Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏರ್​ ಇಂಡಿಯಾ ವಿಮಾನ ದುರಂತ: ಪವಾಡ ಸದೃಶ ರೀತಿಯಲ್ಲಿ ಓರ್ವ ಪ್ರಯಾಣಿಕ ಬಚಾವ್

ಅಹಮದಾಬಾದ್: ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 242 ಪ್ರಯಾಣಿಕರ ಪೈಕಿ ಓರ್ವ ಪವಾಡಸದೃಶವಾಗಿ ಸಾವಿನ ದವಡೆಯಿಂದ ಪಾರಾಗಿರುವ ಮಾಹಿತಿ ಲಭ್ಯವಾಗಿದೆ. ಅಹಮದಾಬಾದ್​ನಿಂದ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಮೇಘನಿ ನಗರದಲ್ಲಿರುವ ಬಿಜೆ ಮೆಡಿಕಲ್​ ಕಾಲೇಜಿನ ಹಾಸ್ಟೆಲ್​ ಕಟ್ಟಡದ ಮೇಲೆ ಏಕಾಏಕಿ ಪತನಗೊಂಡಿದ್ದು, ದುರಂತಕ್ಕೀಡಾದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಪೈಕಿ ಓರ್ವ ಪವಾಡಸದೃಶವಾಗಿ ಸಾವಿನ ದವಡೆಯಿಂದ ಪಾರಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.


ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಅಹಮದಾಬಾದ್ ಪೊಲೀಸ್ ಆಯುಕ್ತ ಜಿ.ಎಸ್.ಮಲಿಕ್ ಮಾಹಿತಿ ನೀಡಿದ್ದಾರೆ. ಘಟನೆ ಕುರಿತು ದೂರವಾಣಿ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು, "ಸೀಟ್​ ನಂಬರ್​ 11A ನಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು ಸಾವಿನ ದವಡೆಯಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಸಾವಿನ ಸಂಖ್ಯೆಯ ಬಗ್ಗೆ ಸದ್ಯಕ್ಕೆ ಏನನ್ನೂ ಹೇಳಲು ಸಾಧ್ಯವಿಲ್ಲ. ವಿಮಾನವು ವಸತಿ ಪ್ರದೇಶದಲ್ಲಿ ಅಪಘಾತಕ್ಕೀಡಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು" ಎಂದು ಹೇಳಿದ್ದಾರೆ.

ಪವಾಡಸದೃಶವಾಗಿ ಬದುಕುಳಿದ ಪ್ರಯಾಣಿಕರನ್ನು ಬ್ರಿಟಿಷ್ ಪ್ರಜೆ ವಿಶ್ವಸ್‌ಕುಮಾರ್ ರಮೇಶ್ ಎಂದು ಗುರುತಿಸಲಾಗಿದೆ. ಮುಖ ಮತ್ತು ಇತರಡೆ ಗಾಯಗಳಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದೃಶ್ಯಗಳು ಕಂಡು ಬಂದಿವೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


 ಘಟನಾ ಸ್ಥಳಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪರಿಸ್ಥಿತಿಯನ್ನು ಅವಲೋಕಿಸಿದರು. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಮತ್ತು ಗುಜರಾತ್ ಗೃಹ ಸಚಿವ ಹರ್ಷ ಸಾಂಘವಿ ಕೂಡ ಅವರೊಂದಿಗೆ ಇದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ