ಬಳ್ಳಾರಿ. ಜೂ. 13:ಮುಂಗಾರು ಮಳೆ ಸಕಾಲದಲ್ಲಿ ಬಳ್ಳಾರಿ ಜಿಲ್ಲೆಗೆ ಬಂದಿರುವುದರಿಂದ ರೈತರು ತಮ್ಮ ತಮ್ಮ ಹೊಲಗಳಲ್ಲಿ ಕೃಷಿ ಚಟುವಟಿಕೆಯನ್ನು ಆರಂಭಿಸಿದ್ದಾರೆ ಅವರಿಗೆ ಸಕಾಲದಲ್ಲಿ ಉತ್ತಮ ಬೀಜ ಮತ್ತು ರಸಗೊಬ್ಬರವನ್ನು ಸರಬರಾಜು ಮಾಡಲು ಕೃಷಿ ಇಲಾಖೆಗೆ ನಿರ್ದೇಶನ ನೀಡಬೇಕೆಂದು ಸಿಎಂ ಡಿಕೆ ಶಿವಕುಮಾರ್ ಅವರಲ್ಲಿ ಮನವಿ ಮಾಡುತ್ತೇನೆ ಎಂದು ಪಿ ಎಲ್ ಬ್ಯಾಂಕ್ ಅಧ್ಯಕ್ಷ ಕೊರಲಗುಂದ ಕೇಶವರೆಡ್ಡಿ ಮನ್ವಿ ಮಾಡಿದ್ದಾರೆ.
ಅವರು ಇಂದು ತಮ್ಮ ಕಚೇರಿಯಲ್ಲಿ ಭೇಟಿ ಮಾಡಿದ ಪತ್ರಕರ್ತರ ಉದ್ದೇಶಿಸಿ ಮಾತನಾಡಿ, ಜಿಲ್ಲೆ ಮತ್ತು ರಾಜ್ಯದಲ್ಲಿ ಸಕಾಲಕ್ಕೆ ಮುಂಗಾರು ಮಳೆ ಆಗಮನವಾಗಿದೆ ರೈತರಿಗೆ ಉತ್ತಮ ಗುಣಮಟ್ಟದ ಬೀಜ ಮತ್ತು ರಸಗೊಬ್ಬರವನ್ನು ಸರಬರಾಜು ಮಾಡಲು ಸರ್ಕಾರ ಮುಂದಾಗಬೇಕು ಮತ್ತು ತುಂಗಭದ್ರ ಜಲಾಶಯದ ಹೆಚ್ ಹೆಚ್ ಸಿ ಮತ್ತು ಎಲ್ ಎಲ್ ಸಿ ಕಾಲುವೆಗಳನ್ನು ದುರಸ್ತಿಗೊಳಿಸಿ ಜಲಾಶಯದ ನೀರನ್ನು ಜಮೀನುಗಳಿಗೆ ನೀರನ್ನು ಹಾಯಿಸಲು ಕ್ರಮ ಕೈಗೊಳ್ಳಬೇಕು ಮತ್ತು ಅದೇ ರೀತಿಯಾಗಿ ಜಿಲ್ಲೆಯ ಮತ್ತು ರಾಜ್ಯದ ಎಲ್ಲಾ ಸಹಕಾರ ಸಂಘಗಳಿಗೆ ಸರ್ಕಾರದಿಂದ ನೀಡಲಾಗುವ ಹಣವನ್ನು ಸಕಾಲಕ್ಕೆ ಬಿಡುಗಡೆ ಮಾಡಬೇಕೆಂದು ಅವರು ಇಂದು ನೂತನ ಸಿಎಂ ಡಿಕೆ ಶಿವಕುಮಾರ್ ಅವರಲ್ಲಿ ಒತ್ತಾಯಿಸಿದರು.