ಬೀಳಗಿ: ಬೀಳಗಿ ಕ್ರಾಸ್ ಸಮೀಪದ ರಿಲಯನ್ಸ್ ಪೆಟ್ರೋಲ್ ಪಂಪ ಪಕ್ಕದ ರಾಷ್ಟ್ರೀಯ ಹೆದ್ದಾರಿಯ ಮೇಲೆ ಬುಧವಾರ ಬೆಳಗ್ಗೆ 8 ಗಂಟೆಗೆ ಖಾಸಗಿ ಬಸ್ಸು ಪಲ್ಟಿಯಾದ ಘಟನೆ ಸಂಭವಿಸಿದೆ.
ಬಸ್ಸು ಹೈದರಾಬಾದ ದಿಂದ ಗೋವಾ ಕಡೆಗೆ ಹೋರಡಿದ್ದು ವಾಹನ ಚಾಲಕನ ಅತಿಯಾದ ವೇಗ ಈ ಘಟನೆಗೆ ಕಾರಣವಾಗಿದೆ ಮಳೆಯಿಂದಾಗಿ ರಸ್ತೆ ಪಕ್ಕ ನಿಂತಿರುವ ಜಮಖಂಡಿ ತಾಲ್ಲೂಕಿನ ಕುಂಚನೂರ ಗ್ರಾಮದ ಅಮಸಿದ್ದ ಕಾಂಬಳೆ(34) ಮೇಲೆ ಬಸ್ಸು ಹಾಯ್ದು ಹೋದ ಕಾರಣ ವ್ಯಕ್ತಿ ಸ್ಥಳದಲ್ಲೆ ಸಾವನಪ್ಪಿದ್ದಾನೆ.
ಬಸ್ಸಿನ ಚಾಲಕ ಪರಾರಿಯಾಗಿದ್ದು ಅದರಲ್ಲಿರುವ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್, ಡಿವೈಎಸ್ಪಿ ಗಜಾನನ ಸುತಾರ, ಸಿಪಿಐ ಹನಮಂತ ಸನಮನಿ ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೇಟಿ ನೀಡಿ ರಸ್ತೆಯ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.