ್ರದಲ್ಲೇ ಅನುಮೋದನೆ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪಿಟಿಐಗೆ ತಿಳಿಸಿದ್ದಾರೆ.


ವಂಚನೆ ತಡೆಯುವ ಉದ್ದೇಶದಿಂದ ಈ ಕ್ರಮ: "ಅಧಿಕೃತತೆಯನ್ನು ಖಚಿತಪಡಿಸಿಕೊಳ್ಳಲು, ನೋಂದಣಿಯಲ್ಲಿ ಯಾವುದೇ ವಂಚನೆಯನ್ನು ತಡೆಗಟ್ಟಲು ಮತ್ತು ವಿದ್ಯಾರ್ಥಿಗಳು ತಮ್ಮ ಮೊಬೈಲ್ ಫೋನ್​ಗಳಲ್ಲಿಯೇ ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಲು ಅನುಕೂಲವಾಗುವಂತೆ ಆಧಾರ್-ಲಿಂಕ್ಡ್ ನೋಂದಣಿಯನ್ನು ಪ್ರಸ್ತಾಪಿಸಲಾಗಿದೆ" ಎಂದು ಅವರು ಹೇಳಿದರು.


ವಿವಿಧ ಇಲಾಖೆಗಳಿಗೆ ಕೆಇಎ ನಡೆಸುವ ನೇಮಕಾತಿ ಪರೀಕ್ಷೆಗಳಿಗೂ ಆಧಾರ್ ಲಿಂಕ್ ಮಾಡಿದ ನೋಂದಣಿಯನ್ನು ಪರಿಚಯಿಸುವ ಯೋಜನೆಯೂ ಇದೆ ಎಂದು ಪ್ರಸನ್ನ ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡ