LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಕನ್ನಡಕ್ಕೆ ಎಂಟ್ರಿ ಕೊಟ್ಟ ಐಶ್ವರ್ಯ ರಾಜೇಶ್ 

ದಕ್ಷಿಣ ಭಾರತದ ಖ್ಯಾತ ನಟಿ ಐಶ್ವರ್ಯ ರಾಜೇಶ್ ಉತ್ತರಕಾಂಡ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾರೆ. ಉತ್ತರಕಾಂಡ ಒಂದು ಬಹು ನಿರೀಕ್ಷಿತ ಚಿತ್ರವಾಗಿದ್ದು, ಚಿತ್ರದಲ್ಲಿ ಸೆಂಚುರಿ ಸ್ಟಾರ್  ಡಾ. ಶಿವರಾಜ್ ಕುಮಾರ್ ಮತ್ತು ನಟರಾಕ್ಷಸ ಡಾಲಿ‌ ಧನಂಜಯ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.


     ನಟಿ ಐಶ್ವರ್ಯ ಚಿತ್ರದಲ್ಲಿ ಧನಂಜಯ ಅವರ‌ ಜೋಡಿಯಾಗಿ "ದುರ್ಗಿ" ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ದಿ ಗ್ರೇಟ್ ಇಂಡಿಯನ್ ಕಿಚನ್,  ದಿ ವರ್ಲ್ಡ್ ಫೇಮಸ್ ಲವರ್, ವಡಾ‌ ಚೆನ್ನೈ, ಕಾಕ ಮುತ್ತೈ (ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ), ಜೋಮೋಂಟೇ ಸುವಿಶೇಷಂಗಳ್ , ಟಕ್ ಜಗದೀಶ್, ವಾನಂ ಕೊಟ್ಟಾಟುಂ ಸೇರಿದಂತೆ ಹಲವಾರು ಯಶಸ್ವಿ ಚಿತ್ರಗಳಲ್ಲಿ ಐಶ್ವರ್ಯ ತಮ್ಮ ಅಭಿನಯದ ಮೂಲಕ ಛಾಪನ್ನು ಮೂಡಿಸಿ ಇದೀಗ ಉತ್ತರಕಾಂಡಕ್ಕೆ ಎಂಟ್ರಿ ನೀಡಿದ್ದಾರೆ.


     ಪ್ರಸ್ತುತ ಚಿತ್ರದ ಪ್ರಥಮ ಶೆಡ್ಯೂಲ್ ಚಿತ್ರೀಕರಣ ವಿಜಯಪುರದಲ್ಲಿ ನಡೆಯುತ್ತಿದ್ದು, ಈ ಆಕ್ಷನ್ ಡ್ರಾಮಾಗೆ ರೋಹಿತ್ ಪದಕಿ ಆಕ್ಷನ್ ಕಟ್ ಹೇಳಿದ್ದಾರೆ.ಚಿತ್ರವನ್ನು ಕಾರ್ತಿಕ್ ಗೌಡ ಮತ್ತು ಯೋಗಿ‌ ಜಿ ರಾಜ್ ಕೆ ಆರ್ ಜಿ ಸ್ಟೂಡಿಯೋಸ್‌ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಿದ್ದಾರೆ.


     ಮಲಯಾಳಂ ನಟ ವಿಜಯ್ ಬಾಬು, ರಂಗಾಯಣ ರಘು, ಚೈತ್ರ ಜೆ ಆಚಾರ್, ಉಮಾಶ್ರೀ, ಯೋಗರಾಜ್ ಭಟ್, ದಿಗಂತ್ ಮಂಚಾಲೆ, ಗೋಪಾಲಕೃಷ್ಣ ದೇಶಪಾಂಡೆ ಸೇರಿದಂತೆ ಬಹು ದೊಡ್ಡ ತಾರಾಬಳಗವನ್ನು ಚಿತ್ರ ಹೊಂದಿದೆ. ಬಾಲಿವುಡ್ ಗಾಯಕ ಹಾಗೂ ಸಂಗೀತ ಸಂಯೋಜಕ ಅಮಿತ್ ತ್ರಿವೇದಿ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿರುತ್ತಾರೆ ಹಾಗೂ ವಿಶ್ವಾಸ್‌ ಕಶ್ಯಪ್ ಪ್ರೊಡಕ್ಷನ್ ವಿನ್ಯಾಸ ಮಾಡಿರುತ್ತಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ