Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳಾ ಒಳ ಕ್ರೀಡಾಂಗಣದ ಸ್ಥಾಪನೆಗಾಗಿ ಎಐಎಂಎಸ್‌ಎಸ್‌ನಿAದ ಮನವಿ 

ಬಳ್ಳಾರಿ:16: ಎಐಎಂಎಸ್‌ಎಸ್‌ನ ನಿಯೋಗವೊಂದು ಅಪರ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮಹಿಳಾ ಒಳ ಕ್ರೀಡಾಂಗಣವನ್ನು ನಿರ್ಮಿಸುವಂತೆ ಮನವಿ ಮಾಡಿತು. ಈ ಸಂದರ್ಭದಲ್ಲಿ ಎಐಎಂಎಸ್‌ಎಸ್ ನ ಜಿಲ್ಲಾಧ್ಯಕ್ಷರಾದ ಶ್ರೀಮತಿ ಈಶ್ವರಿ ಕೆ. ಎಂ. ಮಾತನಾಡಿ "ಇತ್ತೀಚಿಗೆ ಜಿಲ್ಲಾಡಳಿತವು ಅನಧಿಕೃತ ಒತ್ತುವರಿ ಜಮೀನುಗಳನ್ನು ತೆರವುಗೊಳಿಸಿ ನಂತರ ಅವುಗಳನ್ನು ಸರ್ಕಾರಿ ಉದ್ದೇಶಗಳಿಗೆ  ಸರ್ಕಾರದ ಇಲಾಖೆಗಳ ಅಡಿಯಲ್ಲಿ ಜನರಿಗೆ ಅನುಕೂಲವಾಗುವ ಕಾರ್ಯಕ್ರಮ ರೂಪಿಸಿರುವ ಬಗ್ಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯ ಪತ್ರ ಬಿಡುಗಡೆ ಮಾಡಿದೆ. ಬಳ್ಳಾರಿ ತಾಲೂಕು,  ಬಳ್ಳಾರಿ ನಗರದ ವಾರ್ಡ್ ಸಂಖ್ಯೆ ೨೪, ಮುಸೋನಿಕ್ ಹಾಲ್, ವಿಸ್ತೀರ್ಣ ೪.೪೪ ಎಕರೆ ಜಮೀನಿನಲ್ಲಿ ೪ ಎಕರೆ ಜಮೀನನ್ನು ಮಹಿಳೆಯರ ಒಳ ಕ್ರೀಡಾಂಗಣ ಉದ್ದೇಶಕ್ಕೆ ಮೀಸಲಿಟ್ಟಿರುವುದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಬಳ್ಳಾರಿ ಜಿಲ್ಲಾ ಸಮಿತಿಯು ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ.  
ಉದ್ದೇಶಿತ ಒಳ ಕ್ರೀಡಾಂಗಣದ ನಿರ್ಮಾಣವನ್ನು ಪ್ರಾರಂಭಿಸಬೇಕು. ಜೊತೆಗೆ ಈಜುಕೊಳವನ್ನು ನಿರ್ಮಿಸಬೇಕು. ಜೊತೆಯೆಲ್ಲೇ ಮಹಿಳೆಯರಿಗಾಗಿ ಜಿಮ್ ನ ವ್ಯವಸ್ಥೆ ಮಾಡಬೇಕು. ಇದಕ್ಕಾಗಿ ಅಗತ್ಯವಿರುವ ಎಲ್ಲಾ ಕ್ರೀಡಾ ಸಾಮಗ್ರಿಗಳನ್ನು ಹಾಗೂ ವ್ಯಾಯಾಮ ಉಪಕರಣಗಳನ್ನು ಒದಗಿಸಿ ನಗರದ ಮಹಿಳೆಯರಿಗೆ ಅನುಕೂಲ ಮಾಡಿ ಕೊಡಬೇಕು. ಹಾಗೆಯೇ ಇದೇ ಆವರಣದಲ್ಲಿ ಮಹಿಳೆಯರಿಗಾಗಿ ಉದ್ಯಾನವನ, ಸಭಾಂಗಣ ಮತ್ತು ಗ್ರಂಥಾಲಯವನ್ನು ಸ್ಥಾಪಿಸಿದಲ್ಲಿ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತವು ಕ್ರಮಗಳನ್ನು ಕೈಗೊಳ್ಳಬೇಕು" ಎಂದು ಮನವಿ ಮಾಡಿದರು. 
ನಿಯೋಗದಲ್ಲಿ ಸಂಘಟನೆಯ ಪದಾಧಿಕಾರಿಗಳಾದ ವಿಜಯಲಕ್ಷ್ಮಿ, ಸೌಮ್ಯ, ವಿದ್ಯಾ, ರೇಖಾ, ಅಭಿಲಾಷ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ