Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡಕ್ಕೆ ಎಂಟ್ರಿ ಕೊಟ್ಟ ಐಶ್ವರ್ಯ ರಾಜೇಶ್ 

ದಕ್ಷಿಣ ಭಾರತದ ಖ್ಯಾತ ನಟಿ ಐಶ್ವರ್ಯ ರಾಜೇಶ್ ಉತ್ತರಕಾಂಡ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾರೆ. ಉತ್ತರಕಾಂಡ ಒಂದು ಬಹು ನಿರೀಕ್ಷಿತ ಚಿತ್ರವಾಗಿದ್ದು, ಚಿತ್ರದಲ್ಲಿ ಸೆಂಚುರಿ ಸ್ಟಾರ್  ಡಾ. ಶಿವರಾಜ್ ಕುಮಾರ್ ಮತ್ತು ನಟರಾಕ್ಷಸ ಡಾಲಿ‌ ಧನಂಜಯ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.


     ನಟಿ ಐಶ್ವರ್ಯ ಚಿತ್ರದಲ್ಲಿ ಧನಂಜಯ ಅವರ‌ ಜೋಡಿಯಾಗಿ "ದುರ್ಗಿ" ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ದಿ ಗ್ರೇಟ್ ಇಂಡಿಯನ್ ಕಿಚನ್,  ದಿ ವರ್ಲ್ಡ್ ಫೇಮಸ್ ಲವರ್, ವಡಾ‌ ಚೆನ್ನೈ, ಕಾಕ ಮುತ್ತೈ (ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ), ಜೋಮೋಂಟೇ ಸುವಿಶೇಷಂಗಳ್ , ಟಕ್ ಜಗದೀಶ್, ವಾನಂ ಕೊಟ್ಟಾಟುಂ ಸೇರಿದಂತೆ ಹಲವಾರು ಯಶಸ್ವಿ ಚಿತ್ರಗಳಲ್ಲಿ ಐಶ್ವರ್ಯ ತಮ್ಮ ಅಭಿನಯದ ಮೂಲಕ ಛಾಪನ್ನು ಮೂಡಿಸಿ ಇದೀಗ ಉತ್ತರಕಾಂಡಕ್ಕೆ ಎಂಟ್ರಿ ನೀಡಿದ್ದಾರೆ.


     ಪ್ರಸ್ತುತ ಚಿತ್ರದ ಪ್ರಥಮ ಶೆಡ್ಯೂಲ್ ಚಿತ್ರೀಕರಣ ವಿಜಯಪುರದಲ್ಲಿ ನಡೆಯುತ್ತಿದ್ದು, ಈ ಆಕ್ಷನ್ ಡ್ರಾಮಾಗೆ ರೋಹಿತ್ ಪದಕಿ ಆಕ್ಷನ್ ಕಟ್ ಹೇಳಿದ್ದಾರೆ.ಚಿತ್ರವನ್ನು ಕಾರ್ತಿಕ್ ಗೌಡ ಮತ್ತು ಯೋಗಿ‌ ಜಿ ರಾಜ್ ಕೆ ಆರ್ ಜಿ ಸ್ಟೂಡಿಯೋಸ್‌ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಿದ್ದಾರೆ.


     ಮಲಯಾಳಂ ನಟ ವಿಜಯ್ ಬಾಬು, ರಂಗಾಯಣ ರಘು, ಚೈತ್ರ ಜೆ ಆಚಾರ್, ಉಮಾಶ್ರೀ, ಯೋಗರಾಜ್ ಭಟ್, ದಿಗಂತ್ ಮಂಚಾಲೆ, ಗೋಪಾಲಕೃಷ್ಣ ದೇಶಪಾಂಡೆ ಸೇರಿದಂತೆ ಬಹು ದೊಡ್ಡ ತಾರಾಬಳಗವನ್ನು ಚಿತ್ರ ಹೊಂದಿದೆ. ಬಾಲಿವುಡ್ ಗಾಯಕ ಹಾಗೂ ಸಂಗೀತ ಸಂಯೋಜಕ ಅಮಿತ್ ತ್ರಿವೇದಿ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿರುತ್ತಾರೆ ಹಾಗೂ ವಿಶ್ವಾಸ್‌ ಕಶ್ಯಪ್ ಪ್ರೊಡಕ್ಷನ್ ವಿನ್ಯಾಸ ಮಾಡಿರುತ್ತಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*