Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೃತ್ತಿಪರ ಕೋರ್ಸ್​ಗಳ ನೋಂದಣಿಗೆ ಆಧಾರ್​ ಲಿಂಕ್ಡ್​ ಕಡ್ಡಾಯ: ಕೆಇಎ ಪ್ರಸ್ತಾವನೆ

ಬೆಂಗಳೂರು: ಮುಂದಿನ ವರ್ಷದಿಂದ ಎಲ್ಲಾ ವೃತ್ತಿಪರ ಕೋರ್ಸ್​ಗಳ ನೋಂದಣಿಯನ್ನು ವಿದ್ಯಾರ್ಥಿಗಳ ಆಧಾರ್​ನೊಂದಿಗೆ ಲಿಂಕ್ ಮಾಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಸ್ತಾಪಿಸಿದೆ. ಸೀಟ್​ ಬ್ಲಾಕಿಂಗ್ ದಂಧೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಪ್ರಾಧಿಕಾರವು ಇಂಥದೊಂದು ಕ್ರಮಕ್ಕೆ ಮುಂದಾಗಿದೆ. ಕೆಇಎ ಈ ಪ್ರಸ್ತಾವನೆಯನ್ನು ಈಗಾಗಲೇ ಇ-ಆಡಳಿತ ಇಲಾಖೆಗೆ ಸಲ್ಲಿಸಿದೆ.


ಭಾರತ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಇ-ಆಡಳಿತ ಇಲಾಖೆಯು ನಮ್ಮ ಪ್ರಸ್ತಾಪದ ಪರವಾಗಿದೆ ಮತ್ತು ಅವರು ಅನುಮೋದನೆಗಾಗಿ ನಮ್ಮ ಪ್ರಸ್ತಾಪವನ್ನು ಭಾರತ ಸರ್ಕಾರಕ್ಕೆ ಕಳುಹಿಸಿದ್ದಾರೆ. ಶೀಘ್ರದಲ್ಲೇ ಅನುಮೋದನೆ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪಿಟಿಐಗೆ ತಿಳಿಸಿದ್ದಾರೆ.


ವಂಚನೆ ತಡೆಯುವ ಉದ್ದೇಶದಿಂದ ಈ ಕ್ರಮ: "ಅಧಿಕೃತತೆಯನ್ನು ಖಚಿತಪಡಿಸಿಕೊಳ್ಳಲು, ನೋಂದಣಿಯಲ್ಲಿ ಯಾವುದೇ ವಂಚನೆಯನ್ನು ತಡೆಗಟ್ಟಲು ಮತ್ತು ವಿದ್ಯಾರ್ಥಿಗಳು ತಮ್ಮ ಮೊಬೈಲ್ ಫೋನ್​ಗಳಲ್ಲಿಯೇ ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಲು ಅನುಕೂಲವಾಗುವಂತೆ ಆಧಾರ್-ಲಿಂಕ್ಡ್ ನೋಂದಣಿಯನ್ನು ಪ್ರಸ್ತಾಪಿಸಲಾಗಿದೆ" ಎಂದು ಅವರು ಹೇಳಿದರು.


ವಿವಿಧ ಇಲಾಖೆಗಳಿಗೆ ಕೆಇಎ ನಡೆಸುವ ನೇಮಕಾತಿ ಪರೀಕ್ಷೆಗಳಿಗೂ ಆಧಾರ್ ಲಿಂಕ್ ಮಾಡಿದ ನೋಂದಣಿಯನ್ನು ಪರಿಚಯಿಸುವ ಯೋಜನೆಯೂ ಇದೆ ಎಂದು ಪ್ರಸನ್ನ ಹೇಳಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ