LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಐನಾಪುರ

ಐನಾಪುರ-ಕ್ಷೇತ್ರದ ರಸ್ತೆ, ಕುಡಿಯುವ ನೀರು, ಶಾಲಾ ಕಟ್ಟಡ, ಗಟಾರೀಕರಣ ಕಾಮಗಾರಿ ಗಳಂತಹ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಿ ಅನುದಾನಗಳನ್ನು ಬಿಡುಗಡೆಗೊಳಿಸುವುದಾಗಿ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. 

       ಅವರು ಗುರುವಾರ ದಿನಾಂಕ 16 ರಂದು ಐನಾಪುರದ ಇಂದಿರಾನಗರ ಬಡಾವಣೆಯಲ್ಲಿ ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ 50 ಲಕ್ಷ ರೂ ಸಿಸಿ ರಸ್ತೆ ಹಾಗೂ ಗಠಾರಿಕರಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡುತ್ತಾ, ಕಾಂಗ್ರೆಸ್ ಪಕ್ಷವು ಜನರ ಪರವಾಗಿ ಕೆಲಸ ಮಾಡುತ್ತಿದ್ದು ಗ್ಯಾರಂಟಿ ಯೋಜನೆಗಳಿಂದ ಸಾಕಷ್ಟು ಜನರಿಗೆ ಲಾಭವಾಗಿದೆ ಇದನ್ನು ಇದೇ ರೀತಿ ಮುಂದುವರಿಸಿಕೊಂಡು ಹೋಗುತ್ತೇವೆ , ಡಾ ಅಂಬೇಡ್ಕರ್ ರವರು ಎಲ್ಲರಿಗೂ ಸಮಾನ ಹಕ್ಕು ಕೊಟ್ಟಿದ್ದಾರೆ ತಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಿ ಸಮಾಜದ ಮುಖ್ಯ ವಾಹಿನಿಗೆ ತರಬೇಕೆಂದು ಕರೆ ನೀಡಿದರು. 
     ಈ ಸಂದರ್ಭದಲ್ಲಿ ರಮೇಶ್ ಸಿಂದಗಿ, ಮುಖ್ಯಾಧಿಕಾರಿ ಮಹಾಂತೇಶ್ ಕೌಲಾಪುರೆ, ಸಚಿನ್ ಬುಟಾಳಿ, ಉಮೇಶ್ ಪಾಟೀಲ್, ಸುದರ್ಶನ್ ಜಂತನ್ನವರ್, ಸುರೇಶ್ ಗಾಣಿಗೇರ್, ದಾದಾ ಜಂತಣ್ಣವರ್, ಅಭಿಯಂತರರಾದ ಸದಾಶಿವ್ ಗುರವ್, ವೀರೇಶ್ ಬಿಸ್ತಗೌಡ, ಸಿದ್ದಾರೂಡ ನ್ಯಾಮಗೌಡ, ಶುಭಂ ಪಾಟೀಲ್, ರಮೇಶ್ ಪೂಜಾರಿ, ಪರಶುರಾಮ ನಾಯಕ್, ಸಹದೇವ ನಾಯಕ್, ಉದಯ್ ನಾಯಕ್, ಹನುಮಂತ ನಾಯಕ್, ಸತ್ಯಪ್ಪ ನಾಯಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಫೋಟೋ ಶೀರ್ಷಿಕೆ 16 ಐನಾಪುರ 1 ಐನಾಪುರ್ ಪಟ್ಟಣದ ಇಂದಿರಾನಗರ ಬಡಾವಣೆಯಲ್ಲಿ ಸಿಸಿ ರಸ್ತೆ ಗಠಾರಿಕರಣ ಕಾಮಗಾರಿಗೆ ಚಿಕ್ಕೋಡಿ ಸಂಸದರಾದ ಪ್ರಿಯಾಂಕ ಜಾರಕಿಹೊಳಿ ಗುದ್ದಲಿ ಪೂಜೆ ನೆರವೇರಿಸಿದರು, ಈ ವೇಳೆ ರಮೇಶ್ ಸಿಂದಗಿ, ಮಹಾಂತೇಶ್ ಕೌಲಾಪುರೆ, ಉಮೇಶ್ ಪಾಟೀಲ್, ಸುದರ್ಶನ ಜಂತನ್ನವರ್ ಅವರನ್ನು ಚಿತ್ರದಲ್ಲಿ ಕಾಣಬಹುದು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಂಗ್ರಹಿತ ಅಧಿಕೃತ ಲಿಂಗಾಯತ ಧರ್ಮದ ಮಾಹಿತಿಯನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಿ ಸಾರ್ವಜನಿಕರಿಗೆ ಹಂಚಲಾಗುವುದು : ಡಾ.ಎಸ್ ಎಮ್ ಜಾಮದಾರಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಮಹಾತ್ಮ ಗಾಂಧಿ ಪುತ್ಥಳಿಗೆ ಪೂಜೆಅಥಣಿ ಕ್ಷೇತ್ರಕ್ಕೆ ಮತ್ತೊಂದು ಹೆಮ್ಮೆಯ ಕ್ಷಣ: ಲಕ್ಷ್ಮಣ ಸವದಿಗೆ ಸಹಕಾರ ಹಾಗೂ ಕೃಷಿ ಮಾರುಕಟ್ಟೆ ಖಾತೆನೀರು ಹೇಗೆ ಬಿಡಿಸಿಕೊಳ್ಳಬೇಕೆಂಬುದು ನಮಗೆ ಗೊತ್ತಿದೆ - ನಡಹಳ್ಳಿಆ.೧೪ರಂದು ’ಉತ್ಸವ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿ’ ಉದ್ಘಾಟನೆವಿದ್ಯಾರ್ಥಿ ದಶೆಯಲ್ಲೇ ವಿವಿಧ ಕೌಶಲ ಮೈಗೂಡಿಸಿಕೊಂಡರೆ ಭವಿಷ್ಯ ಭದ್ರ: ಸಂಗಮೇಶ ಹಳ್ಳೂರದೆಹಲಿ ಹೈಕೋರ್ಟ್ ಮಾಜಿ ನ್ಯಾಯಮೂರ್ತಿ ಯಶವಂತ್ ವರ್ಮಾ ಮೇಲಿನ ಮೂರೂ ದೋಷಾರೋಪಗಳು ಸಾಬೀತು: ಸಂಸದೀಯ ತನಿಖಾ ಸಮಿತಿಯ ಸ್ಫೋಟಕ ವರದಿಇಂಡಿ: ಹಿರೇಮಸಳಿ ಸರ್ಕಾರಿ ಉರ್ದು ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಉಚಿತ ಸ್ಕಾರ್ಫ್ ವಿತರಣೆ; ಹೊಸೂರು ಕುಟುಂಬದ ಶೈಕ್ಷಣಿಕ ಕಾಳಜಿಗೆ ಶ್ಲಾಘನೆನೂತನ ಸಚಿವರಿಗೆ ಖಾತೆ ಹಂಚಿಕೆ ಅಂತಿಮ, ರಾಜಪಾಲರ ಅನುಮೋದನೆಗೆ ಕಾಯುತ್ತಿರುವ ಸಚಿವರುಕೆಪಿಎಸ್‌ಸಿ ಅಕ್ರಮ ಆರೋಪದ ಬಿಸಿ: ಪರೀಕ್ಷಾ ನಿಯಂತ್ರಕರ ಎತ್ತಂಗಡಿ, ಆಯೋಗಕ್ಕೆ ಹೊಸ ಐಎಎಸ್ ಅಧಿಕಾರಿಗಳ ಸರಪಳಿ