ಮುಂದಿನ ವರ್ಷ ರಾಜ್ಯ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಚಿಸಲಾಗುವ ಮೈತ್ರಿಕೂಟದ ಆಕಾರ ಮತ್ತು ರೂಪದ ಬಗ್ಗೆ ಪಕ್ಷದ ಕೇಂದ್ರ ನಾಯಕತ್ವವು “ಸೂಕ್ತ ನಿರ್ಧಾರ” ತೆಗೆದುಕೊಳ್ಳುತ್ತದೆ ಎಂದು ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ ಹೇಳಿದ್ದಾರೆ. 2024ರಲ್ಲಿ ಎಐಎಡಿಎಂಕೆ ಬಿಜೆಪಿ ನೇತೃತ್ವದ ಎನ್ಡಿಎ ತೊರೆಯಲು ಅಣ್ಣಾಮಲೈ ಅವರೇ ಕಾರಣವೆಂದು ಪರಿಗಣಿಸಲಾಗಿತ್ತು. ಇದೀಗ ಮತ್ತೆ ಮೈತ್ರಿಯ ಮಾತುಕತೆ ನಡೆದ ನಂತರ ಅಣ್ಣಾಮಲೈ ಎಐಎಡಿಎಂಕೆ ಬಗೆಗಿನ ತಮ್ಮ ನಿಲುವು ಸಡಿಲಗೊಳಿಸಿದ್ದಾರೆ.
ದೆಹಲಿಯಲ್ಲಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನಡುವಿನ ಸಭೆಯ ನಂತರ ಬಿಜೆಪಿಯ ತಮಿಳುನಾಡು ಘಟಕದ ಮುಖ್ಯಸ್ಥ ಕೆ. ಅಣ್ಣಾಮಲೈ ಅವರು ಎಐಎಡಿಎಂಕೆ ಬಗ್ಗೆ ತಮ್ಮ ನಿಲುವನ್ನು ಮೃದುಗೊಳಿಸಿದ್ದಾರೆ ಎನ್ನಲಾಗಿದೆ. ಬಿಜೆಪಿ ಮತ್ತು ಎಐಎಡಿಎಂಕೆ ನಡುವಿನ ಮೈತ್ರಿಯ ಬಗ್ಗೆ ಕೇಳಿದಾಗ ಅಣ್ಣಾಮಲೈ ಮೌನವಾಗಿದ್ದರು. “ನಮ್ಮ ಗೃಹ ಸಚಿವರು ಮಾತನಾಡಿದ್ದಾರೆ. ಈ ವಿಷಯದ ಬಗ್ಗೆ ಅವರ ಪ್ರತಿಕ್ರಿಯೆಯೇ ಅಂತಿಮ” ಎಂದಿದ್ದರು.