Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಶಿಷ್ಟರಲ್ಲಿ ಒಳ ಮೀಸಲಾತಿ ನೀಡಿದರೆ ಅದು ಯಾವುದೇ ರೀತಿಯ ಉಲ್ಲಂಘನೆ ಆಗಲ್ಲ :ವಕೀಲ ವೆಂಕಟೇಶ್ ಹೆಗಡೆ 

ಬಳ್ಳಾರಿ ಆ 02 ಸುಪ್ರೀಂ ಕೋರ್ಟ್ ಒಳ ಮೀಸಲಾತಿ ನೀಡುವುದರಿಂದ ಸಂವಿಧಾನ ಉಲ್ಲಂಘನೆ ಮಾಡಿದಂತೆ ಆಗುವುದಿಲ್ಲ ಎಂಬ ತೀರ್ಪು ನೀಡಿರುವುದು ಸ್ವಾಗತಾರ್ಹ.

ಇಂದು ಸುಪ್ರೀಂ ಕೋರ್ಟ್ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಒಳಮಿಸಲಾತಿಯ ನ್ಯಾಯಮೂರ್ತಿಗಳ ಚಂದ್ರಚೂಡ್‌ರನ್ನೊಳಗೊಂಡ 7 ನ್ಯಾಯಮೂರ್ತಿಗಳ ಪೀಠ ಇಂದು ಐತಿಹಾಸಿಕ ತೀರ್ಪು ನೀಡಿದೆ.  ಎಂದು   ವಕೀಲರಾದ ವೆಂಕಟೇಶ್ ಹೆಗಡೆ   ಮಾಧ್ಯಮ ಜೊತೆ ಮಾತನಾಡಿ ಪರಿಶಿಷ್ಟ ಜಾತಿಯಲ್ಲಿರುವ ಹಲವು ಜಾತಿಗಳು ಇದುವರೆಗೆ ಸಂವಿಧಾನದ ಫಲ ಪಡೆದುಕೊಂಡಿಲ್ಲ. ಇದೀಗ ಇದಕ್ಕೆ ಅವಕಾಶ ಕೊಡುವ ರೀತಿಯಲ್ಲಿ ನ್ಯಾಯಾಲಯ ತೀರ್ಪು ನೀಡಿದೆ.


ನ್ಯಾಯಾಲಯವರು ಒಂದು ವೇಳೆ ಪರಿಶಿಷ್ಟರಲ್ಲಿ ಒಳ ಮೀಸಲಾತಿ ನೀಡಿದರೆ ಅದು ಯಾವುದೇ ರೀತಿಯ ಉಲ್ಲಂಘನೆ ಆಗಲ್ಲ. ಆರ್ಟಿಕಲ್ 14 ಅಥವಾ 341(1), ಆರ್ಟಿಕಲ್ 15ರ ಉಲ್ಲಂಘನೆ ಮಾಡಿದಂತೆ ಆಗುವುದಿಲ್ಲ ಎಂಬ ತೀರ್ಪನ್ನು ನ್ಯಾಯಮೂರ್ತಿಗಳು ನೀಡಿದ್ದಾರೆ.


ಇಡೀ ದೇಶದಲ್ಲಿ ಸಂವಿಧಾನದ ರಕ್ಷಣೆಯ ಹೊಣೆ ಹೊತ್ತ ಸುಪ್ರೀಂ ಕೋರ್ಟ್ ಅದರಲ್ಲೂ ವಿಶೇಷವಾಗಿ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು ಮತ್ತೊಂದು ಮಹತ್ತರ ತೀರ್ಪು ನೀಡಿ ಸಂವಿಧಾನ ಎತ್ತಿಹಿಡಿದ್ದಾರೆ.


ಸಂವಿಧಾನ ಇರುವುದೇ ಎಲ್ಲರಿಗು ಸಮಾನವಾಗಿ ಬದುಕುವ ಅವಕಾಶ ಸಿಗಬೇಕು. ದೇಶದ ಸಂಪತ್ತು ಎಲ್ಲರಿಗೂ ಸಮಾನವಾಗಿ ಹಂಚಿಕೆ ಆಗಬೇಕು ಎಂಬ ಉದ್ದೇಶವನ್ನು ಸಾಕಾರ ಮಾಡಲು. ಅಂತಹ ಕಾರ್ಯಕ್ಕೆ ಮೀಸಲಾತಿ ಬಹಳ ಸಹಕಾರಿ ಆಗುತ್ತದೆ.


ಒಳ ಮೀಸಲಾತಿ ನೀಡುವುದರ ಹಿಂದಿನ ಉದ್ದೇಶ ಯಾರಿಗೋ ಅನ್ಯಾಯ ಮಾಡುವುದಲ್ಲ. ಬದಲಿಗೆ ದಮನಿತರ, ಹಿಂದುಳಿದವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವುದೇ ಆಗಿರುತ್ತದೆ. ಇಂತಹ ಉದ್ದೇಶಕ್ಕೆ ಯಾವುದೇ ಅಡೆ ತಡೆ ಸಂವಿಧಾನದಿಂದ ಇರಲು ಸಾಧ್ಯವಿಲ್ಲ. ಇದನ್ನು ಇಂದು ಸುಪ್ರೀಂ ಕೋರ್ಟ್ ಮತ್ತೊಮ್ಮೆ ಸಾಬೀತು ಮಾಡಿದೆ ಎಂದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ