Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಧನೆ ಮಹಿಳೆಯರಿಗೆ ಅಸಾಧ್ಯವಾದ ಕೆಲಸವಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ

*ದಿನಪತ್ರಿಕೆಯ  ಡಿಜಿಟಲ್‌ ಶಕ್ತಿ ಸಂವಾದದಲ್ಲಿ ಸಚಿವರ ಹೇಳಿಕೆ*

 *ಬೆಂಗಳೂರು:* ಮಹಿಳೆಯರಿಗೆ ಸಾಧನೆ ಮಾಡಲು ಕಷ್ಟ ಆಗಬಹುದು, ಆದರೆ ಅಸಾಧ್ಯವಾದ ಕೆಲಸವಂತು ಅಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ವಿಜಯ ಕರ್ನಾಟಕ ಡಿಜಿಟಲ್‌ ವತಿಯಿಂದ ಮೌಂಟ್‌ ಕಾರ್ಮೆಲ್‌ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಶಕ್ತಿ ಸಂವಾದ - 2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ನಾನು ಗ್ರಾಮೀಣ ಭಾಗದಿಂದ ಬಂದ ಹೆಣ್ಣು ಮಗಳು, ನಾನು ಸವೆಸಿದ ಹಾದಿ ಅಷ್ಟು ಸುಲಭವಾಗಿರಲಿಲ್ಲ. ಕೇವಲ ನನ್ನದಷ್ಟೇ ಕಥೆಯಲ್ಲ, ಇಲ್ಲಿರುವ ಪ್ರತಿಯೊಬ್ಬ ಮಹಿಳೆಯರದ್ದು ಅವರದ್ದೇ ಆದ ಕಥೆಯಿದೆ ಎಂದರು.

ಇದು ನನ್ನ ಹೃದಯಕ್ಕೆ ಹತ್ತಿರವಾಗಿರುವ ಸಂವಾದ, ಹಿಂದಿನ ಕಾಲದಲ್ಲಿ ಮಹಿಳೆಯರನ್ನು ಕೇವಲ ಅಡಿಗೆ ಮಾಡಲು, ಮಕ್ಕಳನ್ನು ಹೇರುವುದಕ್ಕಷ್ಟೇ ಸೀಮಿತ ಮಾಡಲಾಗಿತ್ತು. ಈಗ ಕಾಲ ಬದಲಾಗಿದೆ. ಹಿಂದಿನ ಕಾಲವನ್ನು ಮೆಟ್ಟಿನಿಂತು ಬದಲಾಗಿದ್ದೀವಿ, ಈ ಸಮಾಜದ ಸೃಷ್ಟಿಕರ್ತರು ನಾವು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಈಗ ಮಹಿಳೆಯರು ಅವಕಾಶವನ್ನು ಕೇಳಿಕೊಂಡು ಹೋಗುವ ಪರಿಸ್ಥಿತಿ ಇಲ್ಲ, ಇಂದು ಮಹಿಳೆಯರಿಗೆ ಅವಕಾಶಗಳು ಹುಡುಕಿಕೊಂಡು ಬರುತ್ತಿರುವ ಸನ್ನಿವೇಶವನ್ನು ಸೃಷ್ಟಿ ಮಾಡಿದ್ದೇವೆ. ಶೈಕ್ಷಣಿಕವಾಗಿ ನಮ್ಮ ಮಹಿಳೆಯರು ಸಾಕಷ್ಟು ಮುಂದಿದ್ದಾರೆ ಎಂದರು.

ಈ ಹಿಂದೆ ಗಂಡ ಸತ್ತರೆ ಮಹಿಳೆಯರಿಗೆ ಬದುಕುವ ಹಕ್ಕಿಲ್ಲ ಎನ್ನುವಂಥ ಪರಿಸ್ಥಿತಿ ಇತ್ತು. ಇವತ್ತು ಸಾಕಷ್ಟು ಬದಲಾಗಿದೆ. ಮಹಿಳೆಯರು ಮನಸ್ಸು ಮಾಡಿದರೆ ಮತದಾನದ ಮೂಲಕ ಸರ್ಕಾರವನ್ನೇ ತರಬಹುದು, ಇಂದು ಮಹಿಳೆಯರಿಗೆ ಒಗ್ಗಟ್ಟು ಜಾಸ್ತಿಯಿದ್ದು, ವಿಚಾರ ಮಾಡುವ ಮನಸ್ಥಿತಿ ಹೊಂದಿದ್ದಾರೆ, ಹೆಣ್ಣು ಕೇವಲ ಭವಿಷ್ಯ ಅಲ್ಲ, ವರ್ತಮಾನ ಕೂಡ  ಎಂದು ಸಚಿವರು ಹೇಳಿದರು.

ಇವತ್ತು ನಮ್ಮ ಸರ್ಕಾರ ಕೂಡ ಮಹಿಳೆಯರಿಗೆ ಸಾಕಷ್ಟು ಅವಕಾಶಗಳನ್ನು ಕೊಡುತ್ತಿದೆ. ಮಹಿಳೆಯರಿಗಾಗಿ ಜಾರಿಗೆ ತರಲಾಗಿರುವ ಶಕ್ತಿ ಯೋಜನೆ, ಐಟಿ-ಬಿಟಿಯಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರಿಂದ ಹಿಡಿದು ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಸಾಕಷ್ಟು ಅನುಕೂಲ ಆಗಿದೆ. ಇಲ್ಲಿವರೆಗೂ ನಮ್ಮ ಸರ್ಕಾರ 1.26 ಕೋಟಿ ಮಹಿಳೆಯರಿಗೆ ತಲಾ 48 ಸಾವಿರ ರೂಪಾಯಿಯಂತೆ ಗೃಹಲಕ್ಷ್ಮೀ ಯೋಜನೆ ಮೂಲಕ ಹಣ ಸಂದಾಯ ಮಾಡಿದೆ. ಗೃಹಲಕ್ಷ್ಮೀ ಯೋಜನೆಯಿಂದ ಜೀವನ ಬದಲಾಗುತ್ತೆ ಎಂದು ಹೇಳುವುದಿಲ್ಲ, ಆದರೆ ತಕ್ಕ ಮಟ್ಟಿಗೆ ಮಹಿಳೆಯರಿಗೆ ಅನುಕೂಲವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಚಲನಚಿತ್ರ ನಿರ್ಮಾಪಕರಾದ ಗೀತಾ ಶಿವರಾಜ್ ಕುಮಾರ್, ಬಿಎಂಟಿಎಫ್ ಎಡಿಜಿಪಿ ಡಿ.ರೂಪಾ ಮೌದ್ಗಿಲ್, ಚಲನಚಿತ್ರ ನಟಿ ಶ್ವೇತಾ ಶ್ರೀವತ್ಸ, ಮೌಂಟ್ ಕಾರ್ಮೆಲ್ ಕಾಲೇಜಿನ ನಿರ್ದೇಶಕರು ಹಾಗೂ ಕಾರ್ಯದರ್ಶಿ ಸಿಸ್ಟರ್ ಎಂ.ಅಲ್ದಿನಾ, ಪ್ರಾಂಶುಪಾಲರಾದ ಪ್ರೊ.ಜಾರ್ಜ್ ಲೇಖಾ, ವಿಜಯ ಕರ್ನಾಟಕ ಡಿಜಿಟಲ್ ಸಂಪಾದಕರಾದ ಪ್ರಸಾದ್ ನಾಯಿಕ ಸೇರಿದಂತೆ ಮೌಂಟ್ ಕಾರ್ಮೆಲ್ ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ