Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೈನ ತತ್ವಶಾಸ್ತ್ರ ಅಳವಡಿಕೆ ಅತ್ಯುತ್ತಮ ಜೀವನದ ದಾರಿ: ವಿನೋದ ದೊಡ್ಡಣ್ಣವರ

ಬೆಳಗಾವಿ.ಮೇ 08: ಜೈನ ಧರ್ಮ ಇದೊಂದು ಕೇವಲ ಧರ್ಮವಾಗದೆ ಉತ್ತಮ ಜೀವನಶೈಲಿಯ ಜ್ಞಾನ ನೀಡುವ ತತ್ವಶಾಸ್ತ್ರಗಳನ್ನು ಹೊಂದಿದ ಧರ್ಮವಾಗಿದೆ. ಜೈನ ತತ್ವಶಾಸ್ತ್ರಗಳನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಅತ್ಯುತ್ತಮ ಜೀವನದ ದಾರಿಯಾಗಲಿದೆ ಎಂದು ಭರತೇಶ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ವಿನೋದ ದೊಡ್ಡಣ್ಣವರ ಅವರು ಇಂದಿಲ್ಲಿ ಅಭಿಪ್ರಾಯಪಟ್ಟರು.

ಬುಧವಾರದಂದು ಬೆಳಗಾವಿ ಅನಿಗೋಳದ ಶ್ರೀ ಆದಿನಾಥ ಭವನದಲ್ಲಿ ಜೈನ ಆಗಮ ಮಿಷನ ವತಿಯಿಂದ ಆಯೋಜಿಸಲಾದ ೮ ನೇ ಧಾರ್ಮಿಕ ಶಿಕ್ಷಣ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ಇಡಿ ವಿಶ್ವದಲ್ಲಿ ಜೈನ ತತ್ವಜ್ಞಾನ ಮತ್ತು ತತ್ವಶಾಸ್ತ್ರಗಳ ಬಗ್ಗೆ  ಅಧ್ಯಯನಗಳು ನಡೆಯುತ್ತಿವೆ. ಅನಾದಿ ಕಾಲದಿಂದಲೂ ಸಹ ಜೈನ ತತ್ವಶಾಸ್ತ್ರ ಅನುಕರಣೆಯಲ್ಲಿದೆ.

ಇಂದು ಅನೇಕ ಹಿರಿಯ ಅಧಿಕಾರಿಗಳು, ಸಾಹಿತಿಗಳು , ವಿಜ್ಞಾನಿಗಳು ಚಲನಚಿತ್ರ ನಟರು ಸೇರಿದಂತೆ ಅನೇಕರು ಜೈನ ತತ್ವಶಾಸ್ತ್ರಗಳನ್ನು ಪಾಲಿಸುತ್ತ
ಯಶಸ್ವಿ ಜಿವನ ನಡೆಸುತ್ತಿದ್ದಾರೆಂದು ಅವರು ಹೇಳಿದರು.

ಇಂದು ಧಾರ್ಮಿಕ ಶೀಕ್ಷಣ ಎಲ್ಲಿಯೂ ಸಿಗುತ್ತಿಲ್ಲ . ಬೆಳಗಾವಿ ಅನಗೋಳ ಭಾಗದ ಶ್ರಾವಕರು ಕಳೆದ ೮ ವರ್ಷಗಳಿಂದ ಧಾರ್ಮಿಕ ಶಿಕ್ಷಣ ಶಿಬಿರವನ್ನು ಆಯೋಜಿಸುತ್ತ ಬಂದಿದ್ದು, ಈ ಕಾರ್ಯ ಶ್ಲಾಘನೀಯವಾಗಿದೆ,. ಇಂತಹ ಕಾರ್ಯಗಳು ಮುಂದೆಯು ನಡೆಯಲಿ ಎಂದು ಅವರು ಹಾರೈಸಿದರು.

ಸಮಾರಂಭದಲ್ಲಿ ಹಿರಿಯ ನ್ಯಾಯವಾದಿ ರವಿರಾಜ ಪಾಟೀಲ ಅವರು ಮಾತನಾಡಿ, ಇಂದಿನ ಮಕ್ಕಳಿಗೆ ಧಾರ್ಮಿಕ ಶೀಕ್ಷಣ ನೀಡುವುದು ಅಗತ್ಯವಾಗಿದೆ. ಈ
ಧಾರ್ಮಿಕ ಶಿಕ್ಷಣದ ಮೂಲಕ ಮಕ್ಕಳಲ್ಲಿ ಉತ್ತಮ ಸಂಸ್ಕಾರಗಳು ಬೆಳೆಯಲು ಸಹಕಾರಿಯಾಗುತ್ತವೆ. ಇಂದಿನ ಈ ಧಾರ್ಮಿಕ ಶಿಬಿರದಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿದೆ ಎಂದು ಹೇಳಿದ ಅವರು ಈ ಶಿಬರವನ್ನು ಆಯೋಜಿಸಿದ ಆಯೋಜಕರ ಪ್ರಯತ್ನಕ್ಕೆ ಯಶಸ್ಸು ದೊರೆಯಲಿ ಎಂದು ಅವರು ಹೇಳಿದರು.

ಸಮಾರಂಭದ ವೇದಿಕೆ ಮೇಲೆ ಕೆಪಿಸಿಸಿ ಸದಸ್ಯ ಸುನಿಲ ಹನಮಣ್ಣವರ, ಪ್ರಮೋದ ಪಾಟೀಲ, ರಾಜಶೇಖರ ಭೇಂಡಿಗೇರಿ ,ವಿಕಾಸ ಜೈನ, ರಿತಿಕ
ಜೈನ, ವಿಶೇಷ ಜೈನ, ಸುಬ್ರತ ಜೈನ, ಪುಷ್ಪಕ ಹನಮಣ್ಣವರ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು. ರಾಜು ಹನಮಣ್ಣವರ ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ಮಿಥುನ ಶಾಸ್ತ್ರಿ ಮತ್ತು ಅನೇಕಾಂತ ಶಾಸ್ತ್ರಿಗಳು ಧಾರ್ಮಿಕ ಶಿಕ್ಷಣ ಶಿಬಿರವನ್ನು ನಡೆಸಿ ಜೈನ ಧರ್ಮದ ಆಗಮ, ಆಚರಣೆ, ನಿಯಮಾವಳಿಗಳ ಬಗ್ಗೆ ಶಿಕ್ಷಣ ನೀಡಿದರು. ಈ ಶಿಬಿರದಲ್ಲಿ ಸುಮಾರು ೪೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ಧಾರ್ಮಿಕ ಶಿಕ್ಷಣ ಪಡೆದರು.

ನಿಗೋಳ ಆಧಿನಾಥ ಭವನದಲ್ಲಿ ಆಯೋಜಿಸಲಾದ ಜೈನ ಧಾರ್ಮಿಕ ಶಿಕ್ಷಣ ಶಿಬಿರದಲ್ಲಿ ವಿನೋದ ದೊಡ್ಡಣ್ಣವರ ಅವರು ಶಿಬಿರಾರ್ಥಿಗಳಿಗೆ ಧಾರ್ಮಿಕ ಪುಸ್ತಕವನ್ನು
ವಿತರಿಸಿದರು. ರವಿರಾಜ ಪಾಟೀಲ ಪ್ರಮೋದ ಪಾಟೀಲ,ಸುನಿಲ ಹನಮಣ್ಣವರ, ರಾಜಶೇಖರ ಭೆಂಡಿಗೇರಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ