Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡ ಪ್ರೇಮಿ ಮಲ್ಲಿಕಾರ್ಜುನ ಖಂಡಮ್ಮನವರನ್ನು ಸನ್ಮಾನಿಸುತ್ತಿರುವುದು ಶ್ಲಾಘನೀಯ: ನಟ  ದೊಡ್ಡಣ್ಣ

ಗದಗ06: ನಟರಂಗ ಕಲ್ಚರಲ್ ಅಕಾಡೆಮಿ ಆಂಡ್ ಟ್ರಸ್ಟ್ (ರಿ)  ಗದಗ ವತಿಯಿಂದ ಮಕ್ಕಳ ಕಲರವ-೨೦೨೪ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ  ಗಾವಿ- ಗದಗದಲ್ಲಿರುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಜರುಗಿದ ಸಮಾರಂಭದ ಉದ್ಘಾಟನೆಯನ್ನು  ಪ್ರೊ. ವಿಷ್ಣುಕಾಂತ ಎಸ್. ಚಟಪಲ್ಲಿ ಮಾನ್ಯ ಕುಲಪತಿಗಳು, ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ವಿಶ್ವವಿದ್ಯಾಲಯ ಗದಗ,
ಗೌರವಾಧ್ಯಕ್ಷತೆಯನ್ನು ಡಾ. ರಾಜಶೇಖರ ಮ್ಯಾಗೇರಿ ಸಹಾಯಕ ಪ್ರಾಧ್ಯಾಪಕರು ಹಾಗೂ ಮಾಜಿ ವೈದ್ಯಕೀಯ ಅಧೀಕ್ಷಕರು ಕೋವಿಡ್ ವಾರಿಯರ‍್ಸ್, ಅಧ್ಯಕ್ಷತೆಯ್ನು ಶ್ರೀಯುತ ಪ್ರೊ. ಡಾ. ಸುರೇಶ ವಿ. ನಾಡಗೌಡರ ಕುಲಸಚಿವರು, ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ವಿಶ್ವವಿದ್ಯಾಲಯ ಗದಗ, ಹಿರಿಯ ಚಿತ್ರನಟ ದೊಡ್ಡಣ, ಬ್ಯಾಡಗಿಯ ಬಿಜೆಪಿ ಮುಖಂಡರಾದ ಮುರಿಗೆಪ್ಪ ಶೆಟ್ಟರ್, ಮಲ್ಲಿಕಾರ್ಜುನ ಖಂಡಮ್ಮನವರು ಇವರುಗಳಿಂದ ಸಸಿಗೆ ನೀರೆರುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು.

ಈ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಹಿರಿಯ ಚಲನಚಿತ್ರ ನಟರಾದ ಶ್ರೀಯುತ ದೊಡ್ಡಣ್ಣರವರು ಮಾತನಾಡಿ ಗದುಗಿನ ವೀರನಾರಾಯಣ ದೇವಸ್ಥಾನದ ಬಗ್ಗೆ ಹಾಗೂ ಪಂಡಿತ ಪುಟ್ಟರಾಜ ಗವಾಯಿಗಳವರ ಮತ್ತು ಕೊಪ್ಪಳ ಗವಿಸಿದ್ದೇಶ್ವರ ಬಗ್ಗೆ ಮಾತನಾಡಿದರು.

ಗದುಗಿನ ರೋಟರಿ ಸೆಂಟ್ರಲ್ ಅಧ್ಯಕ್ಷರಾದ ವಿಜಯಕುಮಾರ ಹಿರೇಮಠ, ಶ್ರೀಮತಿ ಜಾನಕಿ ಚಿಕ್ಕನಗೌಡ ವೇದಿಕೆಯ ಮೇಲೆ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಕಳಸಾಪೂರ ಬಸವಕೇಂದ್ರದ ಕಾರ್ಯಾಧ್ಯಕ್ಷರು, ಕನ್ನಡ ಅಭಿಮಾನಿಗಳಾದ ಮಲ್ಲಿ ಕಾರ್ಜುನ ಖಂಡಮ್ಮನವರವರನ್ನು ಸನ್ಮಾನಿಸಿ ಸನ್ಮಾನಿತರ ಬಗ್ಗೆ ಹಿರಿಯ ನಟ ದೊಡ್ಡಣ್ಣರವರು ಮಾತನಾಡಿ ಹಿರಿಯರಾದ ಮಲ್ಲಿಕಾರ್ಜುನ ಖಂಡಮ್ಮನವರ ಅವರ ಕನ್ನಡ ಪ್ರೇಮವನ್ನು ಅವರ ವೇಷಭೂಷಣ ಕಂಡು ಹರ್ಷ ವ್ಯಕ್ತಪಡಿಸುತ್ತ ಕನ್ನಡದ ಬಗ್ಗೆ ಅವರ ಪ್ರೇಮ ಮತ್ತು ಕನ್ನಡ ಭಾಷೆಯ ಬಗ್ಗೆ ಇಂದಿನ ಯುವಕರಿಗೆ ಜಾಗೃತಿ ಮೂಡಿಸುತ್ತಿರುವ ಕಾರ್ಯ ಅತ್ಯಂತ
ಶ್ಲಾಘನೀಯವಾಗಿದೆ. ಈಗ ಕನ್ನಡ ಭಾಷೆ ಉಳಿದಿರುವುದು ಗ್ರಾಮೀಣ ಪ್ರದೇಶದ ಜನತೆಯಿಂದ ಹಾಗೂ ಕನ್ನಡದ ಕಲಾವಿದರಿಂದ ಭಾಷೆ ಉಳಿದಿದೆ.

ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸ ಹೊಂದಿದೆ. ಇಂತಹ ಶ್ರೀಮಂತ ಭಾಷೆಯನ್ನು ಮನೆಯಿಂದಲೆ ಮತ್ತು ಮಕ್ಕಳಿಗೆ ಅಮ್ಮ, ಅಪ್ಪ ಎಂಬ ಕನ್ನಡ ನುಡಿಮುತ್ತುಗಳನ್ನು ಪ್ರಾರಂಭಿಸಿ ಕನ್ನಡ ಉಳಿಸಿ ಬೆಳೆಸೋಣ ಎಂದು ಭಾವನಾತ್ಮಕವಾಗಿ ನುಡಿದರು. ಅದರಲ್ಲೂ ಕನ್ನಡ ಅಭಿಮಾನಿ ಮಲ್ಲಿಕಾರ್ಜುನ ಖಂಡಮ್ಮನವರನ್ನು ಸನ್ಮಾನಿಸುತ್ತಿರುವುದು ನನಗೆ ಅತೀವ ಸಂತಸ ತಂದಿದೆ.

ಅವರ ಕನ್ನಡ ಪ್ರೇಮವನ್ನು ಎಷ್ಟು ಹೊಗಳಿದರು ಸಾಲದು ಎಂದು ಹೇಳಿದರು. ಈ ಕಾರ್ಯಕ್ರಮವನ್ನು ಆಯೋಜಿಸಿರುವ ನಟರಂಗ್ ಸಂಸ್ಥೆಯ ಅಧ್ಯಕ್ಷರಾದ ಸೋಮಶೇಖರ ಚಿಕ್ಕಮಠ ಇವರು ಇಂದಿನ ಮಕ್ಕಳಿಗೆ ಅವರ ಪ್ರತಿಭೆಯನ್ನು ಗುರುತಿಸಿ ಅವರಿಗೆ ಕಲೆ, ಸಾಹಿತ್ಯ, ಸಂಗೀತ, ನೃತ್ಯ, ನಾಟಕ ಇಂತಹ ವಿವಿಧ ಸಾಹಿತ್ಯಿಕ ಚಟುವಟಿಕೆಗಳಲ್ಲಿ ತರಬೇತಿ ನೀಡುತ್ತಿರುವುದು ಅತ್ಯಂತ ಶ್ಲಾಘನೀಯ ಎಂದು ಹೇಳುತ್ತ ಇಂತಹ ಕಾರ್ಯಕ್ರಮದಲ್ಲಿ ಸಮಾಜದಲ್ಲಿ ಎಲೆ ಮರೆಯಾಗಿ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಸನ್ಮಾನಿಸಿ ಗೌರವ ಸಲ್ಲಿಸುತ್ತಿರುವುದು ನಟರಂಗ ಸಂಸ್ಥೆಯು ಬಹುದೊಡ್ಡ ಕಾರ್ಯಕ್ರಮ ಮಾಡುತ್ತಿದೆ. ಈ ಸಂಸ್ಥೆಯು ಇನ್ನೂ ಹೆಚ್ಚಿನ ರೀತಿಯಲ್ಲಿ ಬೆಳೆಯಲು ಎಂದು ಶುಭ ಹಾರೈಸಿದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ