Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಪತ್ತು ಸಂದರ್ಭದಲ್ಲಿ ಮುಂಜಾಗ್ರತಾ ಅರಿವು ಅಗತ್ಯ : ಅಜಯ್ ಕುಮಾರ್




ಬಳ್ಳಾರಿ,ಜ.22- ಯಾವುದೇ ವಿಪತ್ತುಗಳು ಸಂಭವಿಸಿದಾಗ ತತಕ್ಷಣ ಕೈಗೊಳ್ಳುವ ಮುಂಜಾಗ್ರತಾ ಕ್ರಮಗಳ ಅರಿವು ಹೊಂದಬೇಕು ಎಂದು ರಾಷ್ಟಿçÃಯ ವಿಪತ್ತು ನಿರ್ವಹಣಾ ತಂಡದ ಇನ್ಸ್ ಪೆಕ್ಟರ್ ಅಜಯ್ ಕುಮಾರ್ ಅವರು ಹೇಳಿದರು.
ಸಿರುಗುಪ್ಪ ತಾಲ್ಲೂಕಿನ ದೇಶನೂರು ಗ್ರಾಮದ ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಆಯೋಜಿಸಿದ್ದ ಅಣಕು ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದೇಶದಲ್ಲಿ 16 ಎನ್‌ಡಿಆರ್‌ಎಫ್ ತಂಡಗಳಿದ್ದು, ವಿಪತ್ತು ಸನ್ನಿವೇಶ ಎದುರಾದಾಗ ರಾಷ್ಟಿçÃಯ ವಿಪತ್ತು ನಿರ್ವಹಣಾ ತಂಡಗಳು ಸದಾ ಸಿದ್ಧರಿರುತ್ತಾರೆ. ಸಾರ್ವಜನಿಕರು ಸಹ ಅಗತ್ಯ ಸಹಕಾರ ನೀಡಬೇಕು ಎಂದರು.
ಜಿಲ್ಲಾಧಿಕಾರಿ ಕಚೇರಿಯ ಪ್ರಕೃತಿ ವಿಕೋಪ ಪರಿಣಿತ ಪರಮೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರವಾಹಕ್ಕೆ ತುತ್ತಾಗುವ ಗ್ರಾಮಗಳನ್ನು ಗುರುತಿಸಿದ್ದು, ಎನ್‌ಡಿಆರ್‌ಎಫ್ ತಂಡದ ಸದಸ್ಯರು ಪ್ರತಿ ವಿಪತ್ತುಗಳ ಕುರಿತು ಅರಿವು ಮೂಡಿಸುವರು. ವಿಪತ್ತುಗಳು ಸಂಭವಿಸಿದಾಗ ಸನ್ನದ್ಧಗೊಳಿಸಲು ಕೌಶಲ್ಯಗಳನ್ನು ಪ್ರಾತ್ಯಕ್ಷಿಕೆ ಮೂಲಕ ಅಭ್ಯಾಸ ಮಾಡಿಸುವರು ಹಾಗೂ ಪ್ರಥಮ ಚಿಕಿತ್ಸೆ, ಸಿಪಿಆರ್ ವಿಧಾನಗಳು ತಿಳಿಸುವರು. ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಹೇಳಿದರು.
ಎನ್‌ಡಿಆರ್‌ಎಫ್ ಸಿಬ್ಬಂದಿ ನಾಗರಾಜ್ ಮತ್ತು ತಂಡದ ಎಲ್ಲಾ ಸದಸ್ಯರು ಬೆಂಕಿ ಅವಘಡಗಳು, ಪ್ರವಾಹ, ಭೂಕಂಪ ಇತ್ಯಾದಿ ವಿಪತ್ತುಗಳ ಮುಂಜಾಗೃತೆ, ಸನ್ನದ್ಧತೆ ಬಗ್ಗೆ ತಿಳಿಸುತ್ತಾ ಕೆಲವು ಶಿಬಿರಾರ್ಥಿಗಳಿಂದ ಅಭ್ಯಾಸಿಸಿದರು.
ಈ ವೇಳೆ ಎನ್‌ಡಿಆರ್‌ಎಫ್ ಸಬ್ ಇನ್ಸ್ ಪೆಕ್ಟರ್ ಮುನ್ನಿಕೃಷ್ಣ, ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆಯ ಡಿಜಿಎಂ ರಾಜಬಾಬು, ಸಿರುಗುಪ್ಪ ತಾಲ್ಲೂಕು ಕಂದಾಯ ನಿರೀಕ್ಷಕ ಮಂಜುನಾಥ ಸೇರಿದಂತೆ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರು, ಅಂಗನವಾಡಿ ಕಾರ್ಯಕರ್ತೆಯರು, ಕಾರ್ಮಿಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ