Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭದ್ರಾ ಬಳಿಕ ಮಾಲವಿ ಜಲಾಶಯದ ಒಡ್ಡು ಒಡೆದು ನೀರು ಪೋಲು

ವಿಜಯನಗರ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿ ಎಲ್ಲರ ಆತಂಕಕ್ಕೆ ಕಾರಣವಾಗಿತ್ತು. ಇದರ ದುರಸ್ಥಿ ಕಾರ್ಯ ಯಶಸ್ವಿಯಾದ ಬೆನ್ನಲ್ಲೇ ವಿಜಯನಗರ ಜಿಲ್ಲೆಯ ಜಲಾಶಯದಲ್ಲಿ ಇಂತಹುದೇ ಬೆಳವಣಿಗೆ ಕಂಡು ಬಂದಿದೆ.

ಕೆಲ ದಿನಗಳಿಂದ ಸುರಿದ ಭಾರೀ ಮಳೆಗೆ ಮಾಲವಿ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದಬಂದಿದ್ದು, ಜಲಾಶಯದ 9ನೇ ಗೇಟ್‌ ದುರಸ್ತಿಯಾಗದೆ, ನೀರು ಸಂಗ್ರಹಣೆಗೆ ಹಾಕಲಾಗಿದ್ದ ಒಡ್ಡು ಒಡೆದಿದೆ. ಇದರಿದ ಬಹುಪಾಲು ನೀರು ವ್ಯರ್ಥವಾಗಿ ಹರಿದು ಹೋಗಿದೆ.

ಜಲಮೂಲಗಳಿಂದ ಒಟ್ಟು 2ಟಿಎಂಸಿಯಷ್ಟು ನೀರು ಸಂಗ್ರಹವಾಗುವ ಜಲಾಶಯದಿಂದ ಸುತ್ತಲಿನ ಹಲವು ಗ್ರಾಮಗಳಲ್ಲಿಅಂತರ್ಜಲ ಹೆಚ್ಚುವ ಜತೆಗೆ 16ಸಾವಿರ ಎಕರೆ ಪ್ರದೇಶ ನೀರಾವರಿಯಾಗಲಿದೆ. ಆದರೆ, ಜಲಾಶಯದ 9ನೇ ಗೇಟ್‌ಗೆ ದುರಸ್ತಿಗೆ 4.02 ಕೋಟಿ ರೂ.ಅನುದಾನವಿದ್ದರೂ ವರ್ಷದಿಂದ ಬಳಕೆಯಾಗದಿರುವುದು, ದುರಸ್ತಿ ಕೈಗೆತ್ತಿಕೊಳ್ಳದಿರುವುದು ಸಮಸ್ಯೆಯ ಮೂಲವಾಗಿದೆ.

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನಲ್ಲಿರುವ ಮಾಲವಿ ಜಲಾಶಯವನ್ನು 1972 ರಲ್ಲಿ ನಿರ್ಮಿಸಲಾಗಿದೆ. ಜಲಾಶಯವು ಒಟ್ಟು 10 ಕ್ರೆಸ್ಟ್ ಗೇಟ್‌ಗಳನ್ನು ಹೊಂದಿದ್ದು, ಇದು ತಾಲ್ಲೂಕಿನ ನೀರಾವರಿಗೆ ಮತ್ತು ತುಂಗಭದ್ರಾ ಅಣೆಕಟ್ಟಿಗೆ ಪ್ರಮುಖ ನೀರಿನ ಮೂಲವಾಗಿದೆ.

ಕಳೆದ ಕೆಲವು ವರ್ಷಗಳಿಂದ, ಕ್ರೆಸ್ಟ್ ಗೇಟ್‌ಗಳನ್ನು ನವೀಕರಿಸಬೇಕೆಂದು ಆಡಳಿತ ಮಂಡಳಿಗೆ ರೈತರು ಮನವಿ ಮಾಡುತ್ತಲೇ ಬಂದಿದ್ದಾರೆ.

ಹಗರಿಬೊಮ್ಮನಹಳ್ಳಿಯ ಸೋಮಶೇಖರ್ ನಾಯಕ್ ಮಾತನಾಡಿ, ಕಳೆದ ಕೆಲವು ವರ್ಷಗಳಿಂದ ಕ್ರೆಸ್ಟ್ ಗೇಟ್‌ಗಳ ದುರಸ್ತಿಗಾಗಿ ರಾಜ್ಯ ಸರ್ಕಾರ ಮತ್ತು ವಿಜಯನಗರ ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹಿರಿಯ ಅಧಿಕಾರಿಯೊಬ್ಬರು ಪ್ರತಿಕ್ರಿಯೆ ನೀಡಿ, ಕ್ರೆಸ್ಟ್ ಗೇಟ್‌ಗಳಿಂದ ಹೊರಹರಿವಾಗುತ್ತಿಲ್ಲ. ಕ್ರೆಸ್ಟ್ ಗೇಟ್ ಸಂಬಂಧ ರಾಜ್ಯ ಸರ್ಕಾರಕ್ಕೆ ವರದಿ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ