ಇತ್ತೀಚೆಗೆ ದಾವಣಗೆರೆಯಲ್ಲಿ ಸಾಮಾಜಿಕ ಕಾರ್ಯಕರ್ತ ಟಿ. ಅಜ್ಗರ್ ಮೇಲೆ ಕೊಲೆ ಯತ್ನ ನಡೆದಿತ್ತು. ಈ ವೇಳೆ ಗಾಯಗೊಂಡ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ನಡೆದ ಎರಡು ವಾರಗಳು ಕಳೆಯುತ್ತಿದೆ. ಈಗ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸವಿತಾಬಾಯಿ ಮಲ್ಲೇಶ್ ನಾಯ್ಕ ಬಂಧನ ಆಗಿದೆ. ಇವರು ಮಾಡೆಲ್ ಹಾಗೂ ನಟಿ ಕೂಡ ಆಗಿದ್ದರು. ಅವರ ಮೇಲೆ ಕೊಲೆಗೆ ಸಾಥ್ ನೀಡಿದ ಆರೋಪ ಇದೆ.
ಸವಿತಾಬಾಯಿ ಕಾಂಗ್ರೆಸ್ ನಾಯಕಿ ಮಾತ್ರವಲ್ಲ, ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದರು. ಈ ಮೊದಲು ಕೆಲವು ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಅವರು ಮಾಡೆಲ್ ಕೂಡ ಆಗಿದ್ದರು. ಮಾಡೆಲ್ ಆಗಿ ಕೆಲವು ಉತ್ಪನಗಳ ಪ್ರಚಾರ ಕೂಡ ಮಾಡಿದ್ದಾರೆ. ಕೊಲೆ ಯತ್ನ ಪ್ರಕರಣದ ಪ್ರಮುಖ ಆರೋಪಿ ರೌಡಿ ಶೀಟರ್ ಖಾಲೀದ್ ಪೈಲ್ವಾನ್ಗೆ ಸಾಥ್ ನೀಡಿದ ಆರೋಪ ಇವರ ಮೇಲೆ ಇದೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.