Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಲನಚಿತ್ರಗಳಲ್ಲಿ ಮಿತಿಮೀರಿದ ಅಶ್ಲೀಲತೆ-ಹಿಂಸೆ ಎಐಡಿಎಸ್‌ಓ ಖಂಡನೆ 


ಬಳ್ಳಾರಿ,ಮಾ.20..: ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ಸಾಂಸ್ಕೃತಿಕ ಅವನತಿ ಎದ್ದು ಕಾಣುತ್ತಿದ್ದು, ಅದರಲ್ಲೂ ವಿಶೇಷವಾಗಿ ‘ಕೆ.ಡಿ.' ಚಿತ್ರದ ಅಶ್ಲೀಲ ಸಾಹಿತ್ಯದ ಹಾಡು ಹಾಗೂ ‘ಟಾಕ್ಸಿಕ್' ಚಿತ್ರದ ಟೀಸರ್‌ನಲ್ಲಿ ಪ್ರದರ್ಶಿತವಾಗಿರುವ ಅಶ್ಲೀಲತೆ ಮತ್ತು ಹಿಂಸೆಯ ಅಬ್ಬರವು ವಿದ್ಯಾರ್ಥಿ ಸಮುದಾಯ ಹಾಗೂ ಸಮಾಜದ ಮೇಲೆ ಅತ್ಯಂತ ಗಂಭೀರವಾದ ದುಷ್ಪರಿಣಾಮ ಬೀರುತ್ತಿದೆ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ ಬಳ್ಳಾರಿ ಜಿಲ್ಲಾ ಸಮಿತಿಯು ತೀವ್ರ ಆತಂಕ ವ್ಯಕ್ತಪಡಿಸುತ್ತದೆ ಎಂದು ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವ್ಯವಸ್ಥೆಯ ಲೋಪದೋಷಗಳನ್ನು ಪ್ರಶ್ನಿಸುವ ಅಥವಾ ಜನಪರ ಆಶಯಗಳನ್ನು ಹೊಂದಿರುವ ಚಿತ್ರಗಳ ಮೇಲೆ ಸಣ್ಣ ಕಾರಣಗಳಿಗಾಗಿ ಕತ್ತರಿ ಪ್ರಯೋಗಿಸುವ ಪ್ರಾದೇಶಿಕ ಸೆನ್ಸಾರ್ ಮಂಡಳಿಯು, ಇಂತಹ ಕೆಳಮಟ್ಟದ ಸಾಹಿತ್ಯ ಮತ್ತು ಮಿತಿಮೀರಿದ ರಕ್ತಪಾತದ ದೃಶ್ಯಗಳಿಗೆ ಅನುಮತಿ ನೀಡುತ್ತಿರುವುದು ಅದರ ದ್ವಂದ್ವ ನೀತಿಯನ್ನು ಎತ್ತಿ ತೋರಿಸುತ್ತದೆ. ಸಮಾಜವನ್ನು ಸುಧಾರಿಸಬೇಕಾದ ಮಾಧ್ಯಮಗಳು ಕೇವಲ ವ್ಯಾಪಾರೀಕರಣದ ಬೆನ್ನತ್ತಿ, ಮಹಿಳೆಯರನ್ನು ಕೇವಲ ಭೋಗದ ವಸ್ತುವಾಗಿ ಬಿಂಬಿಸುವ ಅಶ್ಲೀಲ ಹಾಡುಗಳನ್ನು ಹಾಗೂ ಹಿಂಸೆಯನ್ನು ವೈಭವೀಕರಿಸುವ ದೃಶ್ಯಗಳನ್ನು ಸಾರ್ವಜನಿಕವಾಗಿ ಬಿತ್ತರಿಸುತ್ತಿವೆ.

ಸಿನಿಮಾಗಳಲ್ಲಿ ತೋರಿಸಲಾಗುವ ಇಂತಹ ಪ್ರಚೋದನಾಕಾರಿ ದೃಶ್ಯಗಳಿಂದಾಗಿ ಇಂದಿನ ಎಳೆಯ ಮನಸ್ಸುಗಳು ದಾರಿ ತಪ್ಪುತ್ತಿವೆ. ಇತ್ತೀಚೆಗೆ ಬಳ್ಳಾರಿಯ ಹಾಸ್ಟೆಲ್‌ನಲ್ಲಿ ನಡೆದ ವಿದ್ಯಾರ್ಥಿಯ ಕೊಲೆ ಪ್ರಕರಣ ಹಾಗೂ ಶಾಲಾ ಮಕ್ಕಳು ಗಂಭೀರ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಸಿನಿಮಾ ಪ್ರೇರಿತ ವಿಕೃತ ಸಂಸ್ಕೃತಿಯ ಫಲಿತಾಂಶವೇ ಆಗಿದೆ. ವಿದ್ಯಾರ್ಥಿಗಳಲ್ಲಿ ನೈತಿಕತೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವ ಬದಲಿಗೆ, ಇಂದಿನ ಸಿನಿಮಾಗಳು ಅವರಲ್ಲಿ ಕ್ರೌರ್ಯ ಮತ್ತು ಲೈಂಗಿಕ ವಿಕೃತಿಯನ್ನು ಬಿತ್ತುತ್ತಿವೆ. ಈ ಎಲ್ಲಾ ಬೆಳವಣಿಗೆಗಳಿಗೆ ಸೆನ್ಸಾರ್ ಮಂಡಳಿಯ ಬೇಜವಾಬ್ದಾರಿತನ ಸಹ ಒಂದು ಕಾರಣವಾಗಿದೆ.

ಜಿಲ್ಲಾ ಸಮಿತಿಯು ಸೆನ್ಸಾರ್ ಮಂಡಳಿಯನ್ನು ತೀವ್ರವಾಗಿ ಖಂಡಿಸುತ್ತದೆ ಮತ್ತು ಸರ್ಕಾರವು ಕೂಡಲೇ ಮಧ್ಯಪ್ರವೇಶಿಸಿ ಇಂತಹ ಅಶ್ಲೀಲ ಹಾಗೂ ಹಿಂಸಾತ್ಮಕ ಸಿನಿಮಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತದೆ. ವಿದ್ಯಾರ್ಥಿ ಸಮುದಾಯವು ಇಂತಹ ಸಂಸ್ಕೃತಿಹೀನ ಸಿನಿಮಾಗಳನ್ನು ತಿರಸ್ಕರಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆAದು ಕರೆ ನೀಡಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ