Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಪತ್ತು ಸಂದರ್ಭದಲ್ಲಿ ಮುಂಜಾಗ್ರತಾ ಅರಿವು ಅಗತ್ಯ : ಅಜಯ್ ಕುಮಾರ್




ಬಳ್ಳಾರಿ,ಜ.22- ಯಾವುದೇ ವಿಪತ್ತುಗಳು ಸಂಭವಿಸಿದಾಗ ತತಕ್ಷಣ ಕೈಗೊಳ್ಳುವ ಮುಂಜಾಗ್ರತಾ ಕ್ರಮಗಳ ಅರಿವು ಹೊಂದಬೇಕು ಎಂದು ರಾಷ್ಟಿçÃಯ ವಿಪತ್ತು ನಿರ್ವಹಣಾ ತಂಡದ ಇನ್ಸ್ ಪೆಕ್ಟರ್ ಅಜಯ್ ಕುಮಾರ್ ಅವರು ಹೇಳಿದರು.
ಸಿರುಗುಪ್ಪ ತಾಲ್ಲೂಕಿನ ದೇಶನೂರು ಗ್ರಾಮದ ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಆಯೋಜಿಸಿದ್ದ ಅಣಕು ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದೇಶದಲ್ಲಿ 16 ಎನ್‌ಡಿಆರ್‌ಎಫ್ ತಂಡಗಳಿದ್ದು, ವಿಪತ್ತು ಸನ್ನಿವೇಶ ಎದುರಾದಾಗ ರಾಷ್ಟಿçÃಯ ವಿಪತ್ತು ನಿರ್ವಹಣಾ ತಂಡಗಳು ಸದಾ ಸಿದ್ಧರಿರುತ್ತಾರೆ. ಸಾರ್ವಜನಿಕರು ಸಹ ಅಗತ್ಯ ಸಹಕಾರ ನೀಡಬೇಕು ಎಂದರು.
ಜಿಲ್ಲಾಧಿಕಾರಿ ಕಚೇರಿಯ ಪ್ರಕೃತಿ ವಿಕೋಪ ಪರಿಣಿತ ಪರಮೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರವಾಹಕ್ಕೆ ತುತ್ತಾಗುವ ಗ್ರಾಮಗಳನ್ನು ಗುರುತಿಸಿದ್ದು, ಎನ್‌ಡಿಆರ್‌ಎಫ್ ತಂಡದ ಸದಸ್ಯರು ಪ್ರತಿ ವಿಪತ್ತುಗಳ ಕುರಿತು ಅರಿವು ಮೂಡಿಸುವರು. ವಿಪತ್ತುಗಳು ಸಂಭವಿಸಿದಾಗ ಸನ್ನದ್ಧಗೊಳಿಸಲು ಕೌಶಲ್ಯಗಳನ್ನು ಪ್ರಾತ್ಯಕ್ಷಿಕೆ ಮೂಲಕ ಅಭ್ಯಾಸ ಮಾಡಿಸುವರು ಹಾಗೂ ಪ್ರಥಮ ಚಿಕಿತ್ಸೆ, ಸಿಪಿಆರ್ ವಿಧಾನಗಳು ತಿಳಿಸುವರು. ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಹೇಳಿದರು.
ಎನ್‌ಡಿಆರ್‌ಎಫ್ ಸಿಬ್ಬಂದಿ ನಾಗರಾಜ್ ಮತ್ತು ತಂಡದ ಎಲ್ಲಾ ಸದಸ್ಯರು ಬೆಂಕಿ ಅವಘಡಗಳು, ಪ್ರವಾಹ, ಭೂಕಂಪ ಇತ್ಯಾದಿ ವಿಪತ್ತುಗಳ ಮುಂಜಾಗೃತೆ, ಸನ್ನದ್ಧತೆ ಬಗ್ಗೆ ತಿಳಿಸುತ್ತಾ ಕೆಲವು ಶಿಬಿರಾರ್ಥಿಗಳಿಂದ ಅಭ್ಯಾಸಿಸಿದರು.
ಈ ವೇಳೆ ಎನ್‌ಡಿಆರ್‌ಎಫ್ ಸಬ್ ಇನ್ಸ್ ಪೆಕ್ಟರ್ ಮುನ್ನಿಕೃಷ್ಣ, ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆಯ ಡಿಜಿಎಂ ರಾಜಬಾಬು, ಸಿರುಗುಪ್ಪ ತಾಲ್ಲೂಕು ಕಂದಾಯ ನಿರೀಕ್ಷಕ ಮಂಜುನಾಥ ಸೇರಿದಂತೆ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರು, ಅಂಗನವಾಡಿ ಕಾರ್ಯಕರ್ತೆಯರು, ಕಾರ್ಮಿಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ