Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಂಗ್ಲಾದವರಿಗೆ ನಕಲಿ ಆಧಾರ್ ಕಾರ್ಡ್‌ ಮಾಡಿಕೊಡುತ್ತಿದ್ದ ಆರೋಪಿ ಬಂಧನ

ಬೆಂಗಳೂರು, ನವೆಂಬರ್​ 29: ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತದೊಳಗೆ ನುಸುಳಿ ಬಂದಿದ್ದವರಿಗೆ ನಕಲಿ ಗರುತಿನ ಚೀಟಿ ಮಾಡಿಕೊಡುತ್ತಿದ್ದ ಆರೋಪಿಯನ್ನು ಸೂರ್ಯಸಿಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅರ್ನಾಬ್ ಮಂಡಲ್ ಬಂಧಿತ ಆರೋಪಿ. ಆರೋಪಿ ಅರ್ನಾಬ್ ಮಂಡಲ್ ಮೂಲತಃ ಪಶ್ಚಿಮ ಬಂಗಾಳದವನು. ಈ ಬೆಂಗಳೂರು ಹೊರವಲಯದ ಸೂರ್ಯಸಿಟಿ ಬಳಿ ಸೈಬರ್​ ಸೆಂಟರ್ ತೆರೆದಿದ್ದನು.





ಈ ಬಗ್ಗೆ ಪೊಲೀಸರಿಗೆ ಅನುಮಾನ ವ್ಯಕ್ತವಾಗಿ, ತನಿಖೆ ಆರಂಭಿಸಿದಾಗ, ಆರೋಪಿ ಅರ್ನಾಬ್​ ಮಂಡಲ್​ ಸೈಬರ್​ ಸೆಂಟರ್​ನಲ್ಲಿ ನಡೆಯುತ್ತಿರುವ ಅಕ್ರಮ ದಂಧೆ ಬಗ್ಗೆ ತಿಳಿದಿದೆ. ಖಚಿತ ಮಾಹಿತಿ ಪಡೆದುಕೊಂಡ ಪೊಲೀಸರು ಗುರುವಾರ ಸೈಬರ್​ ಸೆಂಟರ್​ ಮೇಲೆ ದಾಳಿ ಮಾಡಿದ್ದಾರೆ. ದಾಳಿ ವೇಳೆ ಸಾಕಷ್ಟು ನಕಲಿ ಆಧಾರ್​ ಕಾರ್ಡ್​ ಪತ್ತೆಯಾಗಿವೆ. ಹಾಗೆಯೇ 18 ಮನೆಗಳ ಬಾಡಿಗೆ ಅಗ್ರಿಮೆಂಟ್​​ ಪತ್ತೆಯಾಗಿವೆ.







ಈ ಬಗ್ಗೆ ಬೆಂಗಳೂರು ಗ್ರಾಮಾಂತರ ಎಸ್​ಪಿ ಸಿ.ಕೆ.ಬಾಬಾ ಮಾತನಾಡಿ, ಬಾಂಗ್ಲಾ ಪ್ರಜೆಗಳಿಗೆ ಭಾರತದ ನಕಲಿ ಆಧಾರ್​​​, ಐಡಿ ಕಾರ್ಡ್​ ಮಾಡಿಕೊಡ್ತಿದ್ದನು. ಕಳೆದ ಒಂದು ವರ್ಷದಿಂದ ಇದೇ ರೀತಿ ನಕಲಿ ದಾಖಲೆ ಸೃಷ್ಟಿಸಿ ಕೊಡುತ್ತಿದ್ದನು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಆರೋಪಿಯನ್ನು ಬಂಧಿಸಲಾಗಿದೆ. ಪೊಲೀಸರ ದಾಳಿ ವೇಳೆ ನಕಲಿ ದಾಖಲಾತಿಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.

18 ಮನೆಗೆ ಸಂಬಂಧಿಸಿದ ಲೀಸ್ ಅಗ್ರಿಮೆಂಟ್,​ 55 ಆಧಾರ್​ ಕಾರ್ಡ್, 40 ಬ್ಯಾಂಕ್ ದಾಖಲಾತಿ, 2 ಕಂಪ್ಯೂಟರ್, 2 ಮೊಬೈಲ್ ಜಪ್ತಿ ಮಾಡಲಾಗಿದೆ. ಒಂದು ಕಾರ್ಡ್​ ಮಾಡಿಕೊಡಲು 8 ಸಾವಿರದಿಂದ 10 ಸಾವಿರ ರೂ. ಪಡೆಯುತ್ತಿದ್ದನು. ನಕಲಿ ಐಡಿ ಕಾರ್ಡ್​ಗಳ ದಂಧೆಯಲ್ಲಿ ಇನ್ನೂ ಹಲವರು ಶಾಮೀಲಾಗಿದ್ದಾರೆ. ನಕಲಿ ಐಡಿ ಕಾರ್ಡ್​ಗಳ ದಂಧೆ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ