Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಬಾಲದಲ್ಲಿ ವಾಯುದಾಳಿ ಎಚ್ಚರಿಕೆ: ವಿದ್ಯುತ್ ವ್ಯತ್ಯಯ, ಮೇ 10 ರವರೆಗೆ ಶಿಕ್ಷಣ ಸಂಸ್ಥೆಗಳು ಬಂದ್

ಅಂಬಾಲ (ಹರಿಯಾಣ) : ಆಪರೇಷನ್ ಸಿಂಧೂರ್ ನಂತರ, ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿದೆ. ಗುರುವಾರ, ಪಾಕಿಸ್ತಾನವು ಡ್ರೋನ್‌ಗಳು ಮತ್ತು ಕ್ಷಿಪಣಿಗಳೊಂದಿಗೆ ಭಾರತದ ಮೇಲೆ ದಾಳಿ ಮಾಡಲು ಪ್ರಯತ್ನಿಸಿತ್ತು. ಆದರೆ ಭಾರತವು S-400 ವಾಯು ರಕ್ಷಣಾ ವ್ಯವಸ್ಥೆಯ ಮೂಲಕ ಈ ದಾಳಿಗಳನ್ನು ವಿಫಲಗೊಳಿಸಿದೆ. ಇದರ ನಂತರ, ಗಡಿ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಇದರ ಮಂದುವರೆದ ಭಾಗವಾಗಿ, ಪಂಜಾಬ್ - ಹರಿಯಾಣ ಮತ್ತು ಚಂಡೀಗಢದಲ್ಲಿಯೂ ಎಚ್ಚರಿಕೆ ನೀಡಲಾಗಿದೆ.


ಅಂಬಾಲದಲ್ಲಿ ಸೈರನ್ ಎಚ್ಚರಿಕೆ: ಶುಕ್ರವಾರ ಬೆಳಗ್ಗೆ, ವಾಯುಪಡೆಯು ಚಂಡೀಗಢ ಮತ್ತು ಹರಿಯಾಣದ ಅಂಬಾಲದಲ್ಲಿ ಸಂಭಾವ್ಯ ಡ್ರೋನ್ ದಾಳಿಯ ಬಗ್ಗೆ ಎಚ್ಚರಿಕೆ ನೀಡಿದೆ. ಅದರ ನಂತರ ಸೈರನ್ ಮೊಳಗಿಸಲಾಗಿದೆ. ಈ ಸಮಯದಲ್ಲಿ ಜನರು ಮನೆಯಲ್ಲಿಯೇ ಇರಬೇಕೆಂದು ಮನವಿ ಮಾಡಲಾಗಿತ್ತು.


''ಜನರು ತಮ್ಮ ಮನೆಗಳಲ್ಲಿಯೇ ಇರಬೇಕು. ಉದ್ಯಾನವನದಲ್ಲಿ ಅಥವಾ ಬೀದಿಯಲ್ಲಿ ಯಾರೂ ನಿಲ್ಲಬಾರದು. ಇದನ್ನು ಹೊರತುಪಡಿಸಿ, ಮನೆಯ ಬಾಲ್ಕನಿ ಅಥವಾ ಟೆರೇಸ್‌ನಲ್ಲಿ ಯಾರೂ ನಿಲ್ಲಬಾರದು. ಯಾರೊಬ್ಬರ ಮನೆ ದೂರದಲ್ಲಿದ್ದರೆ, ಅವರು ಹತ್ತಿರದ ಕಟ್ಟಡಕ್ಕೆ ಹೋಗಬೇಕು" ಎಂದು ಇಲ್ಲಿನ ಸರ್ಕಾರ ಹೇಳಿದೆ.


ಜನರು ಮನೆಯೊಳಗೆ ಇರುವಂತೆ ಮನವಿ : ಸುಮಾರು ಅರ್ಧ ಗಂಟೆಯ ನಂತರ, ವಾಯುಪಡೆಯು ಯಾವುದೇ ವಾಯುದಾಳಿ ಎಚ್ಚರಿಕೆ ಇಲ್ಲ ಎಂದು ತಿಳಿಸಿದೆ. ಆದರೆ ಜನರು ಮನೆಯೊಳಗೆ ಇರುವಂತೆ ಮನವಿ ಮಾಡಿದೆ. ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ನಡೆಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅಂಬಾಲ ಆಡಳಿತವು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲು ನಿರ್ಧರಿಸಿದೆ. ಅಂಬಾಲಾದಲ್ಲಿ ಮೇ 10 ರವರೆಗೆ ಶಿಕ್ಷಣ ಸಂಸ್ಥೆಗಳು ಬಂದ್ ಆಗಿರಲಿವೆ.


ಇಂದು ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ವಿದ್ಯುತ್ ಕಡಿತ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು, ಇಂದು ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಅಂಬಾಲದಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ. ಈ ಸಮಯದಲ್ಲಿ ನಗರದ ಲೈಟ್​ಗಳನ್ನು ಆಫ್ ಮಾಡಲಾಗುತ್ತದೆ. ಆದ್ದರಿಂದ, ಜನರು ತಮ್ಮ ಪ್ರಮುಖ ಕೆಲಸವನ್ನು ಹಗಲಿನಲ್ಲಿಯೇ ಪೂರ್ಣಗೊಳಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ. ನಿಮ್ಮ ಫೋನ್ ಚಾರ್ಜ್ ಆಗಿರಲಿ. ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ. ಸೈರನ್ ಸದ್ದು ಮಾಡಿದ ತಕ್ಷಣ ನಿಮ್ಮ ಮನೆಯೊಳಗೆ ಹೋಗಿ ಎಂದು ತಿಳಿಸಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ